ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಅಶ್ವಾಸನೆ ನೀಡಿದ್ದಾರೆ: ಶ್ರೀರಾಮಲು

Public TV
1 Min Read
sriramulu 1

ಬಳ್ಳಾರಿ: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಅಶ್ವಾಸನೆ ನೀಡಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತಾಯಿ ಇದ್ದಂತೆ, ಪಕ್ಷದ ತೀರ್ಮಾನ ತೆಗೆದುಕೊಂಡಿದ್ದಕ್ಕೆ ನಾನು ಬದ್ಧ. ವೈಯಕ್ತಿಕ ಅಭಿಪ್ರಾಯ ಬದಿಗೊತ್ತಿ ಕೆಲಸ ಮಾಡಿ. ಯಾವುದೇ ಪ್ರತಿಭಟನೆ ಮಾಡಬೇಡಿ. ಪಕ್ಷಕ್ಕೆ ಮುಜುಗರ ತರೋ ಕೆಲಸ ಯಾರು ಮಾಡಬೇಡಿ. ಪಕ್ಷಕ್ಕಾಗಿ ಎಲ್ಲರೂ ಸೇರಿ ದುಡಿಯೋಣ ಎಂದು ರಾಜ್ಯದ ಜನರಲ್ಲಿ ವಿನಂತಿ ಮಾಡಿಕೊಂಡರು.

bsy home

ಎಲ್ಲಾ ಜನರಿಗೆ ನ್ಯಾಯಕೊಡಿಸೋ ಕೆಲಸ ಬಿಜೆಪಿ ಪಕ್ಷ ಸೇರಿದಂತೆ ನಾನು ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ನೀಡುವ ಕೆಲಸವಾಗಬೇಕಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಅಶ್ವಾಸನೆ ನೀಡಿದ್ದಾರೆ. ಅದು ಸಿಕ್ಕರೆ ವಾಲ್ಮೀಕಿ ಸಮುದಾಯದಕ್ಕೆ ಎಲ್ಲಾ ಸಿಕ್ಕಂತೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ, ಬಾಲಚಂದ್ರ, ಶಿವನಗೌಡ ಮತ್ತು ರಾಜುಗೌಡ ಎಲ್ಲಾರು ಒಂದಾಗಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ವಿಚಾರವಾಗಿ ಮಾತನಾಡಿದ ಅವರು, ನಾನು ಈ ವಿಷಯಕ್ಕೆ ಯಾವುದೇ ಬೇಡಿಕೆ ಇಟ್ಟಿಲ್ಲ. ಸದ್ಯ ನಾನು ನೆರೆ ಪೀಡಿತ ಪ್ರದೇಶಾಭಿವೃದ್ಧಿಗೆ ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿಯಾಗಿದ್ದೇನೆ. ನನಗೆ ಯಾವುದೇ ಭಿನ್ನಮತ ಇಲ್ಲ ಎಂದು ಸ್ಪಷ್ಟನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *