– ಸಾವಿನ ಸಂಖ್ಯೆ 290ಕ್ಕೆ ಏರಿಕೆ
ಬೆಂಗಳೂರು: 2 ದಿನಗಳ ಹಿಂದೆ ಶ್ರೀಲಂಕಾ ಪ್ರವಾಸಕ್ಕೆ ತೆರೆಳಿದ್ದ ನೆಲಮಂಗಲ ಮೂಲದ 8 ಮಂದಿಯಲ್ಲಿ ಇಬ್ಬರು ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.
ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ನೆಲಮಂಗಲದ ಕೆ.ಜಿ ಹನುಮಂತರಾಯಪ್ಪ ಹಾಗೂ ಎಂ. ರಂಗಪ್ಪ ಸಾವನ್ನಪ್ಪಿದ್ದಾರೆ. ಅಲ್ಲದೆ 6 ಮಂದಿ ಕಾಣೆಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಹಾಗೂ ಗುತ್ತಿಗೆದಾರ ರಂಗಪ್ಪ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂಬುದನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಬಾಂಬ್ ಸ್ಫೋಟಕ್ಕೆ ಮಂಗ್ಳೂರಿನ ಮಹಿಳೆ ಬಲಿ – ಸಾವಿನ ಸಂಖ್ಯೆ 185ಕ್ಕೆ ಏರಿಕೆ
- Advertisement 2
- Advertisement 3
ಎರಡು ದಿನದ ಹಿಂದೆ ಬೆಂಗಳೂರಿನಿಂದ ಶ್ರೀಲಂಕಾಗೆ ನೆಲಮಂಗಲ ಮೂಲದ ಎಂಟು ಮಂದಿ ಪ್ರವಾಸ ಕೈಗೊಂಡಿದ್ದರು. ಭಾನುವಾರ ಕೊಲಂಬೋದ 8 ಕಡೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಾಂಬ್ ದಾಳಿ ಬಳಿಕ ಶಿವಕುಮಾರ್, ಲಕ್ಷ್ಮಿ ನಾರಾಯಣ, ಮಾರೇಗೌಡ, ಪುಟ್ಟರಾಜು ಸೇರಿ ಒಟ್ಟು 8 ಮಂದಿ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಆದ್ರೆ ಈ 8 ಮಂದಿ ಪೈಕಿ ಇಬ್ಬರು ಬಾಂಬ್ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಇಲಾಖೆ ಖಚಿತ ಪಡಿಸಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಯ ಕುಟುಂಬಸ್ಥರು ಆತಂಕಗೊಂಡಿದ್ದಾರೆ.
- Advertisement 4
ಮಂಗಳೂರಿನ ಬೈಕಂಪಾಡಿ ಮೂಲದ ರಝೀನಾ ಖಾದರ್ ಕುಕ್ಕಾಡಿ(58) ಕೂಡ ಸರಣಿ ಬಾಂಬ್ ಸ್ಪೋಟದಲ್ಲಿ ಮೃತಪಟ್ಟಿದ್ದರು. ಕೊಲಂಬೋದಲ್ಲಿ ನೆಲೆಸಿದ್ದ ಬಂಧುಗಳನ್ನು ಭೇಟಿಯಾಗಲೆಂದು ರಝೀನಾ ಪತಿಯೊಡನೆ ಶ್ರೀಲಂಕಾಕ್ಕೆ ತೆರಳಿದ್ದರು. ಅಲ್ಲಿನ ಶಾಂಗ್ರಿಲಾ ಹೊಟೇಲ್ನಲ್ಲಿ ರಝೀನಾ ಇದ್ದರೆ, ಅವರ ಪತಿ ದುಬೈಗೆ ವಿಮಾನದಲ್ಲಿ ಹೊರಟಿದ್ದರು. ಈ ವೇಳೆ ಶಾಂಗ್ರಿಲಾ ಹೊಟೇಲ್ನಲ್ಲಿ ನಡೆದ ಸ್ಫೋಟದಲ್ಲಿ ರಝೀನಾ ಮೃತಪಟ್ಟಿದ್ದರು.
ಈವರೆಗೆ ವರದಿಯಾಗಿರುವ ಪ್ರಕಾರ ಬಾಂಬ್ ಸ್ಪೋಟದಲ್ಲಿ 290 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಶ್ರೀಲಂಕಾ ಪೊಲೀಸರು 24 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
@SushmaSwaraj
We sadly confirm the deaths of the following two individuals in the blasts yesterday:
– K G Hanumantharayappa
-M Rangappa.
— India in Sri Lanka (@IndiainSL) April 22, 2019