ಬೆಂಗಳೂರು: ಆಟವಾಡುತ್ತಿದ್ದ ಮಗು ಮೇಲೆ ಜೆಸಿಬಿ ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಮಹದೇವಪುರ (Mahadevapura) ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ.
ಥವನ್ ರೆಡ್ಡಿ (2) ಮೃತಪಟ್ಟ ಮಗು. ಚಾಲಕ ಜೆಸಿಬಿಯನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಹರಿದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಥವನ್ ರೆಡ್ಡಿ ತಲೆಯ ಮೇಲೆ ಜೆಸಿಬಿ ಹರಿದಿದೆ. ಇದನ್ನೂ ಓದಿ : ಗಾಂಜಾ ಸಾಗಿಸುತ್ತಿದ್ದ ತಂದೆ, ಮಗಳು, ಮೊಮ್ಮಗ ಸೇರಿ ಐವರು ಅರೆಸ್ಟ್
ಕೂಡಲೇ ಮಗುವನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ : ಸರ್ಕಾರ ಶ್ರೀಮಂತರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಬೇಕು – ಎಂ.ಬಿ ಪಾಟೀಲ್