Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರು ಸಿಇಓನಿಂದ ಮಗನ ಹತ್ಯೆ ಪ್ರಕರಣ- ಮಗುವಿನ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

Public TV
Last updated: January 10, 2024 9:08 am
Public TV
Share
3 Min Read
SUCHANA SETH 4
SHARE

– ಗೋವಾ ಪೊಲೀಸರಿಂದ ಮಗುವಿನ ತಂದೆ ವಿಚಾರಣೆ ಸಾಧ್ಯತೆ

ಬೆಂಗಳೂರು: ಸಿಇಓ (CEO) ಸುಚನಾ ಸೇಠ್ ಮಗುವಿನ ಹತ್ಯೆ ಪ್ರಕರಣವನ್ನು ಗೋವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಮಗುವಿನ ಮೃತದೇಹವನ್ನು ಈಗಾಗಲೇ ರಾಜಾಜಿನಗರದಲ್ಲಿರುವ ಅಪಾರ್ಟ್‍ಮೆಂಟ್‍ಗೆ ತರಲಾಗಿದ್ದು, ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.

ಮಗುವಿನ ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಆತನ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ತರಲಾಗಿದೆ. ಮಗುವಿನ ಹತ್ಯೆ ಸುದ್ದಿ ತಿಳಿದ ಆತನ ತಂದೆ ವೆಂಕಟರಮಣ ಅವರು, ಈಗಾಗಲೇ ಇಂಡೋನೇಷ್ಯಾದಿಂದ ಬೆಂಗಳೂರಿಗೆ (Bengaluru) ಬಂದಿದ್ದಾರೆ. ಮಗುವಿನ ಸಂಬಂಧಿಕರು, ಸ್ನೇಹಿತರ ಸಮ್ಮುಖದಲ್ಲಿ ಹರಿಶ್ಚಂದ್ರಘಾಟ್‍ನಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಪತಿಗೆ ಮಗು ತೋರಿಸಲು ಇಷ್ಟವಿಲ್ಲದಿದ್ದರಿಂದ ಪ್ರಜ್ಞೆ ತಪ್ಪಿಸಲು ದಿಂಬಿನಿಂದ ಒತ್ತಿ ಹಿಡಿದೆ: ತಪ್ಪೊಪ್ಪಿಕೊಂಡ ಸೇಠ್

SUCHANA SETH 1

ಮೃತ ಮಗುವಿನ ಅಂತ್ಯಸಂಸ್ಕಾರದ ಬಳಿಕ ವೆಂಕಟರಮಣ ಅವರನ್ನು ಗೋವಾ ಪೊಲೀಸರು (Goa Police) ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅವರ ಬಳಿ ಸುಚನಾ ಹಾಗೂ ಪುತ್ರ ಚಿನ್ಮಯ್ ಬಗ್ಗೆ ಪೊಲೀಸರು ಮಾಹಿತಿ ಪಡೆಯುವ ಸಾಧ್ಯತೆ ಇದೆ. ಮಗುವಿನ ಹತ್ಯೆಗೂ ಮುನ್ನ ವೀಡಿಯೋ ಕಾಲ್ ಮಾಡಿದ್ದ ವೆಂಕಟರಮಣ ಅವರು ಮಗುವಿನೊಂದಿಗೆ ಮಾತಾಡಿದ್ದರು ಎಂದು ತಿಳಿದು ಬಂದಿದೆ.

SUCHENA SETH

ಸುಚನಾ ಹಾಗೂ ವೆಂಕಟರಮಣ ವಿಚ್ಛೇದನ ಕೋರಿ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ವಾರಕ್ಕೊಮ್ಮೆ ತಂದೆ ಬಳಿ ಮಗನ ಭೇಟಿಗೆ ಕೋರ್ಟ್ ಸೂಚಿಸಿತ್ತು. ಕೋರ್ಟ್ ಸೂಚನೆಯಂತೆ ಕಳೆದ ಭಾನುವಾರ ವೀಡಿಯೋ ಕಾಲ್‍ನಲ್ಲಿ ಮಗನ ಜೊತೆ ವೆಂಕಟರಮಣ ಅವರು ಮಾತಾಡಿದ್ದರು. ಮಗು ಹಾಗೂ ತಂದೆ ಭೇಟಿಯಾಗುವುದು ಸುಚನಾಗೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ವೆಂಕಟರಮಣಗೆ ಮಗ ಸಿಗಬಾರದೆಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೊನೆಯ ಬಾರಿ ವೀಡಿಯೋ ಕಾಲ್‍ನಲ್ಲಿ ಮಾತಾಡಿದ್ದೆನು ಎಂಬ ಬಗ್ಗೆ ಪೊಲೀಸರು ಮಾಹಿತಿ ಪಡೆಯುವ ಸಾಧ್ಯತೆ ಇದೆ.

ಏನಿದು ಪ್ರಕರಣ?: ಸ್ವಂತ ಮಗುವನ್ನೇ ತಾಯಿಯೊಬ್ಬಳು ಹತ್ಯೆಗೈದು ಸೂಟ್‍ಕೇಸ್‍ನಲ್ಲಿ ಶವವಿಟ್ಟುಕೊಂಡು ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದರು.

ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಮತ್ತು ಸಿಇಓ ಸುಚನಾ ಸೇಠ್ ವಿರುದ್ಧ ಗೋವಾದ ಹೋಟೆಲ್‍ನಲ್ಲಿ ಮಗುವನ್ನು ಹತ್ಯೆ ಮಾಡಿರುವ ಆರೋಪ ಕೇಳಿಬಂದಿತ್ತು. ಸುಚನಾ ಸೇಠ್ ಅವರು ಶನಿವಾರ ತನ್ನ ಮಗನೊಂದಿಗೆ ಉತ್ತರ ಗೋವಾದ ಕ್ಯಾಂಡೋಲಿಮ್‍ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಭೇಟಿ ನೀಡಿದ್ದರು. ಸೋಮವಾರ ಹೋಟೆಲ್ ತೊರೆಯುವಾಗ ಒಬ್ಬಂಟಿಯಾಗಿದ್ದರು. ತಾನು ಬೆಂಗಳೂರಿಗೆ ಟ್ಯಾಕ್ಸಿ ಕಾಯ್ದಿರಿಸುವಂತೆ ಹೋಟೆಲ್ ಸಿಬ್ಬಂದಿಯನ್ನ ಕೇಳಿದ್ದಾಳೆ. ಅವರು ವಿಮಾನ ಸೌಲಭ್ಯ ಇರುವ ಸಲಹೆ ನೀಡಿದರೂ ಟ್ಯಾಕ್ಸಿ ತೆಗೆದುಕೊಳ್ಳುವಂತೆ ಆಕೆ ಒತ್ತಾಯಿಸಿದ್ದಾಳೆ ಎಂದು ಸಿಬ್ಬಂದಿ ತಿಳಿಸಿದ್ದರು.

ಆಕೆ ಹೋಟೆಲ್‍ನಿಂದ ಹೊರಗೆ ಹೋದ ಬಳಿಕ ಮಗು ಇಲ್ಲದಿದ್ದನ್ನು ಸಿಬ್ಬಂದಿ ಗಮನಿಸಿದ್ದರು. ಅಲ್ಲದೇ ಆಕೆ ತಂಗಿದ್ದ ಹೋಟೆಲ್ ಶುಚಿಗೊಳಿಸಲು ಹೋದಾಗ ರಕ್ತದ ಕಲೆಗಳು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಗೋವಾ ಪೊಲೀಸರು ಹೋಟೆಲ್ ಸಿಬ್ಬಂದಿ ಕರೆಸಿದ್ದ ಟ್ಯಾಕ್ಸಿ ಡ್ರೈವರ್ ಸಂಪರ್ಕಿಸಿ ಆಕೆಯೊಂದಿಗೆ ಮಾತನಾಡಲು ಹೇಳಿದ್ದಾರೆ. ಆಕೆಯ ಮಗನ ಬಗ್ಗೆ ಕೇಳಿದಾಗ ಅವನು ಸ್ನೇಹಿತನೊಂದಿಗೆ ಇರುವುದಾಗಿ ಹೇಳಿಕೊಂಡಿದ್ದಳು. ಆತನ ವಿಳಾಸವನ್ನೂ ನೀಡಿದ್ದಳು. ಪೊಲೀಸರು ಆ ವಿಳಾಸವನ್ನ ಪರಿಶೀಲಿಸಿದಾಗ ಅದು ನಕಲಿಯಾಗಿತ್ತು. ನಂತರ ಟ್ಯಾಕ್ಸಿ ಡ್ರೈವರ್‌ಗೆ ಹೈವೆಬಳಿ ಪೊಲೀಸರು ಕಂಡಾಕ್ಷಣ ಟ್ಯಾಕ್ಸಿ ನಿಲ್ಲಿಸುವಂತೆ ತಿಳಿಸಿದ್ದಾರೆ.

ನಂತರ ಟ್ಯಾಕ್ಸಿ ಚಾಲಕ ರಾಷ್ಟ್ರೀಯ ಹೆದ್ದಾರಿ-4ರ ಬಳಿಯ ಐಮಂಗಲ ಠಾಣೆ ಪೊಲೀಸರಿಗೆ ಆಕೆಯನ್ನ ಒಪ್ಪಿಸಿದ್ದ. ಬಳಿಕ ಟ್ಯಾಕ್ಸಿ ತಪಾಸಣೆ ಮಾಡಿದ ಐಮಂಗಲ ಪೊಲೀಸರಿಗೆ ಟ್ಯಾಕ್ಸಿ ಡಿಕ್ಕಿಯಲ್ಲಿದ್ದ ಸೂಟ್‍ಕೇಸ್‍ನಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌‌ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಗ್ಳೂರಿನ CEO ಸಿಕ್ಕಿಬಿದ್ದ ರೋಚಕ ಕಥೆ ಓದಿ

Share This Article
Facebook Whatsapp Whatsapp Telegram
Previous Article AYODHYA RAM LINGAREDDY ಸರ್ಕಾರದಿಂದ ಗುಡ್‍ನ್ಯೂಸ್- ಅಯೋಧ್ಯೆಯಲ್ಲಿ ತಲೆಯೆತ್ತಲಿದೆ ಕರ್ನಾಟಕ ಯಾತ್ರಿ ನಿವಾಸ
Next Article Paduke 3 1 8‌ ಕೆಜಿ ಬೆಳ್ಳಿ ಪಾದುಕೆ ಹೊತ್ತು 7,200 km ಪಾದಯಾತ್ರೆ – 64ರ ವೃದ್ಧನ ಭಕ್ತಿಗೆ ರಾಮನ ಭಕ್ತರಿಂದ ಮೆಚ್ಚುಗೆ

Latest Cinema News

Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories
Love U Muddu Siddhu Moolimani Reshma 1
ಲವ್ ಯು ಮುದ್ದು ಟೈಟಲ್ ಟ್ರ‍್ಯಾಕ್‌ಗೆ ಕುಣಿದ ಸಿದ್ದು, ರೇಷ್ಮಾ
Cinema Latest Sandalwood Uncategorized
Shabarish Shetty Nandakishore
ನಾನು ಸತ್ತರೆ ನಂದಕಿಶೋರ್, ಸಾರಾ ಗೋವಿಂದು ಕಾರಣ – ವೀಡಿಯೋ ಹರಿಬಿಟ್ಟ ಶಬರೀಶ್ ಶೆಟ್ಟಿ
Cinema Karnataka Latest Sandalwood Top Stories Uncategorized
Shiva Rajkumar 2
ರೆಟ್ರೋ ಲುಕ್‌ನಲ್ಲಿ ಮಿಂಚಿದ ಶಿವಣ್ಣ, ಡಾಲಿ
Cinema Latest Sandalwood

You Might Also Like

IT Returns
Latest

ಐಟಿ ರಿಟರ್ನ್‌ ಸಲ್ಲಿಕೆ- ಲಾಸ್ಟ್‌ ಡೇಟ್‌ ಯಾವುದೇ ಕಾರಣಕ್ಕೂ ವಿಸ್ತರಣೆಯಾಗಲ್ಲ

7 hours ago
Siddaramaiah Ambulence
Dharwad

ಅಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

9 hours ago
ramesh aravind 2
Karnataka

ಆಪ್ತಮಿತ್ರ ದುರ್ಘಟನೆ ನೆನಪಿಸಿಕೊಂಡ ರಮೇಶ್ ಅರವಿಂದ್

9 hours ago
cauvery theerthodbhava 2
Districts

ಮಡಿಕೇರಿ | ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ

9 hours ago
Siddaramaiah 1 3
Dharwad

ಬೆಳೆ ಪರಿಹಾರ ಆದಷ್ಟು ಬೇಗ ಕೊಡ್ತೀವಿ, ದುಡ್ಡಿಗೆ ಕೊರತೆ ಇಲ್ಲ: ಸಿಎಂ

10 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?