ಪ್ರತಿಭಟನಾಕಾರರನ್ನು ಸಮಾಧಾನ ಮಾಡಲು ರಾಷ್ಟ್ರಗೀತೆ ಹಾಡಿದ ಡಿಸಿಪಿ: ವಿಡಿಯೋ

Public TV
1 Min Read
bengaluru cop

ಬೆಂಗಳೂರು: ಪ್ರತಿಭಟನಾಕಾರರನ್ನು ಸಮಾಧಾನ ಮಾಡಲು ಡಿಸಿಪಿ ರಾಷ್ಟ್ರಗೀತೆ ಹಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು ಕೇಂದ್ರ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರು ಗುರುವಾರ ಟೌನ್ ಹಾಲ್‍ನಲ್ಲಿ ಪ್ರತಿಭಟನಾಕಾರರನ್ನು ಸ್ಥಳದಿಂದ ಕಳುಹಿಸಲು ರಾಷ್ಟ್ರಗೀತೆ ಹಾಡಿದರು. ಡಿಸಿಪಿ ಚೇತನ್ ರಾಷ್ಟ್ರಗೀತೆ ಹಾಡುತ್ತಿದ್ದಂತೆ ಪ್ರತಿಭಟನಾಕಾರರು ತಮ್ಮ ಸ್ಥಳದಿಂದ ಎದ್ದು ನಿಂತರು. ಬಳಿಕ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಲು ಒಪ್ಪಿಕೊಂಡರು.

dcp 2 e1576817318314

ಡಿಸಿಪಿ ಚೇತನ್ ರಾಷ್ಟ್ರಗೀತೆ ಹಾಡಿದ ಕೆಲವೇ ಕ್ಷಣದಲ್ಲಿ ಪೌರತ್ವ ಕಾಯ್ದೆಗಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಪೊಲೀಸರ ಬಳಿ ವಾದ ಮಾಡದೆ ತಾವು ಇದ್ದ ಸ್ಥಳವನ್ನು ಖಾಲಿ ಮಾಡಿದ್ದರು. ಸದ್ಯ ಡಿಸಿಪಿ ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರನ್ನು ಸಮಾಧಾನ ಮಾಡಿದ ವಿಡಿಯೋ ವೈರಲ್ ಆಗಿದ್ದು, ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ಹಿನ್ನೆಲೆಯಲ್ಲಿ ಇಂದು ಸಹ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಮುಂದುವರಿಯಲಿದೆ. ಗುರುವಾರ ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಹಲವಾರು ಮಂದಿ ಪ್ರತಿಭಟನೆ ನಡೆಸಿದರು.

ಗುರುವಾರ 244 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು 8 ಎಫ್‍ಐಆರ್ ಗಳನ್ನು ದಾಖಲಿಸಿದ್ದರು. ನಗರದಲ್ಲಿ ಇಂದು ಸಹ ಕೆಲವರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಳ ಮಾಡುಕೊಂಡಿರುವ ಪೊಲೀಸರು ಪ್ರತಿಭಟನೆ ಮಾಡದಂತೆ ಕರೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *