ಪ್ರಚಾರಕ್ಕೆ ಬಂದ್ರೆ ದುಡ್ಡು ಕೊಡ್ತೀನಿ ಎಂದು ಹೇಳಿ ಕೈ ಕೊಟ್ಟ ಪ್ರಕಾಶ್ ರೈ!

Public TV
1 Min Read
prakash rai chit chat

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಭಾಗಿಯಾದ್ರೆ ಒಂದಿಷ್ಟು ದುಡ್ಡು ಸಿಗುತ್ತದೆ ಎಂದು ಬಡ ಜನರು ಹೋಗ್ತಾರೆ. ಆದ್ರೆ ಬೆಂಗೂರು ಕೇಂದ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹಣ ಕೊಡುತ್ತೇನೆ ಎಂದು ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನ ಕರೆದೊಯ್ದು ಹಣ ಕೊಡದೇ ವಂಚನೆ ಮಾಡಿದ ಆರೋಪವೊಂದು ಕೇಳಿಬಂದಿದೆ.

RAI 2

ಹೌದು. ಲೋಕಸಭಾ ಚುನಾವಣೆಗೆ ಉಳಿದಿರುವುದು ಇನ್ನೂ ಕೇವಲ ನಾಲ್ಕು ದಿನ ಮಾತ್ರ. ಹೀಗಾಗಿ ಪ್ರಚಾರದ ಭರಾಟೆ ಎಲ್ಲೆಡೆ ಜೋರಾಗಿದೆ. ಜನ ಇಲ್ಲದಿದ್ದರೂ ಹಣ ಕೊಟ್ಟು ಜನರನ್ನು ಸೇರಿಸಿ ಪ್ರಚಾರ ಮಾಡುತ್ತಿದ್ದಾರೆ. ಅದರಂತೆ ಬೆಂಗಳೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಕೂಡ ಹಣ ಕೊಡುತ್ತೇನೆ ಎಂದು ಮಹಿಳೆಯರನ್ನ ಪ್ರಚಾರಕ್ಕೆ ಕರೆದೊಯ್ದು ವಂಚನೆ ಮಾಡಿದ್ದಾರೆ ಎಂಬ ಆರೋಪಿಸಲಾಗುತ್ತಿದೆ.

RAI 5

ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನ ಗೌರಿಪಾಳ್ಯದ ಮೂವತ್ತು ಜನ ಮಹಿಳೆಯರನ್ನ ಪ್ರಚಾರಕ್ಕೆ ಕರೆದುಕೊಂಡು ಹೋಗಿದ್ದ ಪ್ರಕಾಶ್ ರೈ, ಪ್ರಚಾರದ ಬಳಿಕ ದುಡ್ಡು ಕೇಳಿದ್ರೆ ಇವತ್ತು ಕೊಡುತ್ತೇನೆ, ನಾಳೆ ಕೊಡುತ್ತೇನೆ ಎಂದು ಹೇಳಿ ಯಾಮಾರಿಸ್ತಿದ್ದಾರೆ ಅಂತ ಪ್ರಚಾರಕ್ಕೆ ಹೋಗಿದ್ದ ಮಹಿಳೆಯೊಬ್ಬರು ಆರೋಪ ಮಾಡುತ್ತಿದ್ದಾರೆ.

RAI 3

ಪ್ರಕಾಶ್ ರೈ ಕಚೇರಿಗೆ ಹೋಗಿ ವಿಚಾರಿಸಿದ್ರೆ ಅವರು ಕೂಡ ನಾಳೆ ಬನ್ನಿ, ನಾಡಿದ್ದು ಬನ್ನಿ. ನಿಮ್ಮ ಕರೆದುಕೊಂಡು ಬಂದಿದವರಿಗೆ ದುಡ್ಡು ಕೊಟ್ಟಿದ್ದೇನೆ ಎಂದು ಒಂದೊಂದು ರೀತಿಯಲ್ಲಿ ಮಾತಾಡುತ್ತಾರೆ ಎಂದು ಪ್ರಚಾರಕ್ಕೆ ಹೋಗದಿದ್ದ ಅರುಣ್ ಕುಮಾರ್ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *