Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧುಮೇಹದಂಥ ಜೀವನಶೈಲಿ ಕಾಯಿಲೆಗೆ ಕ್ರೀಡೆಯೇ ಮದ್ದು: ಡಾ. ಅಶ್ವತ್ಥನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧುಮೇಹದಂಥ ಜೀವನಶೈಲಿ ಕಾಯಿಲೆಗೆ ಕ್ರೀಡೆಯೇ ಮದ್ದು: ಡಾ. ಅಶ್ವತ್ಥನಾರಾಯಣ

Bengaluru City

ಮಧುಮೇಹದಂಥ ಜೀವನಶೈಲಿ ಕಾಯಿಲೆಗೆ ಕ್ರೀಡೆಯೇ ಮದ್ದು: ಡಾ. ಅಶ್ವತ್ಥನಾರಾಯಣ

Public TV
Last updated: February 28, 2020 8:08 pm
Public TV
Share
2 Min Read
Ashwath Narayan 5
SHARE

ಬೆಂಗಳೂರು: ಬೊಜ್ಜು, ಹೈಪರ್ ಟೆನ್ಶನ್, ಮಧುಮೇಹದಂಥ ಜೀವನಶೈಲಿಯ ಕಾಯಿಲೆಗೆ ಕ್ರೀಡೆಯೇ ಮದ್ದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

‘ಡಯಾಬಿಟಿಸ್ ಇಂಡಿಯಾ 2020’ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಮಾತನಾಡಿದ ಡಾ. ಅಶ್ವತ್ಥನಾರಾಯಣ, “ಸಣ್ಣ ವಯಸ್ಸಿನವರಲ್ಲಿ ಕಾಣಿಸಿಕೊಳ್ಳುತ್ತಿರುವ ಮಧುಮೇಹ ಸಮಸ್ಯೆ ನಿಜಕ್ಕೂ ಕಳವಳಕಾರಿ, ಇದಕ್ಕೆ ಪರಿಹಾರ ಎಂದರೆ ಆಟೋಟದಲ್ಲಿ ತೊಡಗಿಕೊಳ್ಳುವುದು,” ಎಂದು ಸಲಹೆ ನೀಡಿದರು.

Ashwath Narayan3 1

“ಜೀವನಶೈಲಿಯ ಸಮಸ್ಯೆಯಿಂದ ಬರುವಂಥ ಸ್ಥೂಲಕಾಯ, ಹೈಪರ್ ಟೆನ್ಶನ್, ಮಧುಮೇಹದಂಥ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ಕ್ರೀಡೆಯೇ ಪರಿಹಾರ. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಕ್ರೀಡೆಗೆ ಒತ್ತು ನೀಡಿ, ‘ಫಿಟ್ ಇಂಡಿಯಾ’ ಯೋಜನೆ ತಂದಿದೆ. ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚು ಒತ್ತು ನೀಡಿದ್ದು, ಕಾಯಿಲೆ ತಡೆ ಹಾಗೂ ನಿಯಂತ್ರಣಕ್ಕೆ ನಮ್ಮ ಕಡೆಯಿಂದ ಎಲ್ಲ ರೀತಿಯ ನೆರವು ನೀಡಲು ಬದ್ಧ,” ಎಂದು ಅವರು ಭರವಸೆ ಕೊಟ್ಟರು.

Ashwath Narayan2 1

“ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಜೀವನಶೈಲಿಯ ಆರೋಗ್ಯ ಸಮಸ್ಯೆ ನಿಯಂತ್ರಣ, ನಿವರ್ಹಣೆಯೇ ದೊಡ್ಡ ಸವಾಲು. ಭಾರತದಲ್ಲಿ 7.7 ಕೋಟಿ ಮಧುಮೇಹಿಗಳಿದ್ದು, ಇನ್ನು ಎಷ್ಟೋ ಜನರಿಗೆ ತಮಗೆ ಮಧುಮೇಹ ಇದೆ ಎಂಬ ವಿಷಯವೇ ಗೊತ್ತಿರುವುದಿಲ್ಲ. ಅಂಥವರನ್ನು ಪರೀಕ್ಷೆಗೆ ಒಳಪಡಿಸುವುದು ಒಂದು ರೀತಿಯ ಸವಾಲಾದರೆ, ಈಗಾಗಲೇ ಸಮಸ್ಯೆಯಿಂದ ಬಳಲುತ್ತಿರುವವರು ಕಾಯಿಲೆ ನಿಯಂತ್ರಣಕ್ಕೆ ಒತ್ತು ನೀಡದಿರುವುದು ಮತ್ತೊಂದು ಸವಾಲು. ಅಂಕಿ ಅಂಶಗಳ ಪ್ರಕಾರ ಶೇ.70ರಷ್ಟು ರೋಗಿಗಳು ಮಧುಮೇಹ ನಿಯಂತ್ರಿಸುವುದರಲ್ಲಿ ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ಇಂಥ ಸಮಾವೇಶಗಳು ನಿಜಕ್ಕೂ ದೊಡ್ಡ ವ್ಯತ್ಯಾಸ ಮಾಡಬಲ್ಲದು. ಕಾಯಿಲೆ ಬಗ್ಗೆ ಅರಿವು ಮೂಡಿಸುವ ಜೊತೆಗೆ ವಿನೂತನ ಚಿಕಿತ್ಸಾ ವಿಧಾನಗಳ ಮೇಲೆ ಬೆಳಕು ಚೆಲ್ಲುವ ಮೂಲಕ ವೈದ್ಯರಿಗೂ ನೆರವಾಗುವುದು,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡೆ ಈಗ ಪಠ್ಯಕ್ರಮ
“ಸಣ್ಣ ವಯಸ್ಸಿನವರಲ್ಲಿ ಟೈಪ್-2 ಮಧುಮೇಹ ಸಮಸ್ಯೆ ಹೆಚ್ಚುತ್ತಿದ್ದು, ಇದಕ್ಕೆ ಮುಖ್ಯ ಕಾರಣ ಪರೀಕ್ಷಾ ಒತ್ತಡ. ಮೊಬೈಲ್, ವೀಡಿಯೋ ನೋಡುವ ಚಟ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಮಕ್ಕಳು ಹೊರಗೆ ಆಡಲು ಹೋಗದಿರುವುದೇ ಈ ಸಮಸ್ಯೆಗೆ ಮೂಲ ಕಾರಣ. ಶಾಲೆಗಳಲ್ಲೂ ಕ್ರೀಡೆಗೆ ಹೆಚ್ಚಿನ ಅನುಕೂಲ ಇಲ್ಲದಿರುವುದೂ ಸಮಸ್ಯೆಗೆ ಮತ್ತೊಂದು ಕಾರಣ. ಎಷ್ಟೋ ಶಾಲೆಗಳಲ್ಲಿ ಮೈದಾನ ಇರುವುದಿಲ್ಲ. ಕೆಲ ಶಾಲೆಗಳಲ್ಲಿ ಮೈದಾನ ಇದ್ದರೂ ಆಡಲು ಕಳುಹಿಸುವುದಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಅರಿತು ಕೇಂದ್ರ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯಡಿ, ಕ್ರೀಡೆಯೂ ಪಠ್ಯಕ್ರಮದ ಭಾಗವನ್ನಾಗಿಸಿದೆ. ಈ ಮೊದಲು ಕ್ರೀಡೆ ಪಠ್ಯೇತರ ಚಟುವಟಿಕೆ ಆಗಿತ್ತು. ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮಕ್ಕಳು ಕಲಿಕೆಯಲ್ಲೂ ಮುಂದಿರುತ್ತಾರೆ ಎಂಬ ವಿಷಯವನ್ನು ನಾವು ಮರೆಯುವಂತಿಲ್ಲ,” ಎಂದರು.

Ashwath Narayan7

ಆಯುಷ್ಮಾನ್ ಭಾರತ್
“ದೇಶಾದ್ಯಂತ 1.5 ಲಕ್ಷ ಆಯುಷ್ಮಾನ್ ಉಪ ಕೇಂದ್ರಗಳಿದ್ದು, ಜೀವನ ಶೈಲಿಯಿಂದ ಬರುವಂಥ ಆರೋಗ್ಯ ಸಮಸ್ಯೆಗಳಿಗೆ ಇವು ಪರಿಹಾರ ಕೇಂದ್ರಗಳಾಗುತ್ತವೆ. ಮಧುಮೇಹ ಪರೀಕ್ಷಾ ಸೌಲಭ್ಯವೂ ಇಲ್ಲಿ ಲಭ್ಯವಿರಲಿದೆ. ಸರ್ಕಾರದ ಹಾಗೂ ವೈದ್ಯ ಸಮೂಹದ ಪ್ರತಿನಿಧಿಯಾಗಿ ಉತ್ತಮ ಜೀವನಶೈಲಿಯ ಮಹತ್ವವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತೇನೆ,” ಎಂದು ಅವರು ಹೇಳಿದರು.

TAGGED:Ashwath NarayanbengaluruDiabeteslifestylePublic TVsportsಕ್ರೀಡೆಜೀವನಶೈಲಿಡಾ.ಅಶ್ವತ್ಥನಾರಾಯಣಪಬ್ಲಿಕ್ ಟಿವಿಬೆಂಗಳೂರುಮಧುಮೇಹ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
28 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
41 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
1 hour ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?