ಲಗ್ನ ಪತ್ರಿಕೆಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಪ್ರಿಂಟ್- ಮದ್ವೆ ಕಾರ್ಡ್ ವೈರಲ್

Public TV
1 Min Read
ballary

ಬಳ್ಳಾರಿ: ಸಾಮಾನ್ಯವಾಗಿ ಲಗ್ನ ಪತ್ರಿಕೆಗಳನ್ನು ವಿಭಿನ್ನವಾಗಿ ಪ್ರಿಂಟ್ ಮಾಡಿಸುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗಳ ಲಗ್ನ ಪತ್ರಿಕೆಯಲ್ಲಿ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಿಂಟ್ ಮಾಡುವ ಮೂಲಕ ಹೆಣ್ಣು ಮಕ್ಕಳ ಮೇಲೆ ತಮಗಿರುವ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ನಿವಾಸಿಗಳಾದ ಕೃಷ್ಣಾರಾವ್ ಮತ್ತು ಜ್ಯೋತಿ ಕುಲಕರ್ಣಿ ಎಂಬವರು ತಮ್ಮ ಮಗಳಾದ ಅನುಷಾ ಅವರ ಮದುವೆಯನ್ನು ಇದೇ ದಿನಾಂಕ 27 ರಂದು ಮಾಡಲಿದ್ದಾರೆ. ಕಾರಣ ತಮ್ಮ ಮುದ್ದಿನ ಮಗಳ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ‘ಬೇಟಿ ಬಚಾವೋ ಬೇಟಿ ಪಾಡಾವೋ’ ಎನ್ನುವ ಸ್ಲೋಗನ್ ಪ್ರಿಂಟ್ ಮಾಡಿಸಿದ್ದಾರೆ. ಈ ಲಗ್ನ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

marriage

ಇದೇ ದಿನಾಂಕ 27 ರಂದು ಮಗಳ ಮದುವೆಯನ್ನು ಬೆಳಗಾವಿ ಮೂಲದ ನಿತಿನ್ ಎಂಬವರ ಜೊತೆ ನಡೆಯಲಿದ್ದು, ತಮ್ಮ ಮುದ್ದಿನ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಲು ನಿಶ್ಚಯಿಸಿದ್ದಾರೆ. ಈ ಇಬ್ಬರೂ ದಂಪತಿಗೆ ಹೆಣ್ಣು ಮಕ್ಕಳು ಎಂದರೆ ತುಂಬಾನೇ ಇಷ್ಟ ಅಂತೆ ಹೀಗಾಗಿ ತಮ್ಮ ಮಗಳನ್ನು ಬೆಳೆಸಿದ ರೀತಿಯಲ್ಲಿ ಬೇರೆಯವರು ಬೆಳೆಸಬೇಕು ಎನ್ನುವ ಉದ್ದೇಶದಿಂದ ಈ ರೀತಿಯಲ್ಲಿ ಲಗ್ನ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿಸಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *