ಬೆಂಗಳೂರು: ಬಿಎಂಟಿಸಿ ಬಸ್ ಸಂಚಾರ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ನಡೆದಿದೆ.
ಬಸ್ ಚಲಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿ 40 ಪ್ರಯಾಣಿಕರಿದ್ದರು, ಯಾವುದೇ ಸಾವು ನೋವು ಸಂಭವಿಸಿಲ್ಲ. ಬೇರೆ ಬಸ್ಗೆ ಶಿಫ್ಟ್ ಮಾಡಿ ಪ್ರಯಾಣಿಕರನ್ನು ಕಳಿಸಲಾಗಿದೆ. ಕೆ ಆರ್ ಮಾರ್ಕೆಟ್ಗೆ ಹೊರಟಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ
ಕಂಡಕ್ಟರ್ ಬಾಕ್ಸ್ನಲ್ಲಿ ಇಡಲಾಗಿದ್ದ ಬಸ್ ಟಿಕೆಟ್ ಸುಟ್ಟು ಭಸ್ಮವಾಗಿವೆ. ಡ್ರೈವರ್, ಕಂಡಕ್ಟರ್ ಬಸ್ಗೆ ಹತ್ತಿರುವ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದು. ಪೊಲೀಸರು ರಸ್ತೆ ಬಂದ್ ಮಾಡಿಸಿದ್ದಾರೆ. ಮಿನಿ ನೀರಿನ ಟ್ಯಾಂಕರ್ ಮೂಲಕ ಬೆಂಕಿ ನಂದಿಸಲಾಗುತ್ತಿದೆ. ಇದನ್ನೂ ಓದಿ: ಪತಿ ಕೊಂದು ಕತ್ತರಿಸಿದ ತಲೆ ಠಾಣೆಗೆ ತಂದು ಶರಣಾದಳು