Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ ಸಂಪುಟ ರಚನೆ- 10 ಮಂದಿ ಸಚಿವರಾಗಿ ಪ್ರಮಾಣ ವಚನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಸ್‍ವೈ ಸಂಪುಟ ರಚನೆ- 10 ಮಂದಿ ಸಚಿವರಾಗಿ ಪ್ರಮಾಣ ವಚನ

Bengaluru City

ಬಿಎಸ್‍ವೈ ಸಂಪುಟ ರಚನೆ- 10 ಮಂದಿ ಸಚಿವರಾಗಿ ಪ್ರಮಾಣ ವಚನ

Public TV
Last updated: February 6, 2020 8:38 pm
Public TV
Share
2 Min Read
CABINET BSY 1 copy
SHARE

ಬೆಂಗಳೂರು: ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಚುನಾಯಿತರಾದ ವಲಸಿಗ ಶಾಸಕರು ಕೊನೆಗೂ ಸಚಿವರಾಗಿ ಗೆಲುವಿನ ನಗೆ ಬೀರಿದ್ದಾರೆ. ಇವತ್ತು ರಾಜಭವನದಲ್ಲಿ ನಡೆದ ಸರಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ 10 ಶಾಸಕರೂ ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಯಡಿಯೂರಪ್ಪನವರ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದ್ದಾರೆ. ಆ ಮೂಲಕ ರಾಜ್ಯ ಸಚಿವ ಸಂಪುಟ ಎರಡನೇ ಬಾರಿಗೆ ವಿಸ್ತರಣೆಯಾಗಿದೆ. ವಕಸಿಗರ ಸೇರ್ಪಡೆಯಿಂದ ರಾಜ್ಯ ಸಚಿವ ಸಂಪುಟದ ಸಂಖ್ಯಾಬಲ 28 ಕ್ಕೆ ಏರಿದೆ. ಅಲ್ಲದೆ, ರಾಜ್ಯ ಸಚಿವ ಸಂಪುಟದಲ್ಲಿ ಇನ್ನೂ ಆರು ಸ್ಥಾನಗಳು ಖಾಲಿ ಇವೆ.

CABINET BSY

ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್, ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಲಕ್ಷ್ಮಣ ರಾವ್ ಜಾರಕೀಹೊಳಿ, ವಿಜಯನಗರ ಕ್ಷೇತ್ರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್, ಕೃಷ್ಣರಾಜಪುರ ಕ್ಷೇತ್ರದ ಶಾಸಕ ಬಿಎ ಬಸವರಾಜ್, ಯಲ್ಲಾಪುರ ಕ್ಷೇತ್ರದ ಶಾಸಕ ಅರೆಬೈಲ್ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಕ್ಷೇತ್ರದ ಬಸವನಗೌಡ ಚನ್ನಬಸವನಗೌಡ ಪಾಟೀಲ್, ಮಹಾಲಕ್ಷೀಪುರ ಕ್ಷೇತ್ರದ ಶಾಸಕ ಕೆ ಗೋಪಾಲಯ್ಯ, ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕ ಎಂ ಸಿ ನಾರಾಯಣಗೌಡ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಬಾಳಾ ಸಾಹೇಬ್ ಪಾಟೀಲ್ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಹಾಗೂ ಕಿಕ್ಕಿರಿದ ಸಮಾರಂಭದಲ್ಲಿ ನೆರೆದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಸಂಪುಟ ದರ್ಜೆ ಸಚಿವರಾಗಿ ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

CABINET copy

ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಅವರು ಎಲ್ಲಾ ಹತ್ತು ಸಚಿವರಿಗೆ ಅಧಿಕಾರಪದ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು. ಗುರುವಾರ ಬೆಳಿಗ್ಗೆ 10-30 ಗಂಟೆಗೆ ಪ್ರಾರಂಭವಾದ ಈ ಸಮಾರಂಭವು ಮೂವತ್ತು ನಿಮಿಷಗಳ ಕಾಲ ನಡೆಯಿತು.

ಕಾರ್ಯಕ್ರಮದ ವಿಶೇಷತೆಗಳು: ಪ್ರಮಾಣ ವಚನ ಸ್ವೀಕರಿಸಿದೊಡನೆಯೇ, ಎಲ್ಲಾ ಹತ್ತೂ ಸಚಿವರಿಗೂ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಯವರು ಹೂಗುಚ್ಛ ನೀಡಿ ಅಭಿನಂದಿಸಿದರು. ಎಲ್ಲಾ ಸಚಿವರೂ ಕನ್ನಡ ಭಾಷೆಯಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಆಕರ್ಷಕ ಅಂಶವಾಗಿತ್ತು. ಅಲ್ಲದೆ, ಶಿವರಾಮ್ ಹೆಬ್ಬಾರ್ ಅವರು ತಮ್ಮ ತಂದೆ-ತಾಯಿ ಹಾಗೂ ತಮ್ಮ ಕ್ಷೇತ್ರ ಜನತೆಯಲ್ಲಿಯೂ ಪ್ರಮಾಣ ವಚನ ಸ್ವೀಕರಿಸಿದರು. ನಂತರ, ಬಿ ಸಿ ಪಾಟೀಲ್ ಅವರೂ ತಂದೆ-ತಾಯಿ, ಕ್ಷೇತ್ರ ಜನತೆಯ ಜೊತೆಗೆ ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿಪ್ರಮಾಣ ವಚನ ಸ್ವೀಕರಿಸಿದರು.

ರಮೇಶ್ ಜಾರಕಿಹೊಳಿ ಅವರು ಎಂದಿನಂತೆ ಸರಳ ಉಡುಪಿನಲ್ಲಿ ಆಗಮಿಸಿದ್ದರು. ಕೆ ಗೋಪಾಲಯ್ಯ ಅವರು ಸಾಂಪ್ರದಾಯಿಕ ರೇಷ್ಮೆ ವಸ್ತ್ರಧಾರಿಯಾಗಿ ಎಲ್ಲರ ಗಮನಸೆಳೆದರು.  ಎಸ್ ಟಿ ಸೋಮಶೇಖರ್, ಡಾ ಕೆ ಸುಧಾಕರ್, ಬಿ ಎ ಬಸವರಾಜ್, ಶಿವರಾಮ ಹೆಬ್ಬಾರ್, ಬಿ ಸಿ ಪಾಟೀಲ್, ಕೆ ಗೋಪಾಲಯ್ಯ, ಎಂ ಸಿ ನಾರಾಯಣಗೌಡ ಹಾಗೂ ಶ್ರೀಮಂತ ಪಾಟೀಲ್ ಅವರು ಪ್ರಪ್ರಥಮ ಬಾರಿಗೆ ರಾಜ್ಯ ಸಚಿವ ಸಂಪುಟವನ್ನು ಪ್ರವೇಶಿಸಿದ್ದಾರೆ. ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಅವರು ಈ ಮುನ್ನ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಬಿ ಎಸ್ ಯಡಿಯೂರಪ್ಪ ಸಚಿವ ಸಂಪುಟದ ಸದಸ್ಯರು, ಸಂಸದರು ಹಾಗೂ ಶಾಸಕರೂ ಸೇರಿದಂತೆ ಹಲವು ಗಣ್ಯರು, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

 

TAGGED:bengaluruBSYeddyurappacabinetministersPublic TVಪಬ್ಲಿಕ್ ಟಿವಿಬಿಎಸ್‍ವೈಬೆಂಗಳೂರುಸಚಿವಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
5 minutes ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
47 minutes ago
Turkish Air Force
Latest

Video Viral | ಅಮೆರಿಕ ನಿರ್ಮಿತ ಎಫ್‌-16 ಯುದ್ಧ ವಿಮಾನ ಪತನ – ಪೈಲಟ್‌ ಸಾವು

Public TV
By Public TV
1 hour ago
Vishwakarma Mahasamsthana Mutt 2
Bengaluru City

ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ, ಶಿಷ್ಯ ಸ್ವೀಕಾರ ಸಮಾರಂಭ

Public TV
By Public TV
2 hours ago
Ramanagar Robbery
Districts

ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ – ಖದೀಮರು ಎಸ್ಕೇಪ್

Public TV
By Public TV
2 hours ago
Madikeri Accident 2
Crime

ಮಡಿಕೇರಿ | 20 ಅಡಿ ಆಳದ ಗದ್ದೆಗೆ ಉರುಳಿದ ಕಾರು; ತಾಯಿ – ಮಗ ಸೇಫ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?