ಬೆಂಗಳೂರು: ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಿದಂತೆ ರಾಜ್ಯದಲ್ಲಿ ಲಿಂಗಾಯತ ಸಮುದಾಯಕ್ಕೆ ಶೇ.16 ರಷ್ಟು ಶಿಕ್ಷಣ ಮತ್ತು ಉದ್ಯೋಗದಲ್ಲಿ ಸರ್ಕಾರ ಮೀಸಲಾತಿ ನೀಡಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಒತ್ತಾಯಿಸಿದ್ದಾರೆ.
ಮೀಸಲಾತಿಯಿಂದ ಬಡ ಲಿಂಗಾಯತ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ. ಲಿಂಗಾಯತ ಸಮುದಾಯದಾಯಕ್ಕೆ ಮೀಸಲಾತಿ ನೀಡುವುದರಲ್ಲಿ ತಪ್ಪಿಲ್ಲ. ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ಮೀಸಲಾತಿ ಕೊಟ್ಟಿದ್ದಾರೆ. ಮರಾಠಿಗರಿಗೆ ನೀಡಿದ ಮಾದರಿಯಲ್ಲೇ ರಾಜ್ಯದಲ್ಲೂ ಲಿಂಗಾಯತ ಸಮುದಾಯದವರು ಮನವಿ ಸಲ್ಲಿಸಿದ್ದಾರೆ.
ಬಡ ವಿದ್ಯಾರ್ಥಿಗಳಿಗೆ ಅನುಕೂಲ ಆಗುವುದರಿಂದ ಮೀಸಲಾತಿ ನೀಡಲು ನನ್ನ ಬೆಂಬಲವಿದೆ ಎಂದು ಎಂ.ಬಿ ಪಾಟೀಲ್ ಒತ್ತಾಯಿಸಿದ್ದಾರೆ.