ಬೆಂಗಳೂರು: ಇತ್ತೀಚೆಗೆ ನಗರದ (Bengaluru) ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್ & ರನ್ (Hit And Run) ಪ್ರಕರಣದ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಟಿಪ್ಪರ್ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೊರವಲಯದಲ್ಲಿ ರಸ್ತೆ ಗುಂಡಿಗೆ ಬಿ.ಕಾಂ ಪದವೀಧರೆ ಬಲಿ
ಅ.29ರ ಬೆಳಗ್ಗೆ 8:50 ಸುಮಾರಿಗೆ ಈ ಅಪಘಾತ ನಡೆದಿತ್ತು. ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಧನುಶ್ರೀ (21) ರಸ್ತೆಗೆ ಬಿದ್ದಿದ್ದಳು. ಈ ವೇಳೆ ಆಕೆಯ ಮೇಲೆ ಟಿಪ್ಪರ್ ಹರಿದಿತ್ತು. ಇದರಿಂದ ಯುವತಿ ಸಾವನ್ನಪ್ಪಿದ್ದಳು. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿತ್ತು. ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್