Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಉಪ ಚುನಾವಣೆ ರಣತಂತ್ರ: ದ್ರಾವಿಡ್‍ರನ್ನ ಭೇಟಿಯಾದ ಬಿಜೆಪಿ ನಾಯಕರು

Public TV
Last updated: September 22, 2019 11:17 pm
Public TV
Share
2 Min Read
RAHUL DRAVID 1
SHARE

ಬೆಂಗಳೂರು: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ರಾಹುಲ್ ದ್ರಾವಿಡ್ ನಿವಾಸಕ್ಕೆ ಭೇಟಿ ನೀಡಿದ ನಡ್ಡಾ ಅವರಿಗೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅರುಣ್ ಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದರು. ಈ ವೇಳೆ ಬಿಜೆಪಿ ನಾಯಕರು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ರದ್ದು ಮಾಡಿರುವ ಕುರಿತಾದ ಪುಸ್ತಕವನ್ನು ನೀಡಿದ್ದಾರೆ.

ಭೇಟಿಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸದಾನಂದಗೌಡ ಅವರು, 70 ವರ್ಷದ ನಂತರ ಐತಿಹಾಸಿಕ ನಿರ್ಣಯವನ್ನು ಪ್ರಧಾನಿ ಮೋದಿ ಸರ್ಕಾರ ತೆಗೆದುಕೊಂಡಿದೆ. ದೇಶದ ಐಕ್ಯತೆ ಧಕ್ಕೆಯಾಗಿದ್ದ ನಿಯಮಾವಳಿಗಳನ್ನು ತೆಗೆದುಹಾಕಲಾಗಿದೆ. ಆದರೆ ಇದು ಯಾಕಾಯ್ತು, ಏನಾಯ್ತು ಎನ್ನುವುದು ಸಣ್ಣಪುಟ್ಟ ಕೊಂದಲಗಳಿವೆ. ಈ ನಿರ್ಣಯದ ಕುರಿತು ಜನರಿಗೆ ತಿಳಿಸಬೇಕಿ ಎಂದು ಹೇಳಿದರು.

RAHUL DRAVID A

ರಾಹುಲ್ ದ್ರಾವಿಡ್ ಪಾಕಿಸ್ತಾನ ಸೇರಿದಂತೆ ದೇಶ, ವಿದೇಶಗಳಲ್ಲಿ ಕ್ರಿಕೆಟ್ ಆಡಿದವರು. ಕಾಶ್ಮೀರದ ಮೈದಾನದಲ್ಲೂ ಕ್ರಿಕೆಟ್ ಆಡಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಕ್ರಿಕೆಟ್ ಮಂಡಳಿಗಳಿವೆ. ಆದರೆ ಕಾಶ್ಮೀರದಲ್ಲಿ ಕ್ರಿಕೆಟ್ ಮಂಡಳಿ ಮಾಡುವುದಕ್ಕೆ ಬಿಡಲಿಲ್ಲ ಅಂತ ದ್ರಾವಿಡ್ ತಿಳಿಸಿದ್ದಾರೆ ಎಂದರು.

ದೇಶದಲ್ಲಿ ಪ್ರಮುಖರನ್ನು ಭೇಟಿ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ, ಬನ್ನಂಜೆ ಗೋವಿಂದ ಆಚಾರ್ಯ ಸೇರಿದಂತೆ ಹಲವರನ್ನು ಭೇಟಿಯಾಗಿದ್ದೇವೆ. ದೇಶದ ಏಕತೆಗೆ ಒತ್ತು ನೀಡಲು ಹಾಗೂ ಒಂದು ದೇಶ ಒಂದು ಸಂವಿಧಾನ ಇರಬೇಕು ಎನ್ನವುದು ಉದ್ದೇಶದಿಂದ ಶ್ರಮಿಸುತ್ತಿದ್ದೇವೆ ಎಂದು ಸದಾನಂದ ಗೌಡ ತಿಳಿಸಿದರು.

Sadananda Gowda

ಪ್ರವಾಹ ಪರಿಹಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ರಾಜ್ಯಕ್ಕೆ ಅಲೌಟ್ ಆದ ಹಣ ಡಿಸೆಂಬರ್ ನಲ್ಲಿ ಬರಬೇಕಿತ್ತು. ಆದರೆ ಈಗಾಗಲೇ 380 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಕರ್ನಾಟಕ ಮಾತ್ರವಲ್ಲ ಕೇರಳ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭೀಕರ ಪ್ರವಾಹ ಉಂಟಾಗಿದೆ. ಅಲ್ಲಿಗೂ ಕೂಡ ಪರಿಹಾರ ನೀಡಬೇಕಿದೆ ಎಂದು ಹೇಳಿದರು.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ತೆರವು ಆದ ಸ್ಥಾನಕ್ಕೆ ಆರು ತಿಂಗಳೊಳಗೆ ಚುನಾವಣೆ ಆಗಬೇಕು. ಯಾವತ್ತೂ ಸರ್ಕಾರ ರಚನೆ ಮಾಡಿದ್ವೋ, ಅಂದಿನಿಂದಲೇ ಉಪ ಚುನಾವಣೆಗೆ ಸಿದ್ಧರಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ 25+1 ಗೆದ್ದಂತೆ, 15ಕ್ಕೆ 15 ಸ್ಥಾನಗಳನ್ನೂ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

TAGGED:bengalurubjpJP NaddaPublic TVRahul Dravidಉಪ ಚುನಾವಣೆಜೆ.ಪಿ.ನಡ್ಡಾಪಬ್ಲಿಕ್ ಟಿವಿಬಿಜೆಪಿಮಾಜಿ ಕ್ರಿಕೆಟಿಗರಾಹುಲ್ ದ್ರಾವಿಡ್
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
45 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
1 hour ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
1 hour ago
01 NEW 1
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 1

Public TV
By Public TV
1 hour ago
02 NEW
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 2

Public TV
By Public TV
1 hour ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?