ಧ್ವಜಾರೋಹಣ ಮಾಡಬೇಕಿದೆ, ಶಾಲೆ ಖಾಲಿ ಮಾಡಿ- ನಿರಾಶ್ರಿತರಿಗೆ ಪಿಡಿಒ ಅವಾಜ್

Public TV
1 Min Read
bgk

ಬೆಳಗಾವಿ: ಪರಿಹಾರ ಕೇಂದ್ರದಲ್ಲಿದ್ದ ನಿರಾಶ್ರಿತರಿಗೆ ಶಾಲೆ ಖಾಲಿ ಮಾಡಿ ಎಂದು ಧಮ್ಕಿ ಹಾಕಿರುವ ಆರೋಪವೊಂದು ಪಿಡಿಒ, ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪೊಲೀಸರ ವಿರುದ್ಧ ಕೇಳಿಬಂದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೋಳಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ನೂರಕ್ಕೂ ಅಧಿಕ ನಿರಾಶ್ರಿತರಿದ್ದು, ಈಗ ಅಗಸ್ಟ್ 15 ರಂದು ಧ್ವಜಾರೋಹಣ ಮಾಡಬೇಕಿದೆ ಇಂದು ಶಾಲೆ ಬಿಡುವಂತೆ ಅಧಿಕಾರಿಗಳು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.

BLG FLOOD

ಅಧಿಕಾರಿಗಳ ಧಮ್ಕಿಯಿಂದ ಮನೆ ಕಳೆದುಕೊಂಡವರು ಕಂಗಾಲಾಗಿದ್ದು, ಎಲ್ಲಿಗೆ ಹೋಗಬೇಕು ಎಂದು ದಿಕ್ಕೆ ತೋಚದಂತಾಗಿ ಕಣ್ಣೀರಿಡುತ್ತಿದ್ದಾರೆ. ಸರ್ಕಾರದಿಂದ 3,800 ಚೆಕ್ ಕೊಟ್ಟು ಈಗ ಜಾಗ ಖಾಲಿ ಮಾಡಿಸುತ್ತಿರುವ ಪಿಡಿಒ ಮತ್ತು ಪೊಲೀಸರ ವಿರುದ್ಧ ನಿರಾಶ್ರಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *