ಬಿಪಿಎಲ್‍ ಕಾರ್ಡಿಗೆ ಅರ್ಜಿ ಹಾಕಿದವ್ರಿಗೂ ನಾಳೆಯಿಂದ ಪಡಿತರ: ಗೋಪಾಲಯ್ಯ

Public TV
1 Min Read
gopalaiah

ಬೆಂಗಳೂರು: ನಾಳೆ(ಶನಿವಾರ)ದಿಂದ ಬಿಪಿಎಲ್‍ ರಹಿತರಿಗೂ ಪಡಿತರ ನೀಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‍ಗಾಗಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ 3 ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲಾಗುವುದು. ಏಪ್ರಿಲ್, ಮೇ ಹಾಗೂ ಜೂನ್ ಈ ಮೂರು ತಿಂಗಳ ಪಡಿತರ ನಿಡಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸಿದ ಪ್ರತಿ ತೋರಿಸಿ ಪಡಿತರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.

rice

2 ಲಕ್ಷದ 22 ಸಾವಿರ ಜನ ಬಿಪಿಲ್ ಕಾರ್ಡ್‍ಗೆ ಅರ್ಜಿ ಹಾಕಿದ್ರು. ಈಗ 1 ಲಕ್ಷ 89 ಸಾವಿರ ಅರ್ಜಿಗಳು ವಿಲೇವಾರಿಯಾಗಲು ಬಾಕಿ ಇವೆ. ಹೀಗಾಗಿ ಅರ್ಜಿ ಹಾಕಿರುವ ಫಲಾನುಭವಿಗಳಿಗೆ ಸರ್ಕಾರ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ನೀಡುವ ತೀರ್ಮಾನವನ್ನು ಮಾಡಲಾಗಿದ್ದು, ನಾಳೆಯಿಂದ ವಿತರಣೆ ಮಾಡಲಾಗುತ್ತದೆ. ಈ ರಾಜ್ಯದಲ್ಲಿ ಬಿಪಿಲ್ ಕಾರ್ಡಿಗೆ ಅರ್ಜಿ ಹಾಕಿದ್ದಾರೆಯೋ ಅವರು ಅರ್ಜಿ ಸಲ್ಲಿಸಿರುವ ನಕಲು ತೆಗೆದುಕೊಂಡು ಹೋಗಿ ತೋರಿಸಿ ಓಟಿಪಿ ಮುಖೇನ ಮೂರು ತಿಂಗಳ ತಲಾ 10 ಕೆ.ಜಿ ಅಕ್ಕಿಯನ್ನು ಕೊಡಲಾಗುತ್ತದೆ ಎಂದು ಹೇಳಿದರು.

ಕೇಂದ್ರದಿಂದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆ(ಪಿಎಂಜಿಕೆವೈ) ವತಿಯಿಂದ ಮೂರು ತಿಂಗಳು ಓರ್ವನಿಗೆ 5 ಕೆ.ಜಿ ಅಕ್ಕಿ ಹಾಗೂ ಕುಟುಂಬಕ್ಕೆ 1 ಕೆ.ಜಿ ಬೇಳೆಯನ್ನು ಕೊಡುವ ಘೋಷಣೆ ಮಾಡಲಾಗಿದೆ. ಹೀಗಾಗಿ ಪ್ರಧಾನಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವರು ತಿಳಿಸಿದರು.

gopal 1

ಕೇಂದ್ರ ಸರ್ಕಾರ ಕೊಟ್ಟಿರುವಂತಹ ದಾಸ್ತಾನುಗಳನ್ನು ಈಗಾಗಲೇ ನಮ್ಮ ಮಳಿಗೆಗೆ ಸಾಗಿಸುವ ಕೆಲಸ ಮಾಡಿದ್ದೇವೆ. ಮೇ.1ರಂದು ರಾಜ್ಯದ 19, 800 ಅಂಗಡಿಗಳನ್ನು ಒಟ್ಟಿಗೆ ಪ್ರಾರಂಭ ಮಾಡುವ ಉದ್ದೇಶವಿದೆ. ಈ ಮೂಲಕ ಮೇ 1ರಿಂದ ಓರ್ವ ವ್ಯಕ್ತಿಗೆ 2 ತಿಂಗಳಿಗಾಗುವಷ್ಟು 10 ಕೆ.ಜಿ ಅಕ್ಕಿ ಹಾಗೂ 1 ಕೆ.ಜಿ ಬೇಳೆಯನ್ನು ಕೊಡಲಾಗುತ್ತದೆ. ಮುಂದಿನ ತಿಂಗಳು 5 ಕೆ.ಜಿ ಅಕ್ಕಿ ಹಾಗೂ 2 ಕೆ.ಜಿ ಬೇಳೆಯನ್ನು ಕೊಡುವ ಮೂಲಕ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *