ಚಾಮರಾಜನಗರ: ಅತೀ ವೇಗದಲ್ಲಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ 20 ಅಡಿ ಆಳದ ಹಳ್ಳಕ್ಕೆ ಬಿದ್ದ ಘಟನೆ ಹನೂರು(Hanuru) ಪಟ್ಟಣದ ಬಳಿ ನಡೆದಿದೆ.
ಬೆಂಗಳೂರಿನ(Bengaluru) ಅತ್ತಿಬೆಲೆಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ(Male Mahadeshwara Hill) ಐದು ಮಂದಿ ಬಾಡಿಗೆ ಕಾರಿನಲ್ಲಿ ಬರುತ್ತಿದ್ದರು. ನಸುಕಿನ ಜಾವ ಮೂರು ಗಂಟೆಯ ವೇಳೆ ನಿಯಂತ್ರಣ ತಪ್ಪಿದ ಕಾರು ಹನೂರು ಪಟ್ಟಣದ ಸ್ವಾಮಿ ಹಳ್ಳಕ್ಕೆ ಬಿದ್ದಿದೆ. ಇದನ್ನೂ ಓದಿ: ತಿರುಪತಿ ತಿಮ್ಮಪ್ಪನಿಗೆ 1 ಕೋಟಿ ರೂ. ದೇಣಿಗೆ ನೀಡಿದ ಮುಸ್ಲಿಂ ದಂಪತಿ
ಸಣ್ಣ ಪುಟ್ಟ ಗಾಯಗೊಂಡಿರುವ ಐವರನ್ನು ಹನೂರಿನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.