ಬೆಂಗಳೂರು: ಕಾವೇರಿ (Cauvery) ವಿಚಾರವಾಗಿ ಕರೆ ನೀಡಲಾಗಿರುವ ಬೆಂಗಳೂರು ಬಂದ್ (Bengaluru Bandh) ಹಿನ್ನೆಲೆಯಲ್ಲಿ ಬೆಂಗಳೂರಿನ ದೇವನಹಳ್ಳಿ ಬಳಿಯ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport Bengaluru) ಮುಂಜಾನೆಯಿಂದಲೂ ಸಹಜ ಸ್ಥಿತಿಯಿದೆ.
ಏರ್ಪೋರ್ಟ್ನಲ್ಲಿ ಯಾವುದೇ ಬಂದ್ನ ಪರಿಸ್ಥಿತಿ ಇಲ್ಲ. ನಿಲ್ದಾಣದಲ್ಲಿ ಎಂದಿನಂತೆ ಕ್ಯಾಬ್ಗಳು ಸಂಚಾರ ಮಾಡುತ್ತಿದ್ದು, ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಇದನ್ನೂ ಓದಿ: ಬೆಂಗಳೂರು ಬಂದ್- ಎಂದಿನಂತೆ ಸಂಚರಿಸುತ್ತಿವೆ ಬಿಎಂಟಿಸಿ
ಓಲಾ, ಊಬರ್, ಕೆಎಸ್ಟಿಡಿಸಿ ಪ್ರಯಾಣಿಕರಿಗೆ ಸೌಲಭ್ಯ ಸಿಗುತ್ತಿದೆ. ಎಂದಿನಂತೆ ಪ್ರಯಾಣಿಕರು ಯಾವುದೇ ಪರದಾಟವಿಲ್ಲದೇ ಪ್ರಯಾಣ ಮಾಡುತ್ತಿದ್ದು, ಏರ್ಪೋರ್ಟ್ನಲ್ಲಿ ಸಹಜ ಸ್ಥಿತಿಯಿದೆ. ಬಿಎಂಟಿಸಿ ವಾಯುವಜ್ರ ವಾಹನಗಳು ಸಹ ರಸ್ತೆಗಿಳಿದಿದ್ದು ಪ್ರಯಾಣಿಕರಿಗೂ ಯಾವುದೇ ಸಮಸ್ಯೆ ಆಗಿಲ್ಲ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಮೂವರು ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]