ಬೆಳಗಾವಿ: ವಿದ್ಯಾರ್ಥಿಗಳಿಗೆ ಪೋಷಕರು ಮುಕ್ತವಾಗಿ ಅಧ್ಯಯನ ಮಾಡಲು ಬಿಡಬೇಕು ಎಂದು ಡಾ. ಆರತಿ ಪೋಷಕರಿಗೆ ಸಲಹೆ ನೀಡಿದರು.
ಇಂದು ನಗರದ ಮರಾಠಾ ಮಂದಿರದಲ್ಲಿ ನಡೆದ ಸೊಸೈಟಿ ದಿನಾಚಾರಣೆ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ದೇವರ ಸಮನಾರು ಶೈಕ್ಷಣಿಕ ಕ್ಷೇತ್ರದಲ್ಲಿ ಅವರಿಗೆ ಬೇಕಾದ ಕಲೆಯನ್ನು ಆಯ್ಕೆ ಮಾಡುವುದನ್ನು ಬಿಡಬೇಕು. ಪೋಷಕರು ಇದೇ ಕೋರ್ಸ್ ಮಾಡಿ ಎಂದು ಮಕ್ಕಳಲ್ಲಿ ಒತ್ತಡ ಹಾಕಬಾರದು ಎಂದರು.
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಸೌಲಭ್ಯದ ಜತೆಗೆ ಅವಕಾಶಗಳು ಇವೆ. ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಂಡು ಸಮಾಜಕ್ಕೆ ತಮ್ಮದೆಯಾದ ಕೊಡುಗೆ ನೀಡಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸೊಸೈಟಿಯ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು. ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು ಸಮಿತಿಯ ಅಧ್ಯಕ್ಷ ಆರ್.ಡಿ.ಶಾನಭಾಗ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.