ಪತ್ನಿಗೆ ವಿಷ ಕುಡಿಸಿ ತಾನೂ ಆತ್ಮಹತ್ಯೆಗೆ ಶರಣಾದ ವೃದ್ಧ

Public TV
1 Min Read
BNG Crime

ಬೆಂಗಳೂರು: ವೃದ್ಧನೊಬ್ಬ ಪತ್ನಿಗೆ ವಿಷ ಕುಡಿಸಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಿರಿನಗರದಲ್ಲಿ ನಡೆದಿದೆ.

ಗಿರಿನಗರದ ನಿವಾಸಿ ಕೃಷ್ಣಮೂರ್ತಿ ಹಾಗೂ ಸ್ವರ್ಣ ಮೃತ ದುರ್ದೈವಿಗಳು. ಕೃಷ್ಣಮೂರ್ತಿ ಅವರು ಮೊದಲು ಪತ್ನಿ ಸ್ವರ್ಣ ಅವರಿಗೆ ವಿಷ ಕುಡಿಸಿ ಕೊಲೆ ಮಾಡಿದ್ದಾರೆ. ಬಳಿಕ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Police Jeep

ಸ್ವರ್ಣ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹಾಸಿಗೆ ಹಿಡಿದ ಅವರನ್ನು ಆರೈಕೆ ಮಾಡಬೇಕಾದ ಮಗ ಹಾಗೂ ಸೊಸೆ ನಿಷ್ಕಾಳಜಿ ತೋರುತ್ತಿದ್ದರು. ಅಷ್ಟೇ ಅಲ್ಲದೆ ಸಣ್ಣಪುಟ್ಟ ವಿಚಾರಕ್ಕೂ ವೃದ್ಧ ದಂಪತಿಯ ಜೊತೆಗೆ ಜಳವಾಡುತ್ತಿದ್ದರು. ಇದರಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *