Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದನ ನುಂಗಿದ ದೊರೆಸ್ವಾಮಿ ಕುರಿತ ಯತ್ನಾಳ್ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದನ ನುಂಗಿದ ದೊರೆಸ್ವಾಮಿ ಕುರಿತ ಯತ್ನಾಳ್ ಹೇಳಿಕೆ

Bengaluru City

ಸದನ ನುಂಗಿದ ದೊರೆಸ್ವಾಮಿ ಕುರಿತ ಯತ್ನಾಳ್ ಹೇಳಿಕೆ

Public TV
Last updated: March 2, 2020 6:33 pm
Public TV
Share
3 Min Read
VIDHANASABHE
SHARE

– ಅಧಿವೇಶನದಿಂದ ಬಹಿಷ್ಕಾರಕ್ಕೆ ಕೈ, ಜೆಡಿಎಸ್ ಪಟ್ಟು

ಬೆಂಗಳೂರು: ಬಜೆಟ್ ಅಧಿವೇಶನದ ಮೊದಲ ದಿನವೇ ವಿಧಾನಸಭೆ ಕಲಾಪದಲ್ಲಿ ಗದ್ದಲ-ಕೋಲಾಹಲ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಕುರಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕಲಾಪದಲ್ಲಿ ತೀವ್ರ ಮಾತಿನ ಚಕಮಕಿ, ಧರಣಿಗೆ ವೇದಿಕೆ ಒದಗಿಸಿಕೊಟ್ಟಿತ್ತು.

ಗದ್ದಲಕ್ಕೆ ಇಡೀ ದಿನದ ಕಲಾಪವೇ ಬಲಿಯಾಯ್ತು. ಅಗಲಿದ ಗಣ್ಯರಿಗೆ ಸಂತಾಪ ಸೂಚನೆಯ ಬಳಿಕ ಸದನದಲ್ಲಿ ಶಾಸಕ ಬಸನಗೌಡ ಯತ್ನಾಳ್ ಅವರು ದೊರೆಸ್ವಾಮಿಯವರಿಗೆ ಅವಹೇಳನ ಮಾಡಿದ್ದಾರೆ. ಈ ಕುರಿತು ಚರ್ಚೆಗೆ ಅವಕಾಶ ಕೊಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ತಸ್ತಾವನೆ ಸಲ್ಲಿಕೆಗೆ ಮುಂದಾದರು.

BUDGET SESSION

ಸ್ಪೀಕರ್‍ಗೆ ನಿಯಮ 363ರಡಿ ವಿವೇಚನಾಧಿಕಾರ ಬಳಸಿ ಚರ್ಚೆಗೆ ಅವಕಾಶ ಕೊಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದರು. ಸಿದ್ದರಾಮಯ್ಯ ಒತ್ತಾಯಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಶುರು ಮಾಡಿದರು. ಪ್ರತಿಯಾಗಿ ಕಾಂಗ್ರೆಸ್ ಸದಸ್ಯರೂ ವಾಕ್ಸಮರ ನಡೆಸಿದರು. ಸಿದ್ದರಾಮಯ್ಯ ಮನವಿಗೆ ಸ್ಪೀಕರ್ ಒಪ್ಪದಿದ್ದಾಗ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಸ್ವಾತಂತ್ರ್ಯ ಹೋರಾಟಗಾರರನ್ನ ಯತ್ನಾಳ್ ಅವಮಾನಿಸಿದ್ದು ಸರಿಯಲ್ಲ. ಅವರನ್ನ ಉಚ್ಛಾಟಿಸಬೇಕು ಅಂತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ವೇಳೆ ಒತ್ತಾಯಿಸಿದರು. ಧಿಕ್ಕಾರ ಧಿಕ್ಕಾರ ಸರ್ಕಾರಕ್ಕೆ ಧಿಕ್ಕಾರ ಅಂತ ಕೈ ಸದಸ್ಯರು ಜೋರು ಘೋಷಣೆ ಮಾಡಿದರು. ಕಾಂಗ್ರೆಸ್ ಸದಸ್ಯರಿಗೆ ಜೆಡಿಎಸ್ ಸದಸ್ಯರೂ ಪ್ರತಿಭಟನೆಗೆ ಸಾಥ್ ನೀಡಿದ್ರು. ಧರಣಿ ಕೈಬಿಡುವಂತೆ ಸ್ಪೀಕರ್ ಮಾಡಿದ ಮನವಿಗೆ ಧರಣಿನಿರತರು ಒಪ್ಪಲಿಲ್ಲ. ಪರಿಣಾಮ ಸ್ಪೀಕರ್ ಕಾಗೇರಿ ಸದನವನ್ನು ಮಧ್ಯಾಹ್ನ 3ಕ್ಕೆ ಮುಂದೂಡಿದರು.

BUDGET 1

ಮಧ್ಯಾಹ್ನ ಸ್ಪೀಕರ್ ಕಾಗೇರಿ ಪ್ರತಿಪಕ್ಷ ನಾಯಕರ ಜೊತೆ ಸಂಧಾನ ಸಭೆ ನಡೆಸಿದರು. ಧರಣಿ ಕೈ ಬಿಡುವಂತೆ ಸ್ಪೀಕರ್ ಮಾಡಿಕೊಂಡ ಮನವಿಗೆ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಒಪ್ಪದೇ ಯತ್ನಾಳ್ ಹೇಳಿಕೆ ಕುರಿತು ಚರ್ಚೆ ಮತ್ತು ಯತ್ನಾಳ್ ಅವರ ಬಹಿಷ್ಕಾರಕ್ಕೆ ಪಟ್ಟು ಹಿಡಿದರು. ಈ ಕುರಿತು ಆಡಳಿತ ಪಕ್ಷದ ಸದಸ್ಯರ ಜೊತೆ ಚರ್ಚಿಸೋದಾಗಿ ಹೇಳಿ ಸ್ಪೀಕರ್ ಸಭೆ ಮುಗಿಸಿದ್ರು. ಬಳಿಕ ಸ್ಪೀಕರ್ ಸಿಎಂ ಯಡಿಯೂರಪ್ಪ ಸೇರಿ ಹಲವರ ಜೊತೆ ಚರ್ಚಿಸಿದರು. ನಂತರ ಮತ್ತೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಆದರೆ ಈ ಸಂಧಾನ ಸಭೆಯೂ ವಿಫಲವಾಯ್ತು. ಸದನದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ನಿರ್ಧರಿಸಿತು.

BUDGET 6

ಮಧ್ಯಾಹ್ನದ ಕಲಾಪ ಒಂದು ಗಂಟೆ ವಿಳಂಬವಾಗಿ 4ಕ್ಕೆ ಶುರುವಾಯ್ತು. ಮಧ್ಯಾಹ್ನದ ಕಲಾಪದಲ್ಲೂ ಕಾಂಗ್ರೆಸ್ ಸದನದ ಬಾವಿಗಿಳಿದು ಧರಣಿ ನಡೆಸಿದರು. ಆದರೆ ಈ ಧರಣಿಗೆ ಜೆಡಿಎಸ್ ಸದಸ್ಯರು ಸಾಥ್ ಕೊಡದೇ ತಮ್ಮ ಜಾಗಗಳಲ್ಲೇ ಕೂತಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಸ್ಪೀಕರ್ ಕಾಗೇರಿ ಚರ್ಚೆಗೆ ಕೋರಿದ ಸಿದ್ದರಾಮಯ್ಯ ಅವರ ಮನವಿಯನ್ನು ತಿರಸ್ಕರಿಸಿದರು. ತಮ್ಮ ವಿವೇಚನಾಧಿಕಾರದಲ್ಲಿ ಯತ್ನಾಳ್ ಹೇಳಿಕೆ ಕುರಿತು ಚರ್ಚೆಗೆ ಅವಕಾಶ ಕೊಡುವುದು ಅಸಾಧ್ಯ. ಹಾಗಾಗಿ ನಿಯಮ 307 ರ ಅನ್ವಯ ಯತ್ನಾಳ್ ಹೇಳಿಕೆ ಕುರಿತು ಚರ್ಚೆಗೆ ಲಿಖಿತ ನೊಟೀಸ್ ಕೊಟ್ಟರೆ ಚರ್ಚೆಗೆ ಅವಕಾಶ ಕೊಡುವುದಾಗಿ ಕಾಂಗ್ರೆಸ್ಸಿಗೆ ಸ್ಪೀಕರ್ ತಿಳಿಸಿದರು. ಸ್ಪೀಕರ್ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಧರಣಿ ಮುಂದುವರಿಸಿತು. ಈ ವೇಳೆ ಸಿಎಂ ಯಡಿಯೂರಪ್ಪ ಮಾಡಿಕೊಂಡ ಮನವಿಗೂ ಕಾಂಗ್ರೆಸ್ ಒಪ್ಪಲಿಲ್ಲ. ಈ ಮಧ್ಯೆ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಸದನದಲ್ಲಿ ಜೋರಾಗಿ ಧಿಕ್ಕಾರ ಕೂಗಲಾರಂಭಿಸಿದರು.

BUDGET 8

ಇದೇ ವೇಳೆ ಎದ್ದು ನಿಂತ ಸಚಿವ ಈಶ್ವರಪ್ಪ, ಮೋದಿಯವರು ಕೊಲೆಗಡುಕರು ಅಂತ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದರು. ಹಾಗಾಗಿ ಸಿದ್ದರಾಮಯ್ಯರನ್ನು ಈ ಸದನದಿಂದ ಸಸ್ಪೆಂಡ್ ಮಾಡಿ ಎಂದು ಎರಡು ಸಲ ಕೂಗಿ ಹೇಳಿದರು. ಇಷ್ಟೆಲ್ಲ ಗದ್ದಲ, ಕೋಲಾಹಲದ ಮಧ್ಯೆಯೇ ಎಂಟು ವಿಧೇಯಕಗಳನ್ನು ಮಂಡಿಸಿ ಸರ್ಕಾರ ಚರ್ಚೆಯಿಲ್ಲದೇ ಅವುಗಳಿಗೆ ಅಂಗೀಕಾರವನ್ನೂ ಪಡೆದುಕೊಂಡಿತು. ಕಾಂಗ್ರೆಸ್ ಧರಣಿ ಮುಂದುವರಿದ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಕಲಾಪವನ್ನು ನಾಳೆಗೆ ಮುಂದೂಡಬೇಕಾಯ್ತು.

TAGGED:Basangouda Patil YatnalbengaluruPublic TVsiddaramaiahvidhanasabheಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬೆಂಗಳೂರುವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
14 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
14 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
29 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
49 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
52 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?