ಬೆಂಗಳೂರು: ದೇಶದ್ಯಾಂತ ಆಚರಿಸುವ ಗೌರಿ ಗಣೇಶ ಹಬ್ಬಕ್ಕೆ ಒಡೆಯ ಪೋಸ್ಟರ್ ಹಾಕುವ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಡಿನ ಸಮಸ್ತ ಜನತೆಗೆ ಶುಭಕೋರಿದ್ದಾರೆ.
ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ದರ್ಶನ್ ಅವರು ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು, ನಿಮ್ಮ ಎಲ್ಲ ಕನಸುಗಳು ಈಡೇರಲಿ, ಆ ದೇವರ ಆಶೀರ್ವಾದ ಸದಾ ನಿಮ್ಮ ಕುಟುಂಬದ ಮೇಲಿರಲಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಎಲ್ಲರಿಗೂ ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು. ನಿಮ್ಮೆಲ್ಲಾ ಕನಸುಗಳು ಈಡೇರಲಿ, ಆ ದೇವರ ಆಶೀರ್ವಾದ ಸದಾ ನಿಮ್ಮ ಕುಟುಂಬಗಳ ಮೇಲಿರಲಿ.
– ನಿಮ್ಮ ದಾಸ ದರ್ಶನ್#Odeya pic.twitter.com/beHESW1pUd
— Darshan Thoogudeepa (@dasadarshan) September 1, 2019
ಈ ಟ್ವೀಟ್ನಲ್ಲಿ ಸಂದೇಶ್ ಪ್ರೊಡಕ್ಷನ್ನಲ್ಲಿ ಎಂ.ಡಿ ಶ್ರೀಧರ್ ಅವರು ನಿರ್ದೇಶನ ಮಾಡುತ್ತಿರುವ ಒಡೆಯ ಸಿನಿಮಾದ ಪೋಸ್ಟರ್ ಹಾಕಿದ್ದಾರೆ. ಈ ಚಿತ್ರಕ್ಕೆ ಅರ್ಜನ್ ಜನ್ಯ ಸಂಗೀತ ನೀಡಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಹಬ್ಬಕ್ಕೆ ಶುಭಕೋರಿದ್ದು, ಅವರ ಅಭಿನಯದ ಗೀತಾ ಚಿತ್ರದ ಪೋಸ್ಟರ್ ಹಾಕಿ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳು ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ "ಗೌರಿ ಗಣೇಶ ಹಬ್ಬದ ಶುಭಾಶಯಗಳು "????????????#Geetha pic.twitter.com/tlIo8Oeg7U
— Ganesh (@Official_Ganesh) September 1, 2019