Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂದೆಯ ಸಲಹೆಯನ್ನು ಪಾಲಿಸಿದ ಪುತ್ರ – ಅಂತರ ಕಾಯ್ದುಕೊಂಡ ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಂದೆಯ ಸಲಹೆಯನ್ನು ಪಾಲಿಸಿದ ಪುತ್ರ – ಅಂತರ ಕಾಯ್ದುಕೊಂಡ ವಿಜಯೇಂದ್ರ

Bengaluru City

ತಂದೆಯ ಸಲಹೆಯನ್ನು ಪಾಲಿಸಿದ ಪುತ್ರ – ಅಂತರ ಕಾಯ್ದುಕೊಂಡ ವಿಜಯೇಂದ್ರ

Public TV
Last updated: September 10, 2019 1:17 pm
Public TV
Share
2 Min Read
BSY BYR
SHARE

ಬೆಂಗಳೂರು: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪುತ್ರನ ಹಸ್ತಕ್ಷೇಪ ಸರ್ಕಾರ ಮತ್ತು ಪಕ್ಷದಲ್ಲಿ ಜಾಸ್ತಿಯಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಈಗ ವಿಜಯೇಂದ್ರ ಈ ವಿಚಾರದಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರು ನೇರವಾಗಿಯೇ ವಿಜಯೇಂದ್ರ ಬಗ್ಗೆ ಗಂಭೀರ ಆರೋಪ ಮಾಡಿ ಬಿಎಸ್‍ವೈ ಪುತ್ರ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಇಷ್ಟೇ ಅಲ್ಲದೇ ಹಲವು ಬಾರಿ ಯಡಿಯೂರಪ್ಪನವರ ಜೊತೆಗೆ ವಿಜಯೇಂದ್ರ ಕಾಣಿಸಿಕೊಳ್ಳುತ್ತಿದ್ದರು. ಈ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವಿಜಯೇಂದ್ರ ಯಡಿಯೂರಪ್ಪನವರಿಂದ ಅಂತರ ಕಾಯ್ದುಕೊಂಡಿದ್ದಾರೆ.

hdk 1

ಸ್ವಲ್ಪ ದಿನ ಸೈಲೆಂಟಾಗಿ ದೂರ ಇರುವಂತೆ ಮಗನಿಗೆ ಯಡಿಯೂರಪ್ಪ ಸಲಹೆ ನೀಡಿದ್ದು, ಪಕ್ಷ, ಸರ್ಕಾರ ಎರಡರಲ್ಲೂ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಹಾಗಾಗಿ ಕಳೆದ ನಾಲ್ಕೈದು ದಿನಗಳಿಂದ ಬಿಎಸ್‍ವೈ ಅವರಿಂದ ವಿಜಯೇಂದ್ರ ಅಂತರ ಕಾಯ್ದುಕೊಂಡಿದ್ದಾರೆ. ಪುತ್ರನ ಮಧ್ಯಪ್ರವೇಶ ನಡೆಯುತ್ತಿಲ್ಲ. ತಮಗೆ ಆಗದವರು ಹರಡಿಸಿದ ಸುದ್ದಿ ಇದು ಹೈಕಮಾಂಡ್ ನಾಯಕರಿಗೆ ಸಂದೇಶ ರವಾನಿಸಲು ತಂದೆಯ ಸಲಹೆಯ ಮೇರೆಗೆ ವಿಜಯೇಂದ್ರ ಹೊರಗೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ.

ವಿಜಯೇಂದ್ರ ಮೇಲೆ ಸಂತೋಷ್ ಕಣ್ಣು?
ರಾಜ್ಯ ಬಿಜೆಪಿಯ ಪ್ರಧಾನಕಾರ್ಯದರ್ಶಿ ಹುದ್ದೆಯ ಮೇಲೆ ವಿಜಯೇಂದ್ರ ಕಣ್ಣಿಟ್ಟಿದ್ದರು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೇರುವ ಮೂಲಕ ಪಕ್ಷದಲ್ಲಿ ಉನ್ನತ ಸ್ಥಾನ ಅಲಂಕರಿಸಲು ವಿಜಯೇಂದ್ರ ಲಾಬಿ ನಡೆಸಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಹೇಶ್ ಟೆಂಗಿನಕಾಯಿ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡುವ ಮೂಲಕ ಪಕ್ಷದ ಮಂದಿಗೆ ಶಾಕ್ ನೀಡಿದ್ದರು.

SANTHOSH e1568101657429

ಯಡಿಯೂರಪ್ಪನವರ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬಿಎಸ್‍ವೈ ಆಪ್ತರಿಗೆ ಸಿಗಲಿದೆ ಎನ್ನುವ ವಿಚಾರ ಚರ್ಚೆ ಆಗುತಿತ್ತು. ಆದರೆ ಬಿಜೆಪಿ ಹೈಕಮಾಂಡ್ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನವನ್ನು ನೀಡುವ ಮೂಲಕ ರಾಜ್ಯದ ಹಿರಿಯ ನಾಯಕರಿಗೆ ಶಾಕ್ ನೀಡಿತ್ತು. ಈ ಎರಡು ಹುದ್ದೆಗೆ ಆಯ್ಕೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಅಣತಿಯಂತೆ ನಡೆದಿದ್ದು ಎನ್ನುವ ಮಾತು ಈಗ ಬಿಜೆಪಿ ವಲಯದಲ್ಲಿ ಚರ್ಚೆ ಆಗುತ್ತಿದೆ.

ವಿಜಯೇಂದ್ರ ಅವರಿಗೆ ಪ್ರಧಾನಕಾರ್ಯದರ್ಶಿ ಹುದ್ದೆ ನೀಡಿದರೆ ಮತ್ತೆ ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಬರುತ್ತದೆ. ದೆಹಲಿ ಮಟ್ಟದ ಸಂಸ್ಕೃತಿ ತರಲು ಈ ಎಲ್ಲ ಆಯ್ಕೆ ನಡೆದಿದೆ ಎಂದು ಬಿಜೆಪಿಯ ಕೆಲವರು ಈ ನಿರ್ಧಾರ ಪರ ಮಾತನಾಡುತ್ತಿದ್ದಾರೆ. ಇನ್ನು ಕೆಲ ನಾಯಕರು ಬಿಎಸ್‍ವೈ ಬೆಂಬಲಿಗರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲು ನಳಿನ್ ಕುಮಾರ್ ಮೂಲಕ ಸಂತೋಷ್ ತಮ್ಮ ದಾಳವನ್ನು ಪ್ರಯೋಗಿಸುತ್ತಿದ್ದಾರೆ. ಮತ್ತೊಬ್ಬ ಲಿಂಗಾಯತ ನಾಯಕನ್ನು ಬೆಳೆಸಲು ಮಹೇಶ್ ಟೆಂಗಿನಕಾಯಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಾತನ್ನಾಡುತ್ತಿದ್ದಾರೆ. ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಒಂದೊಂದು ಆಯ್ಕೆಯ ವಿಚಾರದ ಬಗ್ಗೆ ನಾಯಕರ ನಡುವೆ ಭಾರೀ ಚರ್ಚೆ ಆಗುತ್ತಿದೆ.

TAGGED:bjpBL Santhoshbs yeddyurappamahesh tenginakainalinkumar kateelVijayendraನಳಿನ್ ಕುಮಾರ್ ಕಟೀಲ್ಬಿಎಲ್ ಸಂತೋಷ್ಬಿಜೆಪಿಮಹೇಶ್ ಟೆಂಗಿನಕಾಯಿಯಡಿಯೂರಪ್ಪವಿಜಯೇಂದ್ರ
Share This Article
Facebook Whatsapp Whatsapp Telegram

Cinema news

arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories

You Might Also Like

siddaramaiah 1 1
Bengaluru City

ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರದ ಕುತಂತ್ರ ವಿರೋಧಿಸಿ: ರೈತರಿಗೆ ಸಿಎಂ ಕರೆ

Public TV
By Public TV
25 minutes ago
Pakistan blast At least 25 killed in suicide bombing at religious shrine in Islamabad
Crime

ಪಾಕ್‌ನ ದರ್ಗಾದಲ್ಲಿ ಬಾಂಬ್‌ ಸ್ಫೋಟ – 31 ಮಂದಿ ದುರ್ಮರಣ

Public TV
By Public TV
1 hour ago
Shirwad garbage disposal unit fire
Latest

ಕಾರವಾರ ಶಿರವಾಡ ಕಸ ವಿಲೇವಾರಿ ಘಟಕಕ್ಕೆ ಬೆಂಕಿ

Public TV
By Public TV
2 hours ago
Vaibhav Sooryavanshi
Cricket

ಬೌಂಡರಿ, ಸಿಕ್ಸರ್‌ನಲ್ಲಿ 150 ರನ್‌ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ

Public TV
By Public TV
2 hours ago
Supreme Court 1
Court

ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
2 hours ago
Maluru Kolar Crime Wheeling
Crime

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?