ಹಾಲಶ್ರೀ ಸ್ವಾಮೀಜಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ

Public TV
1 Min Read
bly halashree swamiji

ಬಳ್ಳಾರಿ: ಆಂಧ್ರ ಪ್ರದೇಶದ ಗುತ್ತಿ-ಅನಂತಪುರಂ ರಾಷ್ಟ್ರೀಯ ಹೆದ್ದಾರಿ ಬಳಿ ಹಾಲು ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.

ಜಿಲ್ಲೆಯ ಹುವಿನಹಡಗಲಿ ತಾಲೂಕಿನ ಹಿರೇ ಹಡಗಲಿಯಲ್ಲಿ ಹಾಲು ಮಠವಿದ್ದು, ಕೆಲಸದ ನಿಮಿತ್ತವಾಗಿ ಕಳೆದ ಎರಡು ದಿನಗಳ ಹಿಂದೆ ಹೈದರಾಬಾದ್‍ಗೆ ಸ್ವಾಮೀಜಿ ಅವರು ತೆರಳಿದ್ದರು. ಇಂದು ಬೆಳಗಿನ ಜಾವ ಕೆಲಸ ಮುಗಿಸಿಕೊಂಡು ಬಳ್ಳಾರಿಗೆ ಮರಳಿ ಬರುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ವಾಮೀಜಿಯವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Police Jeep 1 1

ಸ್ವಾಮೀಜಿ ಅವರ ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಸ್ವಾಮೀಜಿ ಹಾಗೂ ಚಾಲಕ ಹೈದರಾಬಾದ್‍ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅಜಾಗರುಕತೆಯೇ ಕಾರಣ ಎಂದು ತಿಳಿದು ಬಂದಿದ್ದು, ಅನಂತಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *