ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವು!

Public TV
1 Min Read
belgavi 1

ಬೆಳಗಾವಿ: ಅಜ್ಜನ ಜೊತೆ ಈಜು ಕಲಿಯಲು ಹೋಗಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಸವದತ್ತಿ (Savadatti) ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದ್ದು ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

POLICE JEEP

ಬೆಳಗಾವಿ (Belgavi) ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದ ಪೇಟೆಬಸವಣ್ಣ ಓಣಿಯ ಸಿದ್ಧಾರೂಢ ಮಂಜುನಾಥ ಗಾಣಗಿ (8) ಮೃತ ಬಾಲಕ. ಇಂದು ಬೆಳಗಿನಜಾವ ಅಜ್ಜನ ಜೊತೆಗೆ ಈಜು ಕಲಿಯಲು ಸಿದ್ಧಾರೂಢ ಹೋಗಿದ್ದನು. ಇದನ್ನೂ ಓದಿ: ಪತಿಯ ಅನುಮತಿಯಿಲ್ಲದೇ ಪತ್ನಿ ಗರ್ಭಪಾತ ಮಾಡಿಸಿಕೊಳ್ಳಬಹುದು – ಕೇರಳ ಹೈಕೋರ್ಟ್

ಈ ವೇಳೆ ಬೆನ್ನಿಗೆ ಪ್ಲಾಸ್ಟಿಕ್ ಡಬ್ಬಿ ಕಟ್ಟಿಕೊಂಡು ಬಾಲಕ ನೀರಿಗೆ ಇಳಿದಿದ್ದನು. ಆದರೆ ಬಾವಿಯಲ್ಲಿ ಈಜುವಾಗಲೇ ಡಬ್ಬಿ ಕಳಚಿದ್ದರಿಂದ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ: ಖಾದರ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *