1 ಸಾವಿರ ಪೊಲೀಸರು, 3 ಸಾವಿರ ಪಾಸ್ ವ್ಯವಸ್ಥೆ- ಅಲೋಕ್ ಕುಮಾರ್

Public TV
1 Min Read
alok kumar ips final 1

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಪೊಲೀಸರು ಹಾಗೂ ಪಾಸ್ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ಯಡಿಯೂರಪ್ಪ ಅವರ ಪ್ರಮಾಣ ವಚನ ಕಾರ್ಯಕ್ರಮ ಇದೆ. ಇದಕ್ಕಾಗಿ ನಾವು ಏನೆಲ್ಲ ಭದ್ರತೆ ಮಾಡಬೇಕೋ ಅದನ್ನು ಮಾಡುತ್ತೇವೆ. ಅಧಿಕಾರಿಗಳ ಸಭೆ ಕರೆದು ಬಂದೋಬಸ್ತ್ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದ್ದಾರೆ.

ನಾವು ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ. ಇದಕ್ಕಾಗಿ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗುವುದು. ಹಾಗೆಯೇ 3 ಸಾವಿರ ಪಾಸ್ ಗಳ ವ್ಯವಸ್ಥೆ ಮಾಡಿದ್ದೇವೆ. ಕೇಂದ್ರದ ನಾಯಕರು ಬಂದರೆ ಹೆಚ್ಚುವರಿ ಭದ್ರತೆ ಒದಗಿಸುವುದಾಗಿ ಅವರು ಹೇಳಿದರು.

BSY 2

ಇಂದು ಬೆಳಗ್ಗೆ ತಮ್ಮ ನಿವಾಸದ ಎದುರು ಮಾತನಾಡಿದ್ದ ಬಿಎಸ್‍ವೈ, ಈಗಾಗಲೇ ನಾನು ವಿರೋಧ ಪಕ್ಷದ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗದ ಸಭೆ ಅಗತ್ಯವಿಲ್ಲ. ಹೀಗಾಗಿ ನಾನು ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಮಾಡಲು ಹಕ್ಕು ಮಂಡನೆ ಮಾಡಲಿದ್ದೇನೆ. ಅಲ್ಲದೆ ಇವತ್ತೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲು ಅವಕಾಶ ಮಾಡಿಕೊಡಿ ಎಂದು ರಾಜ್ಯಪಾಲ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದರು. ಆ ಬಳಿಕ ಸಂಜಯನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

ಮೈತ್ರಿ ಸರ್ಕಾರ ಪತನಗೊಂಡು ಇಂದಿಗೆ 4 ದಿನಗಳು ಆಗಿದ್ದು, ದಿಢೀರ್ ಬೆಳವಣಿಗೆ ಎಂಬಂತೆ ಹೈಕಮಾಂಡ್ ಬಿಎಸ್‍ವೈ ಅವರಿಗೆ ಸೂಚನೆ ನೀಡಿದೆ. ಸರ್ಕಾರ ರಚನೆ ತಡವಾದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹಲವು ಅನುಮಾನಗಳು ಮೂಡಿತ್ತು. ಆದರೆ ಈ ಎಲ್ಲ ಗಾಳಿ ಸುದ್ದಿಗಳಿಗೆ ತೆರೆ ಎಳೆದಿರುವ ಹೈಕಮಾಂಡ್ ಸ್ಪಷ್ಟ ಸಂದೇಶ ರವಾನೆ ಮಾಡಿದೆ. ತುರ್ತು ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ಗೈರಾಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

Share This Article
Leave a Comment

Leave a Reply

Your email address will not be published. Required fields are marked *