ಬೆಂಗಳೂರು: ಆಪರೇಷನ್ ಕಮಲದಿಂದ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಕಸರತ್ತು ಶುರುವಾಗಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿದ ಕಾಂಗ್ರೆಸ್ ನಾಯಕರು ಆಪರೇಷನ್ ಕಮಲಕ್ಕೆ ವಿರುದ್ಧವಾಗಿ ಹೂಡಬೇಕಾದ ತಂತ್ರಗಳ ಬಗ್ಗೆ ಚರ್ಚಿಸಿದರು.
ಇದೇ ವೇಳೆ ಸಚಿವ ಸಂಪುಟಕ್ಕೆ ಯಾರನ್ನು ಸೇರಿಸೋದು, ಯಾರನ್ನು ತೆಗೆಯೋದು ಅನ್ನೋದ್ರ ಬಗ್ಗೆ ಚರ್ಚೆ ನಡೀತು. ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಸಂಪುಟಕ್ಕೆ ಯಾರನ್ನು ಸೇರಿಸಬೇಕು ಅನ್ನೋ ಬಗ್ಗೆ ಕೆಸಿ ವೇಣುಗೋಪಾಲ್ ಜೊತೆ ಚರ್ಚಿಸಿ ಇಂದು ನಿರ್ಧಾರ ತಿಳಿಸೋದಾಗಿ ಹೇಳಿದರು ಎನ್ನಲಾಗಿದೆ.
- Advertisement 2
- Advertisement 3
ಈ ಮಧ್ಯೆ ಇಂದು ರಾಜ್ಯಕ್ಕೆ ಕೆಪಿಸಿಸಿ ಉಸ್ತುವಾರಿ ವೇಣುಗೋಪಾಲ್ ಆಗಮಿಸುತ್ತಿದ್ದು, ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ನಿನ್ನೆ ರಾತ್ರಿ ಸಿಎಂ ಕುಮಾರಸ್ವಾಮಿ ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿಯಾಗಿ, ಪ್ರಸ್ತುತ ರಾಜಕೀಯ ವಿದ್ಯಾಮಾನ ಹಾಗೂ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸಿದ್ರು. ಇದೇ ವೇಳೆ ಬಿಜೆಪಿ ಆಪರೇಷನ್ ಕಮಲಕ್ಕೆ ಪ್ರತಿತಂತ್ರದ ಬಗ್ಗೆ ಸುಮಾರು 3 ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ.
- Advertisement 4
ಇತ್ತ ಆಪರೇಷನ್ ಕಮಲದ ಭೀತಿಯಲ್ಲಿರೋ ಸರ್ಕಾರವನ್ನ ಉಳಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಸಂಪುಟ ವಿಸ್ತರಣೆಯೂ ಸೇರಿದಂತೆ ಸಮಾಧಾನ ತಂತ್ರಕ್ಕೆ ಮೊರೆ ಹೋಗಿದೆ. ಮೂರು ದಿನಗಳಲ್ಲಿ ಎರಡು ಬಾರಿ ಸಿದ್ದರಾಮಯ್ಯರನ್ನ ಭೇಟಿ ಆಗಿದ್ದ ಸಿಎಂ ಕುಮಾರಸ್ವಾಮಿ ಸೂತ್ರ ಸಿದ್ಧಪಡಿಸಿಕೊಂಡಿದ್ದಾರೆ. ಇಂದು ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಕರ್ನಾಟಕ್ಕೆ ಆಗಮಿಸುತ್ತಿದ್ದು ಯಾರನ್ನ ಕೈ ಬಿಡಬೇಕು, ಯಾರನ್ನ ಮಂತ್ರಿ ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.