Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಬೆಂಗಳೂರು ಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಇಂದಿನಿಂದ ಬೆಂಗಳೂರು ಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ

Cinema

ಇಂದಿನಿಂದ ಬೆಂಗಳೂರು ಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ

Public TV
Last updated: February 29, 2024 8:33 am
Public TV
Share
4 Min Read
Siddaramaiah 6
SHARE

ಇಂದಿನಿಂದ ನಡೆಯಲಿರುವ ಬೆಂಗಳೂರು (Bangalore) 15ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು (Chirotsava) ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಂಜೆ 5ಕ್ಕೆ  ಸಿಎಂ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ. ಸಿಂಹಾಸನ, ಸಾಮ್ಮಾ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮುಂತಾದ ಚಿತ್ರಗಳ ಖ್ಯಾತಿಯ ಡಾ.ಜಬ್ಬಾರ್ ಪಟೇಲ್, ಖ್ಯಾತ ನಟರಾದ ಶಿವರಾಜ್ ಕುಮಾರ್, ಇತ್ತೀಚೆಗೆ ವಿಶಾಲ್ ಭಾರದ್ವಾಜ್ ನಿರ್ದೇಶನದ “ಖುಫಿಯಾ” ಚಿತ್ರದಲ್ಲಿ ನಟಿಸಿದ ಬಾಂಗ್ಲಾದೇಶದ ಖ್ಯಾತ ನಟಿ ಅಜಮೇರಿ ಬಂದೋನ್, ಜೆಕ್ ರಿಪಬ್ಲಿಕ್‌ನ ಚಲನಚಿತ್ರ ಶಿಕ್ಷಣ ತಜ್ಞೆ, ವಿಮರ್ಶಕಿ ವಿಯರಾ ಲ್ಯಾಂಗರೋವಾ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳಲಿದ್ದಾರೆ.  ಮೂರು ಬಾರಿ ಗ್ರಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರಿಂದ ಉದ್ಘಾಟನೆಗೆ ಮೊದಲು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಘಾಟನಾ ಚಿತ್ರವಾಗಿ ಸ್ವಿಸ್ ಚಲನಚಿತ್ರ, ಪೀಟರ್ ಲೂಸಿ ನಿರ್ದೇಶನದ, 88 ನಿಮಿಷಗಳ ಅವಧಿಯ ‘ಬೋಂಜೂರ್ ಸ್ವಿಟ್ಸರ್ಲೆಂಡ್’ ಪ್ರದರ್ಶನವಾಗಲಿದೆ. ಕನ್ನಡ ಭಾರತೀಯ ಮತ್ತು ಏಷ್ಯನ್ ಸಿನಿಮಾಗಳಲ್ಲಿ ಸ್ಪರ್ಧಾತ್ಮಕ ವಿಭಾಗಗಳು, ಸಮಕಾಲೀನ ವಿಶ್ವ ಸಿನೆಮಾ, ದೇಶಕೇಂದ್ರಿ, ವಿಮರ್ಶಕರ ವಾರ, ಪುನರ್ವಲೋಕನ, ವಿಷಯಾಧಾರಿತ ಸಾಕ್ಷ್ಯಚಿತ್ರ ವಿಭಾಗ, ಜೀವನಚರಿತ್ರೆ, ಸ್ಮರಣೆ, ಗೌರವ, ಮಹಿಳಾ ಶಕ್ತಿ, ಹೀಗೆ ವಿವಿಧ ವಿಭಾಗಗಳಲ್ಲಿ 50 ಕ್ಕೂ ಹೆಚ್ಚು ದೇಶಗಳ. 180 ಚಲನಚಿತ್ರಗಳು ಈ ಉತ್ಸವದಲ್ಲಿ ಪ್ರದರ್ಶನವಾಗಲಿವೆ.

Chirotsava 2

ಕನ್ನಡ ಚಿತ್ರರಂಗ 90 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಮತ್ತು ಕರ್ನಾಟಕದ 50 ವರ್ಷಗಳ ಸಂಭ್ರಮದಲ್ಲಿ ಕನ್ನಡ ವಿಶೇಷ ವಿಭಾಗದಲ್ಲಿ 30 ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು. ಏಷ್ಯನ್ ಸಿನಿಮಾ ಸ್ಪರ್ಧೆಗೆ ಅಂತಾರಾಷ್ಟ್ರೀಯ ತೀರ್ಪುಗಾರರು, ಭಾರತೀಯ ಸಿನಿಮಾ ಸ್ಪರ್ಧೆಗಾಗಿ ಅಂತರಾಷ್ಟ್ರೀಯ ವಿಮರ್ಶಕ ತೀರ್ಪುಗಾರರು ಮತ್ತು ರಾಷ್ಟ್ರೀಯ ತೀರ್ಪುಗಾರರು ಕನ್ನಡ ಸಿನಿಮಾ ಸ್ಪರ್ಧೆಗಾಗಿ ಅಂತರಾಷ್ಟ್ರೀಯ ವಿಮರ್ಶಕ ತೀರ್ಪುಗಾರರು ಮತ್ತು ರಾಷ್ಟ್ರೀಯ ತೀರ್ಪುಗಾರರು ಸೇರಿದಂತೆ ಚಿತ್ರೋತ್ಸವದಲ್ಲಿ ಐದು ತೀರ್ಪುಗಾರ ತಂಡಗಳಿರುತ್ತವೆ. ವಿದೇಶದಿಂದ ದೃಢಪಡಿಸಿದ ಅಂತಾರಾರಾಷ್ಟ್ರೀಯ ತೀರ್ಪುಗಾರರ ಸದಸ್ಯರಲ್ಲಿ ರಷ್ಯಾದಿಂದ ನೀನಾ ಕೊಚೆಲೆವಾ, ಸ್ಪೇನ್‌ನ ರೊಸಾನ್ನಾ ಜಿ ಅಲೋನ್ಸೆ, ಬಾಂಗ್ಲಾದೇಶದ ಆರಿ ಹಕ್ ಬಾಂಧೋನ್, ಯುಕೆಯಿಂದ ಕ್ಯಾರಿ ರಾಜಿಂದರ್ ಸಾಹಿ, ಫ್ಲೋವಾಕಿಯಾದ ವೈರಾ ಲಾಂಗರೋವಾ, ತೈವಾನ್‌ನಿಂದ ಹ್ಯಾನ್ ಟಿಯೆನ್, ಆಸ್ಟ್ರೇಲಿಯಾದಿಂದ ಮ್ಯಾಕ್ಸಿ ವಿಲಿಯಮ್ಮನ್ ಮತ್ತು ಬಿಲ್ಲೇರಿಯಾದ ಆಂಡೋನಿಕಾ ಮಾರ್ಟೂನೊವಾ ಸೇರಿದ್ದಾರೆ. ರಾಷ್ಟ್ರೀಯ ತೀರ್ಪುಗಾರರ ಸದಸ್ಯರಲ್ಲಿ ಒರಿಸ್ಸಾದಿಂದ ವಿಜಯಾ ಜೆನಾ, ಮಣಿಪುರದಿಂದ ಮೇಘಚಂದ್ರ ಕೊಂಗ್ರಾಮ್, ಕೊಲ್ನೋತಾದಿಂದ ಶೇಖರ್ ದಾಸ್, ಮಹಾರಾಷ್ಟ್ರದಿಂದ ಸಂಜಯ್ ಕೃಷ್ಣಾಜಿ ಪಾಟೀಲ್, ಅಸ್ಸಾಂನಿಂದ ಜಾದುಮೋನಿ ದತ್ತಾ ಸೇರಿದ್ದಾರೆ. ಇವರೆಲ್ಲ ಹೆಸರಾಂತ ನಿರ್ದೇಶಕರು ಇಲ್ಲವೇ ವಿಮರ್ಶಕರು. ಸ್ಥಳೀಯ ಚಿತ್ರನಿರ್ದೇಶಕರು, ವಿಮರ್ಶಕರು, ಪತ್ರಕರ್ತರು ಕೆಲವರು ರಾಷ್ಟ್ರೀಯ, ಅಂತಾರಾಷ್ಟ್ರೀಯ ತೀರ್ಪುಗಾರ ತಂಡದ ಭಾಗವಾಗಿರುತ್ತಾರೆ.

Chirotsava 3

ಕನ್ನಡ ಜನಪ್ರಿಯ ಮನರಂಜನಾ ಚಲನಚಿತ್ರಗಳ ವಿಭಾಗದಲ್ಲಿ 11 ಚಿತ್ರಗಳಿವೆ. ದೇಶ ಕೇಂದ್ರಿತ ವಿಭಾಗದಲ್ಲಿ ನಿರ್ದಿಷ್ಟ ದೇಶದಿಂದ ಸಮಕಾಲೀನ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಈ ಬಾರಿ ಜರ್ಮನಿಯ ಸಿನಿಮಾಗಳ ಮೇಲೆ ಗಮನ ಹರಿಸಲಾಗಿದೆ. ಅದ್ಭುತ ಬಾರತ ನಮ್ಮ ಉತ್ಸವದ ಅನನ್ಯ ವಿಭಾಗ. ಇದರಲ್ಲಿ ಭಾರತದ ಕಡಿಮೆ ತಿಳಿದಿರುವ ಭಾಷೆಗಳಲ್ಲಿ ತಯಾರಾದ ಚಿತ್ರಗಳಿಗೆ ವೇದಿಕೆಯನ್ನು ಕಲ್ಪಿಸಿಕೊಡಲಾಗುತ್ತದೆ. ಈ ಆವೃತ್ತಿಯಲ್ಲಿ ತುಳು, ಕೊಡವ, ಬಂಜಾರ, ಅರೆಬಾಷೆ, ಮಾರ್ಕೋಡಿ, ಗಾಲೊ, ರಾಭ, ಸಂತಾಲಿ, ತಾಯಿಫಾಕೆ, ಭಾಷೆಗಳ 9 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಪುನರವಲೋಕನ ವಿಭಾಗಕ್ಕೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಮೃಣಾಲ್ ಸೇನ್ ಮತ್ತು ಇರಾನಿನ ಚಲನಚಿತ್ರ ನಿರ್ಮಾಪಕ ಅಬ್ಬಾಸ್ ಕೈರೋಸ್ಟೋಮಿ ಅವರನ್ನು ಆಯ್ಕೆ ಮಾಡಿದ್ದು, ಅವರ ಆಯ್ದ ಚಿತ್ರಗಳು ಈ ವಿಭಾಗದಲ್ಲಿ ಪ್ರದರ್ಶನ ಕಾಣಲಿವೆ.

Bangalore Chirotsava 1

ಕನ್ನಡ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಸಂಗೀತ ಸಂಯೋಜಕ ವಿಜಯಭಾಸ್ಕರ್ ಶತಮಾನೋತ್ಸವ ಸ್ಮರಣೆಯಾಗಿ ಅವರ ಒಂದೆರಡು ಚಲನಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗುವುದು. ಅವರು ಸಿನಿಮಾ ಸಂಗೀತಕ್ಕೆ ನೀಡಿದ ಕೊಡುಗೆಯ ಕುರಿತು ವಿಶೇಷ ಪ್ರಸ್ತುತಿ ಇರುತ್ತದೆ. ಛಾಯಾಗ್ರಾಹಕ ಎನ್ ಜಿ ರಾವ್ ಅವರ ಚಿತ್ರವೊಂದನ್ನು ಪ್ರದರ್ಶಿಸುವ ಮೂಲಕ ಅವರಿಗೆ ಶತಮಾನೋತ್ಸವದ ಗೌರವವನ್ನು ಸಲ್ಲಿಸಲಾಗುವುದು. ಕಳೆದವರ್ಷ ನಮ್ಮನ್ನು ಅಗಲಿದ ಹೆಸರಾಂತ ತಾರೆ, ನಿರ್ಮಾಪಕಿ ಲೀಲಾವತಿ, ನಿರ್ದೇಶಕರಾದ ಭಗವಾನ್, ಸಿ.ವಿ. ಶಿವಶಂಕರ್ ಮತ್ತು ಗಾಯಕಿ ವಾಣಿ ಜಯರಾಂ ಗೌರವಾರ್ಥ ಅವರ ಚಲನಚಿತ್ರ ಪ್ರದರ್ಶನ ಇದೆ. 15 ಗಂಟೆಗಳ ಸಾಕ್ಷ್ಯಚಿತ್ರ ಮತ್ತು ಕಿರುಚಿತ್ರಗಳ ವಿಭಾಗವು ಮಾನವ ಘನತೆ ಸಾಮಾಜಿಕ ನ್ಯಾಯ, ಪರಿಸರ ಕಾಳಜಿಗಳು ಮತ್ತು ಲಿಂಗ ಅಸಮಾನತೆಗಳನ್ನು ಸರಿಪಡಿಸುವ ಕಾಳಜಿಯ ಚಲನಚಿತ್ರಗಳ ಮೇಲೆ ವಿಶೇಷ ಗಮನವನ್ನು ಹೊಂದಿದೆ.

 

ಸಂಕಲನ, ಛಾಯಾಗ್ರಹಣ, ಕಲೆ ಮತ್ತು ನಿರ್ಮಾಣ ವಿನ್ಯಾಸ, ಸಂಗೀತ, ಭಾರತೀಯ ಸಿನಿಮಾದಲ್ಲಿ ಸಾಂವಿಧಾನಿಕ ಮೌಲ್ಯಗಳು, ಚಲನಚಿತ್ರ ವಿಮರ್ಶೆ, ಚಲನಚಿತ್ರ ಸಹ ನಿರ್ಮಾಣ ಮತ್ತು ಮಾರುಕಟ್ಟೆ ಸಾಧ್ಯತೆಗಳು, ಲಿಂಗ ಸಂವೇದನೆ, ಚಲನಚಿತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪ್ರಭಾವದ ಕುರಿತು ಮಾತುಕತೆಗಳು, ವಿಚಾರಸಂಕಿರಣಗಳು, ಕಾರ್ಯಾಗಾರಗಳು, ತಜ್ಞರಿಂದ ಉಪನ್ಯಾಸ, ಸಂವಾದ ಇತ್ಯಾದಿ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಒಳಗೊಂಡಿವೆ. ಬೇರೆ ದೇಶಗಳ ತೀರ್ಪುಗಾರರು, ವಿದೇಶದಿಂದ ಮತ್ತು ಭಾರತದ ಇತರ ಭಾಗಗಳ ಚಲನಚಿತ್ರ ತಯಾರಕರು, ವಿಮರ್ಶಕರು/ಪತ್ರಕರ್ತರು, ಚಲನಚಿತ್ರೋತ್ಸವ ಪ್ರತಿನಿಧಿಗಳು, ಪ್ರೋಗ್ರಾಮರ್‌ಗಳು, ಸಲಹೆಗಾರರು ಮೊದಲಾದವರು ಅತಿಥಿಗಳಾಗಿ ಬರಲಿದ್ದಾರೆ. ವಿದೇಶದಿಂದ ಸುಮಾರು 20 ಮಂದಿ ಸೇರಿದಂತೆ ಸುಮಾರು 70 ಅತಿಥಿಗಳು ಚಿತ್ರೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಶ್ರೀಲಂಕಾ, ಬಾಂಗ್ಲಾದೇಶ, ಆಸ್ಟ್ರೇಲಿಯಾ, ಇರಾನ್, ಉಜೇಕಿಸ್ತಾನ್, ಜೆಕ್ ರಿಪಬ್ಲಿಕ್, ಯುಕೆ, ಬಲ್ಲೇರಿಯಾ, ತೈವಾನ್, ಸ್ಪೇನ್, ಜರ್ಮನಿ ಮತ್ತು ರಷ್ಯಾವನ್ನು ಪ್ರತಿನಿಧಿಗಳು, ಸ್ಥಳೀಯ ಚಲನಚಿತ್ರ ಮತ್ತು ಸಾಂಸ್ಕೃತಿಕ ಮಂದಿ, ಬೆಂಗಳೂರಿನಲ್ಲಿರುವ ವಿದೇಶಿ ಸಂಸ್ಥೆಗಳ ಪ್ರತಿನಿಧಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಶಸ್ತಿ ಪ್ರದಾನದೊಂದಿಗೆ ಸಮಾರೋಪ ಸಮಾರಂಭವು, ಮಾರ್ಚ್ 7, 2024, ಗುರುವಾರದಂದು ವಿಧಾನಸೌಧದ ಬ್ಯಾಂಕೈಟ್ ಹಾಲ್‌ನಲ್ಲಿ ನಡೆಯಲಿದೆ.

TAGGED:BangaloreChirotsavasiddaramaiahಚಿತ್ರೋತ್ಸವಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
11 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
52 minutes ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
1 hour ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
1 hour ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
SSLC Exams
Bengaluru City

SSLC ಹಿಂದಿ ಪರೀಕ್ಷೆ ರದ್ದಿಗೆ ಆಗ್ರಹ – ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಪಡೆಯುವಂತೆ DDPI ಗಳಿಗೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?