ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳ ಆಗುತ್ತಾನೆ ಇದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೂಡ ಅನೇಕ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಈಗಾಗಲೇ 1-6 ನೇ ತರಗತಿಗೆ ಪರೀಕ್ಷೆ ರದ್ದು ಮಾಡಿದೆ. ಮಾರ್ಚ್ 31ವರೆಗೆ 7-9 ನೇ ತರಗತಿವರೆಗಿನ ಪರೀಕ್ಷೆ ಮುಂದೂಡಿದೆ. ಈಗಾಗಲೇ ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ಸೊಂಕು ತಡೆಗೆ ಹೊಸದಾಗಿ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪಿಯುಸಿ ಬೋರ್ಡ್ ಹೊಸದಾಗಿ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ 1016 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ಕೇಂದ್ರಗಳಲ್ಲಿ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಪಿಯುಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ. 9 ಅಂಶಗಳ ಮುಂಜಾಗ್ರತಾ ಕ್ರಮಗಳನ್ನು ಇಲಾಖೆ ಹೊರಡಿಸಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳು ಕಡ್ಡಾಯವಾಗಿ ಪಾಲನೆ ಮಾಡಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ.
ಮುನ್ನೆಚ್ಚರಿಕೆ ಕ್ರಮಗಳು
1. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ವಿವಿಧ ತಂಡಗಳಲ್ಲಿ ಚದುರಿದ ರೀತಿಯಲ್ಲಿ ಪ್ರವೇಶಿಸುವಂತೆ ಕ್ರಮವಹಿಸುವುದು.
2. ವಿವಿಧ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಸಮಯ ನಿಗದಿ ಮಾಡುವುದು.
3. ವಿದ್ಯಾರ್ಥಿಗಳು ಕೊಠಡಿ ಪ್ರವೇಶಿಸುವ ಮುನ್ನ ಕೈಗಳನ್ನು ಸ್ವಚ್ಛಗೊಳಿಸಲು ಸೂಚಿಸುವುದು.
4. ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್, ಸಾಬೂನು, ನೀರಿನ ವ್ಯವಸ್ಥೆ ಹೆಚ್ಚು ಪ್ರಮಾಣದಲ್ಲಿ ಒದಗಿಸುವುದು.
5. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಬಳಿ ಗುಂಪು ಸೇರಿದಂತೆ ನೋಡಿಕೊಳ್ಳುವದು.
6. ಜ್ವರ, ಕೆಮ್ಮು, ನೆಗಡಿ ಇರೋ ವಿದ್ಯಾರ್ಥಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವುದು.
7. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಡುವುದು.
8. ಅಗತ್ಯ ಸಂದರ್ಭದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಪಡೆಯುವುದು.