– ಬಳ್ಳಾರಿ ವ್ಯಕ್ತಿ ಬೆಂಗ್ಳೂರು ಲಾಡ್ಜ್ ನಲ್ಲಿ ಸೂಸೈಡ್
ಬೆಂಗಳೂರು: ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರಿನ ಕಾಟನ್ ಪೇಟೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಳ್ಳಾರಿ ಮೂಲದ ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ವಸಂತ್ ಕುಮಾರ್ ಚಿಕಿತ್ಸೆಗೆ ಅಂತ ಬೆಂಗಳೂರಿಗೆ ಬಂದಿದ್ದನು. ಆದರೆ ಪದೇ ಪದೇ ಆರೋಗ್ಯ ಕೈ ಕೊಡುತ್ತಿತ್ತು. ಈ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಲಾಡ್ಜ್ ಒಳಗೆ ಓವರ್ ಡೋಸ್ ಇಂಜೆಕ್ಷನ್ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಠಡಿಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರಿಗೆ ಲಾಡ್ಜ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.