ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ: ರವಿಚಂದ್ರನ್

Public TV
1 Min Read
Dr. V Ravichandran

ಬೆಂಗಳೂರು: ತಪ್ಪಿರುವ ದಾರಿಯನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ ಎಂದು ನಟ, ನಿರ್ಮಾಪಕ ಮತ್ತು ನಿರ್ದೇಶಕ ಡಾ. ವಿ ರವಿಚಂದ್ರನ್ ಅವರು ಹೇಳಿದ್ದಾರೆ.

ಇಂದು ಸಿಎಂಆರ್ ಯುನಿರ್ವಸಿಟಿ 4ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್‌ಗೆ ಡಾಕ್ಟರೇಟ್ ಗೌರವ ನೀಡಲಾಯಿತು. ಬೆಂಗಳೂರಿನ ಸಿಎಂಆರ್ ಕಾಲೇಜಿನಲ್ಲಿ ಅವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿಚಂದ್ರನ್ ಅವರ ಪತ್ನಿ ಸುಮತಿ, ಮಗಳು ಗೀತಾಂಜಲಿ, ಅಳಿಯ ಅಜಯ್, ಮಕ್ಕಳಾದ ವಿಕ್ರಂ ಮತ್ತು ಮನೋರಂಜನ್ ಭಾಗಿಯಾಗಿದ್ದರು.

Dr. V Ravichandran 2

ಈ ವೇಳೆ ಡಾಕ್ಟರೇಟ್ ಗೌರವ ಪಡೆದು ಮಾತನಾಡಿದ ರವಿಚಂದ್ರನ್, ಇನ್ನೂ ಮುಂದೆ ತಪ್ಪಿರುವ ದಾರಿಯನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ. ಡಾಕ್ಟರೇಟ್ ಗೌರವ ಸ್ವೀಕರಿಸಿ, ಇನ್ಮುಂದೆ ಹೊಸ ದಾರಿಯನ್ನು ಹಿಡಿಯುತ್ತೇನೆ. ನನ್ನನ್ನು ಗುರುತಿಸಿ ಸಿಎಂಆರ್ ಯುನಿವರ್ಸಿಟಿಯವರು ಡಾಕ್ಟರೇಟ್ ಗೌರವ ನೀಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಈ ಹಿಂದೆಯೇ ಮೂರು ದಶಕಗಳಿಂದ ಚಿತ್ರರಂಗದಲ್ಲಿ ರವಿಚಂದ್ರನ್ ಅವರು ಮಾಡಿದ ಸೇವೆಗೆ ಗೌರವ ಡಾಕ್ಟರೇಟ್ ನೀಡಬೇಕು ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ಅವರ ಬಹುದಿನದ ಆಸೆ ಈಡೇರಿರುವುದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ರವಿಚಂದ್ರನ್ ಅವರು ನಟ, ನಿರ್ದೇಶಕ, ನಿರ್ಮಾಪಕ, ಗೀತ ರಚನೆ, ಸಂಗೀತ, ಸಂಭಾಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.

ravichandran birthday

ಭಾರತೀಯ ಚಿತ್ರರಂಗದಲ್ಲಿ ವರನಟ ರಾಜ್‌ಕುಮಾರ್ ಅವರು ಮೊದಲು ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಆ ಬಳಿಕ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್ ಸೇರಿದಂತೆ ಹಲವರು ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಾಲಿಗೆ ಈಗ ರವಿಚಂದ್ರನ್ ಅವರು ಕೂಡ ಸೇರ್ಪಡೆಯಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *