ಪತ್ನಿಯನ್ನು ಹೊಡೆದು ಕೊಂದು, ಬಾಯಲ್ಲಿ ವಿಷ ಹಾಕಿ ಸುಳ್ಳು ಹೇಳ್ದ

Public TV
1 Min Read
Still 1

ಬೆಳಗಾವಿ: ವರದಕ್ಷಿಣೆಗಾಗಿ ಗಂಡನೊಬ್ಬ ಹೆಂಡತಿಯನ್ನು ಹೊಡೆದು ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಿ ಅಂಗಡಿ (20) ಮೃತ ದುರ್ದೈವಿ. ಪತ್ನಿಯನ್ನು ಹೊಡೆದು ಸಾಯಿಸಿ ನಂತರ ವಿಷ ಬಾಯಲ್ಲಿ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಿಸಲು ಪತಿ ಬಸವರಾಜ್ ಮತ್ತು ಕುಟುಂಬಸ್ಥರು ಯತ್ನಿಸಿದ್ದಾರೆ ಎಂದು ಹೇಳಾಲಾಗಿದೆ.

blg daeth

ಕಳೆದ ಎರಡು ವರ್ಷಗಳ ಹಿಂದೆ ಲಕ್ಷ್ಮಿ ಮತ್ತು ಬಸವರಾಜ್ ಮದುವೆಯಾಗಿದ್ದರು. ಆದರೆ ವರದಕ್ಷಿಣೆಗಾಗಿ ಬಸವರಾಜ್ ಲಕ್ಷ್ಮಿಗೆ ದಿನ ಹೊಡೆಯುತ್ತಿದ್ದ ಎಂದು ಹೇಳಲಾಗಿದೆ. ಅದ್ದರಿಂದ ಇದು ಆತ್ಮಹತ್ಯೆ ಅಲ್ಲ. ಬಸವರಾಜ್ ಅಂಗಡಿ ಮತ್ತು ಕುಟುಂಬಸ್ಥರು ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಲಕ್ಷ್ಮಿ ಹೆತ್ತವರ ಆರೋಪ ಮಾಡಿದ್ದಾರೆ.

ಈ ಸಂಬಂಧ ನಂದಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *