ಶ್ರೀರಾಮುಲು ಟೀಮ್‍ಗೆ ಸಚಿವ ಸ್ಥಾನ ನೀಡ್ಬೇಡಿ – ಸಿಎಂಗೆ ಟಪಾಲ್ ಗಣೇಶ್ ಮನವಿ

Public TV
1 Min Read
tapal ganesh

ಬಳ್ಳಾರಿ: ಜಿಲ್ಲೆಯ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಸಚಿವ ಸ್ಥಾನ ನೀಡಬಾರದೆಂದು ಬಳ್ಳಾರಿಯಲ್ಲಿ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದಾರೆ.

ಇಂದು ಬಿಜೆಪಿ ಬಹುಮತ ಸಾಬೀತು ಮಾಡಿದ್ದು ಸಿಎಂ ಆಗಿ ಬಿ.ಎಸ್ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಮುಂದೆ ಸಚಿವ ಸ್ಥಾನ ಹಂಚಿಕೆಯಲ್ಲಿ ಬಳ್ಳಾರಿಯ ರೆಡ್ಡಿ ಟೀಮ್ ಹಾಗೂ ಶ್ರೀರಾಮುಲುಗೆ ಸಚಿವ ಸ್ಥಾನ ನೀಡಬಾರದೆಂದು ಮನವಿ ಮಾಡಿಕೊಂಡಿದ್ದಾರೆ.

sriramulu

ಅಕ್ರಮ ಗಣಿಗಾರಿಕೆ, ಗಡಿನಾಶ ಮತ್ತು ರಿಪಬ್ಲಿಕ್ ಆಫ್ ಬಳ್ಳಾರಿ ಅಪಕೀರ್ತಿ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ತಂಡಕ್ಕೆ ಇದೆ. 2008 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಳ್ಳಾರಿ ಸೇರಿದಂತೆ ರಾಜ್ಯದಲ್ಲಿ ರೆಡ್ಡಿ, ಶ್ರೀರಾಮುಲು ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಅಕ್ರಮ ಗಣಿಗಾರಿಕೆಯಲ್ಲಿ ಶ್ರೀ ರಾಮುಲು ಹೆಸರಿಲ್ಲ ಆದರೆ ಜನಾರ್ದನ ರೆಡ್ಡಿ ಮತ್ತು ಶ್ರೀ ರಾಮುಲು ಒಂದೇ ಜೀವ ಇದ್ದಂತೆ. ಶ್ರೀರಾಮುಲುಗೆ ಸಚಿವ ಸ್ಥಾನ ಕೊಟ್ಟರೆ ರೆಡ್ಡಿ ಸಚಿವನಾದಂತೆ. ಅದ್ದರಿಂದ ಶ್ರೀರಾಮುಲು ಅಷ್ಟೇ ಅಲ್ಲದೇ ಆ ತಂಡದಲ್ಲಿ ಇರುವ ಸೋಮಶೇಖರ ರೆಡ್ಡಿ ಹಾಗೂ ಕರುಣಾಕರ ರೆಡ್ಡಿಗೂ ಕೂಡ ಯಾವುದೇ ಕಾರಣಕ್ಕೂ ಸಚಿವ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

janardan reddy

ಇವರಿಗೆ ಮಂತ್ರಿ ಸ್ಥಾನ ನೀಡುವ ಬದಲು ಪಕ್ಷಕ್ಕಾಗಿ ದುಡಿದ ಪ್ರಾಮಾಣಿಕರಿಗೆ ಸಚಿವ ಸ್ಥಾನ ನೀಡಿದರೆ ಪಕ್ಷಕ್ಕೆ ಉಳಿವಿದೆ ಎಂದು ಬಳ್ಳಾರಿಯ ಗಣಿ ಉದ್ಯಮಿ ಟಪಾಲ್ ಗಣೇಶ್ ಸಿಎಂ ಯಡಿಯೂರಪ್ಪನವರಿಗೆ ವಿಡಿಯೋ ರೆಕಾರ್ಡ್ ಮಾಡಿ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *