Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

Bengaluru City

ದರ್ಶನ್‌ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್‌

Public TV
Last updated: July 25, 2024 7:42 pm
Public TV
Share
3 Min Read
Darshan 4 1
SHARE

ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ (Darshan) ಕೋರ್ಟ್‌ ಶಾಕ್‌ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್‌ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿದೆ.

ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು.  ಇಂದು ದರ್ಶನ್‌ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದ್ದು, ದರ್ಶನ್‌ ಪರ ವಕೀಲರು ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಯಧನ ವಿಚಾರದಲ್ಲಿ ರಾಜ್ಯಗಳಿಗೆ ಬಹುದೊಡ್ಡ ಜಯ – ಸುಪ್ರೀಂ ಕೋರ್ಟ್ ಹೇಳಿದ್ದೇನು?

ದರ್ಶನ್‌ ಅರ್ಜಿ ವಜಾಗೊಂಡಿದ್ದು ಯಾಕೆ?
Karnataka Prisons and Correctional Services Manual 2021 ರ ಸೆಕ್ಷನ್‌ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ.

Darshan 11

ದರ್ಶನ್‌ ಪರ ವಕೀಲರ ವಾದ ಏನಿತ್ತು?
ಆರೋಪಿಗೆ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖ ಇದೆ. ಆರೋಪಿಗೆ ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶವನ್ನು ಹೊಂದಿಸಲಾಗಿದೆ. ಕೊಲೆಯ ಆರೋಪಿಗಳಿಗೆ ವಿನಾಯಿತಿ ನೀಡಲಾಗಿದೆ.

ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ . ಈ ಎಲ್ಲಾ ಅವಕಾಶಗಳನ್ನು ಆರೋಪಿಗಳಿಗೆ ಒದಗಿಸಿಕೊಡಬಹುದು.

ಮರಣ ದಂಡನೆ ಹೊಂದಿದ ಅಪರಾಧಿಗೂ ಕೆಲ ಅವಕಾಶ ಇದೆ. ಅಲ್ಲದೇ ದರ್ಶನ್ ಅವರು ಸಿನಿಮಾದ ನಟರಾಗಿರುವ ಕಾರಣ ಅತಿ ಹೆಚ್ಚಿನ ಪ್ರಚಾರ ಸಿಗುತ್ತಿದೆ. ಹೀಗಾಗಿ ಜೈಲಿನ ಅಧಿಕಾರಿಗಳು ಮನೆಯ ಊಟವನ್ನು ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಇದರಿಂದ ಹಿಂದೆ ಸರಿಯುತ್ತಿದ್ದಾರೆ.

Darshan 8

ಈ ಹಿಂದೆ ಕುಖ್ಯಾತ ಆರೋಪಿ ಚಾರ್ಲ್ಸ್ ಶೋಭರಾಜ್‌ಗೆ ಕೂಡ ಮನೆಯ ಊಟ ಕಲ್ಪಿಸಲಾಗಿತ್ತು. ಯಾವಾಗ ಆರೋಪಿ, ಅಪರಾಧಿ ಎಂದು ಕೋರ್ಟ್‌ ಶಿಕ್ಷೆ ನೀಡುತ್ತದೋ ಅಲ್ಲಿಯವರೆಗೆ ಈ ಎಲ್ಲಾ ಅವಕಾಶವನ್ನು ಬಳಸಿಕೊಳ್ಳಬಹುದು.

ಪೊಲೀಸರ ಪರ ವಾದ ಏನಿತ್ತು?
ಆಹಾರ ಅಜೀರ್ಣವಾಗುತ್ತಿದೆ. ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಮೆಡಿಕಲ್ ವರದಿಯನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಒಂದು ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್‌ ಚಿಕಿತ್ಸೆ ಪಡೆದಿಲ್ಲ.

ದರ್ಶನ್ ಅವರು ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್‌ ಅವರಿಗೆ ಈಗ ವೈರಲ್‌ ಫೀವರ್‌ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅವರಿಗೆ ಮೂರು ತಿಂಗಳ ಹಿಂದೆ ಆರ್ಥೋ ಅಪರೇಷನ್ ಆಗಿತ್ತು. ಜೈಲಿನಲ್ಲಿ ಬಂದಾಗ ಅದರ ನೋವು ಪ್ರಾರಂಭವಾಗಿದ್ದು ಇದಕ್ಕೆ ಎಕ್ಸ್ ರೇ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಲ್ಲೂ ಉಲ್ಲೇಖ ಮಾಡಿಲ್ಲ. ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನೆಯ ಊಟವನ್ನು ನೀಡುವಂತೆ ಇಲ್ಲ.

ಆರೋಪಿಗೆ ಭೇದಿ ಆಗುತ್ತಿದ್ದರೆ ಉಪ್ಪು ಖಾರ ಇಲ್ಲದ ಸಾತ್ವಿಕ ಆಹಾರ ನೀಡಬೇಕು. ಕುಡಿಯಲು ಬಿಸಿ ನೀರು ಬೇಕು ಅಂದರೆ ಜ್ವರ ಇದ್ದಾಗ ಮಾತ್ರ ನೀಡ್ತಾರೆ. ಅದನ್ನ ಬಿಟ್ಟು ಪ್ರತಿ ದಿನ ಸ್ನಾನ ಮಾಡಲು ಬಿಸಿ ನೀರು ಕೊಡಲು ಸಾಧ್ಯವಿಲ್ಲ. ಅನಾರೋಗ್ಯ ಇದ್ದರೆ 15 ದಿನ ಮಾತ್ರ ವಿಶೇಷವಾಗಿ ಅವಕಾಶ ನೀಡಬಹುದು.

TAGGED:courtdarshanfoodಕೋರ್ಟ್ದರ್ಶನ್ಮನೆಯೂಟ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

murder case
Bengaluru City

ಪ್ರೀತಿಸಿದವಳ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಇರಿತ ಕೇಸ್ – ಚಿಕಿತ್ಸೆ ಫಲಿಸದೇ ಮಹಿಳೆ ಸಾವು

Public TV
By Public TV
10 minutes ago
RAJA SHETTY
Latest

ಬೇಲೂರು | ʻಗಜಾಸುರʼನ ದಾಳಿಗೆ ರೈತ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Public TV
By Public TV
51 minutes ago
donald trump iran supreme leader
Latest

ಅಮೆರಿಕದ ಅಸಮಂಜಸ ಬೇಡಿಕೆಗಳಿಂದ ಮಾತುಕತೆ ವಿಫಲ: ಇರಾನ್‌ ಬೇಸರ

Public TV
By Public TV
1 hour ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
2 hours ago
Congress MLA
Bengaluru City

ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಪವರ್ ಗೇಮ್ – ಕಾಂಗ್ರೆಸ್‌ನ 40 ಶಾಸಕರಿಂದ ದೆಹಲಿ ಪರೇಡ್

Public TV
By Public TV
2 hours ago
suicide case
Bengaluru City

ಪ್ರೀತಿ ಹೆಸರಲ್ಲಿ ಯುವತಿಯಿಂದ ಮೋಸ ಆರೋಪ – ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?