Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂತ್ರಜ್ಞಾನದ ಜೊತೆ ಕೌಶಲ್ಯಗಳನ್ನು ಬಳಸಿಕೊಳ್ಳಿ – ಸಿಎ ವಿದ್ಯಾರ್ಥಿಗಳಿಗೆ ಐಐಎಂ ಮುಖ್ಯಸ್ಥ  ಪ್ರೊ. ಕೆ. ಕುಮಾರ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂತ್ರಜ್ಞಾನದ ಜೊತೆ ಕೌಶಲ್ಯಗಳನ್ನು ಬಳಸಿಕೊಳ್ಳಿ – ಸಿಎ ವಿದ್ಯಾರ್ಥಿಗಳಿಗೆ ಐಐಎಂ ಮುಖ್ಯಸ್ಥ  ಪ್ರೊ. ಕೆ. ಕುಮಾರ್ ಸಲಹೆ

Bengaluru City

ತಂತ್ರಜ್ಞಾನದ ಜೊತೆ ಕೌಶಲ್ಯಗಳನ್ನು ಬಳಸಿಕೊಳ್ಳಿ – ಸಿಎ ವಿದ್ಯಾರ್ಥಿಗಳಿಗೆ ಐಐಎಂ ಮುಖ್ಯಸ್ಥ  ಪ್ರೊ. ಕೆ. ಕುಮಾರ್ ಸಲಹೆ

Public TV
Last updated: December 20, 2019 10:21 pm
Public TV
Share
2 Min Read
chartered accountant conference 2
SHARE

– ಚಾರ್ಟೆಡ್ ಆಕೌಂಟೆಂಟ್ ವಿದ್ಯಾರ್ಥಿ ಸಮ್ಮೇಳನ ಅಭ್ಯುದಯ 2019

ಬೆಂಗಳೂರು: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ತಂತ್ರಜ್ಞಾನ ಬದಲಾಗುತ್ತಿದ್ದಂತೆ ಲೆಕ್ಕಪರಿಶೋಧಕರು ಕೂಡ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಆಗ ಉದ್ಯಮ ಮತ್ತು ವ್ಯವಹಾರಗಳಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಐಐಎಂನ ಮುಖ್ಯಸ್ಥ ಪ್ರೊ.ಕೆ. ಕುಮಾರ್ ಅಭಿಪ್ರಾಯಪಟ್ಟರು.

ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮತ್ತು ದಕ್ಷಿಣ ಭಾರತ ಲೆಕ್ಕಪರಿಶೋಧಕರ ವಿದ್ಯಾರ್ಥಿ ಸಂಘ ಬೆಂಗಳೂರು (ಎಸ್‍ಐಸಿಎಎಸ್‍ಎ) ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಚಾರ್ಟೆಡ್ ಆಕೌಂಟೆಂಟ್ ವಿದ್ಯಾರ್ಥಿ ಸಮ್ಮೇಳನ ಅಭ್ಯುದಯ 2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೆಕ್ಕ ಪರಿಶೋಧಕರು ಆರ್ಧಿಕ ಚಟುವಟಿಕೆಗಳನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಉದ್ಯಮಗಳಲ್ಲಿ ಉಂಟಾಗುವಂತಹ ಸವಾಲುಗಳನ್ನು ಬಗೆಹರಿಸುವಂತಹ ಜವಾಬ್ದಾರಿ ಕೂಡ ಲೆಕ್ಕ ಪರಿಶೋಧಕರ ಮೇಲಿದೆ ಎಂದು ಅವರು ಹೇಳಿದ್ರು.

ವಿದ್ಯಾರ್ಥಿಗಳು ಕೇವಲ ಅಂಕಗಳಿಸಿ ಉತ್ತೀರ್ಣರಾಗುವುದಲ್ಲ. ಉತ್ತಮ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಕೂಡ ಮೈಗೂಡಿಸಿಕೊಳ್ಳಬೇಕು. ಇಂತಹ ಶಿಕ್ಷಣವನ್ನು ಪಾಧ್ಯಾಪಕರು ತಮ್ಮ ವೃತ್ತಿ ಬದುಕಿನ ಸವಾಲು ಮತ್ತು ಅನುಭವಗಳನ್ನು ವಿದ್ಯಾರ್ಥಿಗಳಿಗೆ ಭೋಧನೆ ಮಾಡಿ ವೃತ್ತಿಪರರನ್ನಾಗಿ ಮಾಡಿ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದರು. ಲೆಕ್ಕ ಪರಿಶೋಧಕರು ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನಮಾನಗಳನ್ನು ಹೊಂದಿದ್ದಾರೆ. ಬ್ಯಾಂಕಿಂಗ್, ಕಾರ್ಪೊರೇಟ್ ಸೆಕ್ಟರ್, ಎಂಎನ್‍ಸಿ ಕಂಪನಿ ಸೇರಿದಂತೆ ವಿವಿಧ ಉದ್ಯಮ, ವ್ಯವಹಾರಗಳಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಪ್ರತಿ ದಿನವೂ ಇಲ್ಲಿ ಹೊಸತನವನ್ನು ಕಲಿಯಬೇಕಾಗುತ್ತದೆ. ಹೊಸ ಹೊಸ ಯೋಜನೆಗಳತ್ತ ಗಮನ ಕೂಡ ಹರಿಸಬೇಕಾಗುತ್ತದೆ ಎಂದರು.

chartered accountant conference 1

ಚಾರ್ಟೆಡ್ ಆಕೌಂಟೆಂಟ್ ಕೋರ್ಸ್ ಗೆ ಸೇರುವುದೇ ದೊಡ್ಡ ಕೆಲಸ. ಇಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಲ ಮತ್ತು ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಬೇಕು. ಅಲ್ಲದೆ ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು, ವೃತ್ತಿಪರತೆಯನ್ನು ಕಾಯ್ದುಕೊಂಡು ಸುಂದರ ಜೀವನವನ್ನು ರೂಪಿಸಿಕೊಳ್ಳಿ ಎಂದು ಚಾರ್ಟೆಡ್ ಆಕೌಂಟೆಂಟ್ ಕೋರ್ಸ್ ಗೆ ಸೇರಿರುವ ವಿದ್ಯಾರ್ಥಿಗಳಿಗೆ ಪ್ರೊ. ಕೆ. ಕುಮಾರ್ ಸಲಹೆ ನೀಡಿದರು.

ಸಮ್ಮೇಳನದ ಮುಖ್ಯ ಅತಿಥಿಯಾಗಿದ್ದ ಗೋಲ್ಡ್ಮ್ಯಾನ್ ಸಾಚ್ಸ್ನ ಎಂ.ಡಿ. ಸಾತಿಯಾ ಪದ್ಮನಾಭನ್ ಅವರು ಸಿಎ ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವವನ್ನು ಹಂಚಿಕೊಂಡರು. ಕಠಿಣ ಶ್ರಮ, ಏಕಾಗ್ರತೆ ಮತ್ತು ಬದ್ಧತೆಯಿಂದ ಓದಿದ್ರೆ ಮಾತ್ರ ಲೆಕ್ಕ ಪರಿಶೋಧಕನಾಗಬಹುದು. ನಾನು 14ನೇ ಪ್ರಯತ್ನದಲ್ಲಿ ಚಾರ್ಟೆಡ್ ಆಕೌಂಟೆಂಟ್ ಪರೀಕ್ಷೆಯನ್ನು ಪಾಸ್ ಮಾಡಿದ್ದೇನೆ ಎಂದರು.

ಇನ್ನೊಬ್ಬ ಮುಖ್ಯ ಅತಿಥಿಯಾಗಿದ್ದ ಐಸಿಎಐನ ಮಾಜಿ ಅಧ್ಯಕ್ಷ ಕೆ. ರಘು ಮಾತನಾಡಿ, ಲೆಕ್ಕ ಪರಿಶೋಧಕರಿಗೆ ಸಮಾಜದಲ್ಲಿ ಅತ್ಯುನ್ನತ ಗೌರವ ಇದೆ. ಹಾಗೇ ಬೇರೆ ಬೇರೆ ದೇಶಗಳಲ್ಲಿ ಲೆಕ್ಕಪರಿಶೋಧಕರಿಗೆ ಹೆಚ್ಚಿನ ಬೇಡಿಕೆಯೂ ಇದೆ. ಹೀಗಾಗಿ ಸಿಎ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಸಿಎ ಪರೀಕ್ಷೆ ತುಂಬಾ ಕಠಿಣವಾಗಿರುತ್ತದೆ. ಆದರೆ ಬದ್ಧತೆ ಮತ್ತು ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಸಿಎ ಪರೀಕ್ಷೆಯನ್ನು ಪಾಸ್ ಮಾಡಬಹುದು ಎಂದು ಹೇಳಿದ್ರು.

ಅಭ್ಯುದಯ ಸಿಎ ವಿದ್ಯಾರ್ಥಿಗಳ ಸಮ್ಮೇಳನದಲ್ಲಿ ಲೆಕ್ಕಪರಿಶೋಧಕರ ಪಾತ್ರ, ಸಿಎ ವೃತ್ತಿ ಭವಿಷ್ಯ ಮತ್ತು ತಂತ್ರಜ್ಞಾನ, ಭಾರತದ ಅರ್ಥಿಕತೆಗೆ ಜಿಎಸ್‍ಟಿಯ ಪರಿಣಾಮಗಳು, ಲೆಕ್ಕಪರಿಶೋಧಕ ವೃತ್ತಿಯ ಮೌಲ್ಯಗಳು, ಕಂಪೆನಿ ಕಾನೂನು ಮತ್ತು ಇತ್ತೀಚಿನ ಕಾಯ್ದೆಗಳ ಬಗ್ಗೆ ತಜ್ಞರಿಂದ ಮಾಹಿತಿ ನೀಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಎಸ್.ಐ.ಆರ್.ಸಿನ ಮುಖ್ಯಸ್ಥ ಜೋಮನ್ ಕೆ. ಜಾರ್ಜ್, ಎಸ್.ಐ.ಆರ್.ಸಿ ಪದಾಧಿಕಾರಿಗಳಾದ ಎಸ್. ಪನ್ನಾ ರಾಜ್, ಎ.ಬಿ. ಗೀತಾ, ಎಸ್.ಐ.ಆರ್.ಸಿ ಬೆಂಗಳೂರು ವಿಭಾಗದ ಚೇರ್ಮೆನ್ ಶಿವರಾಮ್ ಶಂಕರ್ ಭಟ್, ಎಸ್‍ಐಸಿಎಎಸ್‍ಎನ ಅಧ್ಯಕ್ಷೆ ಎಸ್.ದಿವ್ಯಾ ಮೊದಲಾದವರು ಉಪಸ್ಥಿತರಿದ್ದರು. ಸಿಎ ವಿದ್ಯಾರ್ಥಿ ಸಮ್ಮೇಳನದಲ್ಲಿ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

TAGGED:benagluruChartered AccountantProf. K KumarPublic TVStudent Conferenceಚಾರ್ಟೆಡ್ ಆಕೌಂಟೆಂಟ್ಪಬ್ಲಿಕ್ ಟಿವಿಪ್ರೊ.ಕೆ. ಕುಮಾರ್ಬೆಂಗಳೂರುವಿದ್ಯಾರ್ಥಿ ಸಮ್ಮೇಳನ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
5 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
15 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
29 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
33 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?