ಕೋಲ್ಕತ್ತಾ: ವ್ಯಕ್ತಿಯೊಬ್ಬ ಆತನ ಅತ್ತಿಗೆಯ ಶಿರಚ್ಛೇದನ ಮಾಡಿ, ರುಂಡವನ್ನು ಹಿಡಿದು ಊರೆಲ್ಲಾ ಸುತ್ತಾಡಿ, ಪೊಲೀಸ್ ಠಾಣೆಯಲ್ಲಿ ಶರಣಾಗಿರುವ ಘಟನೆ ಪಶ್ಚಿಮ ಬಂಗಾಳದ (West Bengal) ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಬಸಂತಿ (Basanti) ಪ್ರದೇಶದ ಭರತ್ಗಢದ ಸತಿ ಮಂಡಲ್ ಹತ್ಯೆಗೀಡಾದ ದುರ್ದೈವಿ. ಆಕೆಯ ಪತಿಯ ತಮ್ಮ ಬಿಮಲ್ ಮಂಡಲ್ ಕೊಲೆ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು
ಬಿಮಲ್ ಮತ್ತು ಅತ್ತಿಗೆ ಸತಿ ಮಂಡಲ್ನ ಜೊತೆ ಜಗಳವಾಡಿದ್ದ. ಇಬ್ಬರ ಜಗಳವು ತಾರಕಕ್ಕೇರಿದ್ದು, ಬಿಮಲ್ ಕುಡುಗೋಲಿನಿಂದ ಅತ್ತಿಗೆಯ ಶಿರಚ್ಛೇದನ ಮಾಡಿದ್ದ. ಬಳಿಕ ಈ ರುಂಡವನ್ನು ಹಿಡಿದು ರಸ್ತೆಯಲ್ಲಿ ನಡೆದುಕೊಂಡು ಬಂದಿದ್ದ. ಬಳಿಕ ಕುಡುಗೋಲು ಹಾಗೂ ರುಂಡದ ಸಮೇತ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ. ಆರೋಪಿ ಬಿಮಲ್ ಮಂಡಲ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ‘ಆಪರೇಷನ್ ಸಿಂಧೂರ’ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ – ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ
ಮಹಿಳೆಯ ರುಂಡವನ್ನು ಹಿಡಿದು ರಸ್ತೆಯಲ್ಲಿ ಓಡಾಡಿದ ವ್ಯಕ್ತಿಯ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಸಂತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.