Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದನ ನುಂಗಿದ ದೊರೆಸ್ವಾಮಿ ಕುರಿತ ಯತ್ನಾಳ್ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದನ ನುಂಗಿದ ದೊರೆಸ್ವಾಮಿ ಕುರಿತ ಯತ್ನಾಳ್ ಹೇಳಿಕೆ

Bengaluru City

ಸದನ ನುಂಗಿದ ದೊರೆಸ್ವಾಮಿ ಕುರಿತ ಯತ್ನಾಳ್ ಹೇಳಿಕೆ

Public TV
Last updated: March 2, 2020 6:33 pm
Public TV
Share
3 Min Read
VIDHANASABHE
SHARE

– ಅಧಿವೇಶನದಿಂದ ಬಹಿಷ್ಕಾರಕ್ಕೆ ಕೈ, ಜೆಡಿಎಸ್ ಪಟ್ಟು

ಬೆಂಗಳೂರು: ಬಜೆಟ್ ಅಧಿವೇಶನದ ಮೊದಲ ದಿನವೇ ವಿಧಾನಸಭೆ ಕಲಾಪದಲ್ಲಿ ಗದ್ದಲ-ಕೋಲಾಹಲ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಕುರಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕಲಾಪದಲ್ಲಿ ತೀವ್ರ ಮಾತಿನ ಚಕಮಕಿ, ಧರಣಿಗೆ ವೇದಿಕೆ ಒದಗಿಸಿಕೊಟ್ಟಿತ್ತು.

ಗದ್ದಲಕ್ಕೆ ಇಡೀ ದಿನದ ಕಲಾಪವೇ ಬಲಿಯಾಯ್ತು. ಅಗಲಿದ ಗಣ್ಯರಿಗೆ ಸಂತಾಪ ಸೂಚನೆಯ ಬಳಿಕ ಸದನದಲ್ಲಿ ಶಾಸಕ ಬಸನಗೌಡ ಯತ್ನಾಳ್ ಅವರು ದೊರೆಸ್ವಾಮಿಯವರಿಗೆ ಅವಹೇಳನ ಮಾಡಿದ್ದಾರೆ. ಈ ಕುರಿತು ಚರ್ಚೆಗೆ ಅವಕಾಶ ಕೊಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ತಸ್ತಾವನೆ ಸಲ್ಲಿಕೆಗೆ ಮುಂದಾದರು.

BUDGET SESSION

ಸ್ಪೀಕರ್‍ಗೆ ನಿಯಮ 363ರಡಿ ವಿವೇಚನಾಧಿಕಾರ ಬಳಸಿ ಚರ್ಚೆಗೆ ಅವಕಾಶ ಕೊಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದರು. ಸಿದ್ದರಾಮಯ್ಯ ಒತ್ತಾಯಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಗದ್ದಲ ಶುರು ಮಾಡಿದರು. ಪ್ರತಿಯಾಗಿ ಕಾಂಗ್ರೆಸ್ ಸದಸ್ಯರೂ ವಾಕ್ಸಮರ ನಡೆಸಿದರು. ಸಿದ್ದರಾಮಯ್ಯ ಮನವಿಗೆ ಸ್ಪೀಕರ್ ಒಪ್ಪದಿದ್ದಾಗ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಸ್ವಾತಂತ್ರ್ಯ ಹೋರಾಟಗಾರರನ್ನ ಯತ್ನಾಳ್ ಅವಮಾನಿಸಿದ್ದು ಸರಿಯಲ್ಲ. ಅವರನ್ನ ಉಚ್ಛಾಟಿಸಬೇಕು ಅಂತ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ವೇಳೆ ಒತ್ತಾಯಿಸಿದರು. ಧಿಕ್ಕಾರ ಧಿಕ್ಕಾರ ಸರ್ಕಾರಕ್ಕೆ ಧಿಕ್ಕಾರ ಅಂತ ಕೈ ಸದಸ್ಯರು ಜೋರು ಘೋಷಣೆ ಮಾಡಿದರು. ಕಾಂಗ್ರೆಸ್ ಸದಸ್ಯರಿಗೆ ಜೆಡಿಎಸ್ ಸದಸ್ಯರೂ ಪ್ರತಿಭಟನೆಗೆ ಸಾಥ್ ನೀಡಿದ್ರು. ಧರಣಿ ಕೈಬಿಡುವಂತೆ ಸ್ಪೀಕರ್ ಮಾಡಿದ ಮನವಿಗೆ ಧರಣಿನಿರತರು ಒಪ್ಪಲಿಲ್ಲ. ಪರಿಣಾಮ ಸ್ಪೀಕರ್ ಕಾಗೇರಿ ಸದನವನ್ನು ಮಧ್ಯಾಹ್ನ 3ಕ್ಕೆ ಮುಂದೂಡಿದರು.

BUDGET 1

ಮಧ್ಯಾಹ್ನ ಸ್ಪೀಕರ್ ಕಾಗೇರಿ ಪ್ರತಿಪಕ್ಷ ನಾಯಕರ ಜೊತೆ ಸಂಧಾನ ಸಭೆ ನಡೆಸಿದರು. ಧರಣಿ ಕೈ ಬಿಡುವಂತೆ ಸ್ಪೀಕರ್ ಮಾಡಿಕೊಂಡ ಮನವಿಗೆ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಒಪ್ಪದೇ ಯತ್ನಾಳ್ ಹೇಳಿಕೆ ಕುರಿತು ಚರ್ಚೆ ಮತ್ತು ಯತ್ನಾಳ್ ಅವರ ಬಹಿಷ್ಕಾರಕ್ಕೆ ಪಟ್ಟು ಹಿಡಿದರು. ಈ ಕುರಿತು ಆಡಳಿತ ಪಕ್ಷದ ಸದಸ್ಯರ ಜೊತೆ ಚರ್ಚಿಸೋದಾಗಿ ಹೇಳಿ ಸ್ಪೀಕರ್ ಸಭೆ ಮುಗಿಸಿದ್ರು. ಬಳಿಕ ಸ್ಪೀಕರ್ ಸಿಎಂ ಯಡಿಯೂರಪ್ಪ ಸೇರಿ ಹಲವರ ಜೊತೆ ಚರ್ಚಿಸಿದರು. ನಂತರ ಮತ್ತೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದರು. ಆದರೆ ಈ ಸಂಧಾನ ಸಭೆಯೂ ವಿಫಲವಾಯ್ತು. ಸದನದಲ್ಲಿ ಹೋರಾಟಕ್ಕೆ ಕಾಂಗ್ರೆಸ್ ನಿರ್ಧರಿಸಿತು.

BUDGET 6

ಮಧ್ಯಾಹ್ನದ ಕಲಾಪ ಒಂದು ಗಂಟೆ ವಿಳಂಬವಾಗಿ 4ಕ್ಕೆ ಶುರುವಾಯ್ತು. ಮಧ್ಯಾಹ್ನದ ಕಲಾಪದಲ್ಲೂ ಕಾಂಗ್ರೆಸ್ ಸದನದ ಬಾವಿಗಿಳಿದು ಧರಣಿ ನಡೆಸಿದರು. ಆದರೆ ಈ ಧರಣಿಗೆ ಜೆಡಿಎಸ್ ಸದಸ್ಯರು ಸಾಥ್ ಕೊಡದೇ ತಮ್ಮ ಜಾಗಗಳಲ್ಲೇ ಕೂತಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಸ್ಪೀಕರ್ ಕಾಗೇರಿ ಚರ್ಚೆಗೆ ಕೋರಿದ ಸಿದ್ದರಾಮಯ್ಯ ಅವರ ಮನವಿಯನ್ನು ತಿರಸ್ಕರಿಸಿದರು. ತಮ್ಮ ವಿವೇಚನಾಧಿಕಾರದಲ್ಲಿ ಯತ್ನಾಳ್ ಹೇಳಿಕೆ ಕುರಿತು ಚರ್ಚೆಗೆ ಅವಕಾಶ ಕೊಡುವುದು ಅಸಾಧ್ಯ. ಹಾಗಾಗಿ ನಿಯಮ 307 ರ ಅನ್ವಯ ಯತ್ನಾಳ್ ಹೇಳಿಕೆ ಕುರಿತು ಚರ್ಚೆಗೆ ಲಿಖಿತ ನೊಟೀಸ್ ಕೊಟ್ಟರೆ ಚರ್ಚೆಗೆ ಅವಕಾಶ ಕೊಡುವುದಾಗಿ ಕಾಂಗ್ರೆಸ್ಸಿಗೆ ಸ್ಪೀಕರ್ ತಿಳಿಸಿದರು. ಸ್ಪೀಕರ್ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಧರಣಿ ಮುಂದುವರಿಸಿತು. ಈ ವೇಳೆ ಸಿಎಂ ಯಡಿಯೂರಪ್ಪ ಮಾಡಿಕೊಂಡ ಮನವಿಗೂ ಕಾಂಗ್ರೆಸ್ ಒಪ್ಪಲಿಲ್ಲ. ಈ ಮಧ್ಯೆ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಸದನದಲ್ಲಿ ಜೋರಾಗಿ ಧಿಕ್ಕಾರ ಕೂಗಲಾರಂಭಿಸಿದರು.

BUDGET 8

ಇದೇ ವೇಳೆ ಎದ್ದು ನಿಂತ ಸಚಿವ ಈಶ್ವರಪ್ಪ, ಮೋದಿಯವರು ಕೊಲೆಗಡುಕರು ಅಂತ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದರು. ಹಾಗಾಗಿ ಸಿದ್ದರಾಮಯ್ಯರನ್ನು ಈ ಸದನದಿಂದ ಸಸ್ಪೆಂಡ್ ಮಾಡಿ ಎಂದು ಎರಡು ಸಲ ಕೂಗಿ ಹೇಳಿದರು. ಇಷ್ಟೆಲ್ಲ ಗದ್ದಲ, ಕೋಲಾಹಲದ ಮಧ್ಯೆಯೇ ಎಂಟು ವಿಧೇಯಕಗಳನ್ನು ಮಂಡಿಸಿ ಸರ್ಕಾರ ಚರ್ಚೆಯಿಲ್ಲದೇ ಅವುಗಳಿಗೆ ಅಂಗೀಕಾರವನ್ನೂ ಪಡೆದುಕೊಂಡಿತು. ಕಾಂಗ್ರೆಸ್ ಧರಣಿ ಮುಂದುವರಿದ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಕಲಾಪವನ್ನು ನಾಳೆಗೆ ಮುಂದೂಡಬೇಕಾಯ್ತು.

TAGGED:Basangouda Patil YatnalbengaluruPublic TVsiddaramaiahvidhanasabheಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬೆಂಗಳೂರುವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
3 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
4 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
4 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
5 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
5 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?