Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ – ಏನು ನಿರ್ಣಯ ತೆಗೆದುಕೊಳ್ಳಲಾಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ – ಏನು ನಿರ್ಣಯ ತೆಗೆದುಕೊಳ್ಳಲಾಗಿದೆ?

Bengaluru City

ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ – ಏನು ನಿರ್ಣಯ ತೆಗೆದುಕೊಳ್ಳಲಾಗಿದೆ?

Public TV
Last updated: March 29, 2020 4:15 pm
Public TV
Share
2 Min Read
All Party Meeting
SHARE

ಬೆಂಗಳೂರು: ಕೊರೊನಾ ಕುರಿತು ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವಪಕ್ಷಣಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಕೊರೊನಾ ವಿರುದ್ಧ ರಾಜ್ಯ ಹೋರಾಡಲು ಬೇಕಾದ ಕೆಲ ನಿರ್ಣಯಗಳನ್ನು ತಗೆದುಕೊಳ್ಳಲಾಗಿದೆ.

ಸಭೆ ಬಳಿಕ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ಮುಖ್ಯ ನಿರ್ಣಯಗಳು.@BSYBJP #KarnatakaFightsCorona #StayHome #SocialDistancing pic.twitter.com/RmiGGfthaK

— CM of Karnataka (@CMofKarnataka) March 29, 2020

ಜೊತೆಗೆ ಸಭೆಯಲ್ಲಿ ನಾಯಕರು ಸಲಹೆ ನೀಡಿದಂತೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು.

ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ, ಎಸ್ ಆರ್ ಪಾಟೀಲ ಸೇರಿದಂತೆ ವಿರೋಧ ಪಕ್ಷಗಳ ಹಲವು ಮುಖಂಡರು ಭಾಗವಹಿಸಿದ್ದರು.@BSYBJP #KarnatakaFightsCorona #StayHome pic.twitter.com/SGmFIYblcI

— CM of Karnataka (@CMofKarnataka) March 29, 2020

ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

corona 14

ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಪಡಿತರವನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಸಿಎಂ ಸರ್ವ ಪಕ್ಷಗಳ ಸಭೆಯಲ್ಲಿ ತಗೆದುಕೊಂಡ ನಿರ್ಧಾರಗಳನ್ನು ತಿಳಿಸಿದರು.

rajbhavan siddaramaih

ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ನಾಯಕರಾದ ಹೆಚ್.ಡಿ.ರೇವಣ್ಣ, ಬಸವರಾಜ್ ಹೊರಟ್ಟಿ, ಮಾಜಿ ಸಿಎಂ ಕುಮಾರಸ್ವಾಮಿ, ಸಚಿವರಾದ ಶ್ರೀರಾಮುಲು, ಸುಧಾಕರ್, ಬೊಮ್ಮಾಯಿ, ಲಕ್ಷ್ಮಣ್ ಸವದಿ, ಅಧಿಕಾರಿಗಳು ಉಪಸ್ಥಿತಿರಿದ್ದರು.

TAGGED:All-Party MeetingbengaluruCoronaPublic TVState GovernmentVidya Soudhayeddyurappaಕೊರೊನಾಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪರಾಜ್ಯ ಸರ್ಕಾರವಿಧಾನ ಸೌಧಸರ್ವಪಕ್ಷಗಳ ಸಭೆ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Siddaramaiah 4
Bengaluru City

ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಹೇಳಿಕೆಗೆ ಸದನದಲ್ಲಿ ಕೋಲಾಹಲ

Public TV
By Public TV
17 minutes ago
Anant Singh Bihar
Latest

ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್

Public TV
By Public TV
27 minutes ago
Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ – ಸ್ಪೀಕರ್‌ ಮೇಲೆ ಕಾಗದ ಎಸೆದ 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
47 minutes ago
Crop Relief
Chitradurga

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

Public TV
By Public TV
1 hour ago
siddapur murder case
Crime

ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

Public TV
By Public TV
1 hour ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?