ಬೆಂಗಳೂರು: ಮಹದಾಯಿ ಹೋರಾಟಗಾರರನ್ನು ಭೇಟಿ ಮಾಡದ ರಾಜ್ಯಪಾಲರು ಇಂದು ಗುಜರಾತಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಮಹದಾಯಿ ವಿಚಾರವಾಗಿ ಮನವಿ ಸಲ್ಲಿಸಲು ರೈತರು ರಾಜ್ಯಪಾಲರನ್ನು ಭೇಟಿಗೆ ಕಾಲಾವಕಾಶ ಕೇಳಿದ್ದರು. ಆದರೆ ರಾಜ್ಯಪಾಲರು ಅನುಮತಿಯನ್ನು ನೀಡಿರಲಿಲ್ಲ. ಇಂದು ವಜುಬಾಯಿ ವಾಲಾ ಸಿಲಿಕಾನ್ ಸಿಟಿಯ ವೆಸ್ಟ್ ಆಫ್ ಕಾರ್ಡ್ ರೋಡ್ ಬಳಿ ನೆಡೆಯುತ್ತಿರುವ ಗುಜರಾತ್ನ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
2 ದಿನದಿಂದ ಮಳೆ, ಗಾಳಿ, ಬಿಸಿಲಿನಲ್ಲಿ ಆಹೋರಾತ್ರಿ ಧರಣಿ ಮಾಡಿದ್ದ ರೈತರು ರಾಜ್ಯಪಾಲರನ್ನು ಭೇಟಿ ಮಾಡಲು ಶುಕ್ರವಾರದಿಂದ ಎರಡು ದಿನವು ರಾಜಭವನದ ಬಳಿ ತೆರಳಿದ್ದರು. ಆದರೆ ಹೋರಾಟಗಾರರನ್ನು ಕ್ಯಾರೆ ಅನ್ನದ ರಾಜ್ಯಪಾಲರು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ. ಆದರೆ ಇಂದು ಸಂಜೆ ಗುಜರಾತಿಗರ ಖಾಸಗಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯ್ ವಾಲ ಭಾಗವಹಿಸಿದ್ದಾರೆ.