Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

Belgaum

ಬೆಳಗಾವಿ| ವಿಧಾನಸಭೆ ಸಭಾಧ್ಯಕ್ಷರಿಗೆ ನೂತನ ಪೀಠ – ವಿಶೇಷತೆ ವಿವರಿಸಿದ ಯು.ಟಿ.ಖಾದರ್

Public TV
Last updated: December 9, 2024 4:00 pm
Public TV
Share
2 Min Read
Belagavi Legislative Assembly Session
SHARE

ಬೆಳಗಾವಿ: ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ ಪ್ರಾಮುಖ್ಯತೆ ಹೊಂದಿರಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಬೆಳಗಾವಿಯಲ್ಲಿನ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆಯ ಸಭಾಂಗಣದಲ್ಲಿರುವ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ (UT Khader) ಬಣ್ಣಿಸಿದರು.

ಬೆಳಗಾವಿಯಲ್ಲಿ ವಿಧಾನಸಭೆ ಸಭಾಧ್ಯಕ್ಷರಿಗೆ ನಿರ್ಮಿಸಿದ ನೂತನ ಪೀಠದ (Chair) ವಿಶೇಷತೆಯನ್ನು ಯುಟಿ ಖಾದರ್ ವಿವರಿಸಿದರು. ಈ ವೇಳೆ ಮಾತನಾಡಿದ ಅವರು, ವಿಧಾನಸೌಧವನ್ನು ಕಟ್ಟಿಸಿದ ದಿ.ಕೆಂಗಲ್ ಹನುಮಂತಯ್ಯನವರು (Kengal Hanumanthaiah) ಸಭಾಧ್ಯಕ್ಷ ಪೀಠದ ಬಗ್ಗೆ ಒಂದು ಮಹೋನ್ನತ ಪರಿಕಲ್ಪನೆ ಹೊಂದಿದ್ದರು. ಈ ಪೀಠವನ್ನು ವಿಶಿಷ್ಟವಾಗಿ ರೂಪಿಸಬೇಕೆಂದು ಅವರು ಯೋಜಿಸಿದ್ದರು. ಅದರಂತೆ ಅವರು ನಮ್ಮ ಇತಿಹಾಸದಲ್ಲಿ ರಾಜ್ಯವನ್ನು ಬಹಳ ಕಾಲ ಉತ್ತಮವಾಗಿ ಆಡಳಿತ ನಡೆಸಿದ ರಾಷ್ಟ್ರಕೂಟರು ಹಾಗೂ ಹೊಯ್ಸಳರು ಹೊಂದಿದ್ದ ರಾಷ್ಟ್ರ ಲಾಂಛನಗಳನ್ನು ಅದರಲ್ಲಿ ಅಳವಡಿಸಿಕೊಳ್ಳಬೇಕೆಂಬ ಚಿಂತನೆ ನಡೆಸಿದ್ದರು. ಈ ಉದ್ದೇಶಕ್ಕಾಗಿಯೇ ಶಿವಮೊಗ್ಗದಲ್ಲಿ ಲಭ್ಯವಿದ್ದ ಉತ್ತಮ ಗುಣಮಟ್ಟದ ಬೀಟೆ ಮರ ಆಯ್ಕೆ ಮಾಡಿ, ಅಲ್ಲಿನ ಗುಡಿಗಾರರಿಗೆ ತಮ್ಮ ಕನಸಿನ ಚಿಂತನೆಗಳನ್ನು ವಿವರಿಸಿ ಅದೇ ರೀತಿಯಲ್ಲಿಯೇ ಪೀಠ ಮೂಡಿಬರುವಂತೆ ಮುತುವರ್ಜಿ ವಹಿಸಿದ್ದರು. ರಾಷ್ಟ್ರಕೂಟರು ಹೊಂದಿದ್ದ ಗಂಡಭೇರುಂಡ ಚಿಹ್ನೆಯನ್ನು ಪೀಠದಲ್ಲಿ ಅಳವಡಿಸಿದ್ದರು. ಗಂಡಭೇರುಂಡ ಚಿಹ್ನೆಯನ್ನು ರಾಷ್ಟ್ರಕೂಟರು ತಮ್ಮ ಅಧಿಕಾರ ಹಾಗೂ ಶಕ್ತಿ ಸಾಮರ್ಥ್ಯದ ಪ್ರತೀಕವಾಗಿ ಹಾಗೂ ದೈವಿಕ ರಕ್ಷಣೆ ಹೊಂದಿರುವ ಪ್ರತೀಕವಾಗಿ ಉಪಯೋಗಿಸಿದ್ದರು. ಅದೇ ಲಾಂಛನವನ್ನು ಈ ಪೀಠದಲ್ಲಿ ಅದರ ಪ್ರತಿರೂಪವಾಗಿ ಕೆತ್ತಲಾಗಿದೆ ಎಂದರು. ಇದನ್ನೂ ಓದಿ: ಮೊದಲ ದಿನವೇ ಬಿಜೆಪಿ ಶಾಸಕರಲ್ಲಿ ಸಮನ್ವಯದ ಕೊರತೆ

Belagavi Legislative Assembly Session 1

ವಿಶಾಲವಾದ ಸಾಮ್ರಾಜ್ಯವನ್ನು ಹೊಂದಿದ್ದ ಹಾಗೂ ಬಹುಕಾಲ ಉತ್ತಮವಾಗಿ ಆಳಿದ ಹೊಯ್ಸಳರು ಸಹ ಶರಭ ಅಂದರೆ ಸಿಂಹದ ಲಾಂಛನ ಹೊಂದಿದ್ದರು. ಸಿಂಹವು ಶೌರ್ಯದ ಪ್ರತೀಕವಾಗಿದ್ದು, ಅದನ್ನೂ ಸಹ ಪೀಠದ ಎರಡೂ ಬದಿಗಳಲ್ಲಿ ಕೆತ್ತಲಾಗಿದೆ. ಅದೇ ರೀತಿ ಪೀಠದ ಮೇಲ್ಭಾಗದಲ್ಲಿ ಸೂರ್ಯಕಾಂತಿ ಹೂವಿನ ಚಿತ್ತಾರವನ್ನು ಕೆತ್ತಲಾಗಿದ್ದು, ಇದು ಸಭಾಧ್ಯಕ್ಷರಿಗೆ ಒಂದು ರೀತಿಯ ಮೇಲ್ಛಾವಣಿಯಂತೆ ರೂಪಿಸಲಾಗಿದೆ. ಪೀಠದ ಮುಂಭಾಗದ ಮೇಲೆ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಸೂರ್ಯ ಮತ್ತು ಚಂದ್ರರ ಚಿಹ್ನೆಯ ಅಮರತ್ವವನ್ನು ಪ್ರತಿರೂಪಿಸುವಂತಹ ಚಿಹ್ನೆಯನ್ನು ಕೆತ್ತಲಾಗಿದೆ. ಪೀಠದ ಮೇಲ್ಭಾಗದ ಎರಡೂ ಬದಿಗಳಲ್ಲಿ ಮಾವಿನ ಕಾಯಿ ರೂಪವನ್ನು ಕೆತ್ತಲಾಗಿದೆ. ನಮ್ಮ ದೇಶದಲ್ಲಿ ಮಾವಿನ ಕಾಯಿಗೆ ವೈಜ್ಞಾನಿಕ ಹಾಗೂ ಧಾರ್ಮಿಕವಾಗಿ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಕಾಯಿ ಬೆಳವಣಿಗೆಯ ದ್ಯೋತಕವಾಗಿದ್ದು, ಈ ಹಿನ್ನೆಲೆಯಲ್ಲಿ ಮಾವಿನ ಕಾಯಿ ಪ್ರತಿರೂಪವನ್ನು ಕೆತ್ತಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ – 45 ದಿನಗಳಲ್ಲಿ 13,000 ರೈಲುಗಳ ಸಂಚಾರ

ಹೀಗೆ ನಮ್ಮ ದೇಶದ ಇತಿಹಾಸ ಹಾಗೂ ಧಾರ್ಮಿಕತೆಯ ಚಿಹ್ನೆಗಳ ಮಿಶ್ರಣ ರೂಪದಲ್ಲಿರುವ ಈ ಕೆತ್ತನೆಗಳನ್ನು ಬೀಟೆ ಮರದಲ್ಲಿ ಬೆಂಗಳೂರಿನ ವಿಧಾನಸೌಧದ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ. ಇದೇ ಉದ್ದೇಶದಿಂದ ಬೆಳಗಾವಿಯಲ್ಲಿಯ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆ ಸಭಾಂಗಣದ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ನೂತನವಾಗಿ ಅಳವಡಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕೊನೆಗೂ ಪಂಚಮಸಾಲಿ ಹೋರಾಟಕ್ಕೆ ಬೆಳಗಾವಿ ಜಿಲ್ಲಾಡಳಿತ ಅನುಮತಿ

TAGGED:belagavilegislative assembly sessionUT Khaderಬೆಳಗಾವಿಬೆಳಗಾವಿ ಅಧಿವೇಶನಯುಟಿ ಖಾದರ್ವಿಧಾನಸಭೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

vinay kulkarni 1
Bengaluru City

ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ: ತೀರ್ಪಿಗೂ ಮುನ್ನ ವಿನಯ್ ಕುಲಕರ್ಣಿ ರಿಯಾಕ್ಷನ್

Public TV
By Public TV
19 minutes ago
Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ-ಇರಾನ್‌ ಸಂಧಾನ – ಪಾಕಿಸ್ತಾನದಲ್ಲೇ 2ನೇ ಸುತ್ತಿನ ಮಾತುಕತೆ

Public TV
By Public TV
48 minutes ago
Ajinkya Rahane
Cricket

ಸತತ ಸೋಲಿನ ಬಳಿಕ ಮತ್ತೆ ಶಾಕ್‌ – KKR ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ದಂಡ

Public TV
By Public TV
2 hours ago
oil tankers hormuz
Latest

ಹಾರ್ಮುಜ್‌ ದಾಟಲು ಯತ್ನಿಸಿದ 2 ತೈಲ ಟ್ಯಾಂಕರ್‌ ತಡೆದ ಯುಎಸ್‌ ನೌಕಾಪಡೆ – ವಾಪಸ್‌ ಹೋಗುವಂತೆ ವಾರ್ನಿಂಗ್

Public TV
By Public TV
2 hours ago
Maharashtra Man Arrest
Crime

180 ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್‌ ಮಾಡಿದ್ದ ಆರೋಪಿ ಬಂಧನ

Public TV
By Public TV
3 hours ago
Vijayapura Murder
Crime

ವಿಜಯಪುರದಲ್ಲಿ ಹಾಡಹಗಲೇ ಶೂಟೌಟ್ – ಗುಂಡಿನ ಸುರಿಮಳೆಗೈದು ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?