Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಿಟ್ ಆಂಡ್ ರನ್ ಕೇಸ್, ಗನ್‍ಮ್ಯಾನ್ ಅರೆಸ್ಟ್ – ಅತಿ ಬುದ್ಧಿವಂತಿಕೆ ಪ್ರದರ್ಶಿಸಲು ಹೋಗಿದ್ದ ನಲಪಾಡ್ ಸಿಕ್ಕಿ ಬಿದ್ದಿದ್ದು ಹೇಗೆ?

Public TV
Last updated: February 12, 2020 4:58 pm
Public TV
Share
3 Min Read
Mohammed Nalpad
SHARE

ಬೆಂಗಳೂರು: ಸರಣಿ ಅಪಘಾತ ಮಾಡಿ ಪ್ರಕರಣದಿಂದ ಪಾರಾಗಲು ಅತಿ ಬುದ್ಧಿವಂತಿಕೆ ಪ್ರದರ್ಶಿಸಿದ ಮೊಹಮ್ಮದ್ ನಲಪಾಡ್ ಈಗ ತಾನು ತೋಡಿದ್ದ ಗುಂಡಿಗೆ ಬಿದ್ದಿದ್ದಾನೆ. ಪೊಲೀಸರ ಮುಂದೆ ಅಪಘಾತ ಎಸಗಿದ್ದು ನಾನು ಎಂದು ಸುಳ್ಳು ಹೇಳಿದ್ದಕ್ಕೆ ಈಗ ನಲಪಾಡ್ ಗನ್ ಮ್ಯಾನ್ ಬಾಲಕೃಷ್ಣನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ಸರಣಿ ಅಪಘಾತ ನಡೆದ ಬಳಿಕ ಪ್ರಕರಣ ದಾಖಲಾಗಿತ್ತು. ನಂತರ ಬಾಲಕೃಷ್ಣ ನಾನು ಚಲಾಯಿಸುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು ಎಂದು ಹೇಳಿ ಸದಾಶಿವನಗರ ಪೊಲೀಸರ ಮುಂದೆ ಶರಣಾಗಿದ್ದ.

nalpad 5

ಶರಣಾದ ಬಾಲಕೃಷ್ಣನಿಗೆ ಪೊಲೀಸರು ವಿಚಾರಣೆ ವೇಳೆ ಹಲವು ಪ್ರಶ್ನೆ ಕೇಳಿದ್ದಾರೆ. ಈ ಪ್ರಶ್ನೆಗೆ ಸರಿಯಾದ ಉತ್ತರ ನೀಡದೇ ಕೃತ್ಯ ಎಸಗಿದ್ದು ನಾನು ಎಂದು ಹೇಳುತ್ತಿದ್ದ. ಆತನ ಹೇಳಿಕೆಗೆ ಸ್ಪಷ್ಟತೆ ಇರದಿದ್ದ ಹಿನ್ನೆಲೆಯಲ್ಲಿ ಸತ್ಯ ತಿಳಿಯಲು ಪೊಲೀಸರು ಆತನನ್ನು ಬೆಂಟ್ಲಿ ಕಾರಿನ ಬಳಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಕೀ ನೀಡಿ ಕಾರನ್ನು ಚಾಲು ಮಾಡು ಎಂದು ಹೇಳಿದ್ದಾರೆ.

ಈ ವೇಳೆ ಕಾರನ್ನು ಚಾಲನೆ ಮಾಡಲು ಸಾಧ್ಯವಾಗಲಿಲ್ಲ. ಚಾಲನೆ ಮಾಡಲು ವಿಫಲನಾಗುತ್ತಿದ್ದಂತೆ ಬೆಂಟ್ಲಿ ಕಾರು ಓಡಿಸಿದ ವ್ಯಕ್ತಿ ಬಾಲಕೃಷ್ಣ ಅಲ್ಲ ಎನ್ನುವುದು ಪೊಲೀಸರಿಗೆ ಖಚಿತವಾಯಿತು. ಕೂಡಲೇ ಆತನನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಕಾರು ಓಡಿಸಿದ್ದು ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಎಂದು ಬಾಯಿಬಿಟ್ಟಿದ್ದಾನೆ.

 Nalapad Car

ಸಿಸಿಟಿವಿಗಳನ್ನು ಚೆಕ್ ಮಾಡಿದಾಗ ಬೆಂಟ್ಲಿ ಕಾರನ್ನು ನಲಪಾಡ್ ಓಡಿಸುತ್ತಿದ್ದ ವಿಚಾರ ಪೊಲೀಸರಿಗೆ ಗೊತ್ತಾಗಿತ್ತು. ಆದರೆ ಅಪಘಾತ ನಡೆಸುವಾಗ ಈ ಕಾರನ್ನು ನಲಪಾಡ್ ಓಡಿಸುತ್ತಿದ್ದನೋ ಅಥವಾ ಬೇರೆ ವ್ಯಕ್ತಿಗಳು ಓಡಿಸುತ್ತಿದ್ದರೋ ಎನ್ನುವುದು ಖಚಿತವಾಗಬೇಕಿತ್ತು. ಡ್ರೈವರ್ ಸತ್ಯ ತಿಳಿಸಿದ ಹಿನ್ನೆಲೆಯಲ್ಲಿ ಈಗ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮೊಹಮ್ಮದ್ ನಲಪಾಡ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ವಿಚಾರಣೆ ವೇಳೆ ತಪ್ಪು ಮಾಹಿತಿ ನೀಡಿ ತನಿಖೆ ದಿಕ್ಕುತಪ್ಪಿಸಿ ಸಾಕ್ಷ್ಯ ನಾಶ ಆರೋಪದ ಅಡಿಯಲ್ಲಿ ಗನ್ ಮ್ಯಾನ್ ಬಾಲಕೃಷ್ಣನನ್ನು ಸದಾಶಿವನಗರ  ಪೊಲೀಸರು ಬಂಧಿಸಿದ್ದಾರೆ.

 Nalapad Car ravikanthe gowda

ಈ ಘಟನೆಯ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ್ದ ಡಿಸಿಪಿ ರವಿಕಾಂತೇಗೌಡ, ಮೇಖ್ರಿ ಸರ್ಕಲ್ ಅಂಡರ್ ಪಾಸ್‍ನಲ್ಲಿ ಬೆಂಟ್ಲಿ ಕಾರೊಂದು ಅಪಘಾತ ಮಾಡಿದ್ದು, ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಕಾಲು ಮುರಿದಿದ್ದು, ಒಂದು ಆಟೋ ಕೂಡ ಡ್ಯಾಮೇಜ್ ಆಗಿದೆ. ಅತಿವೇಗವಾಗಿ, ನಿರ್ಲಕ್ಷ್ಯವಾಗಿ ವಾಹನವನ್ನು ಚಾಲನೆ ಮಾಡಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿತ್ತು. ಆದರೆ ಚಾಲಕ ಅಲ್ಲಿಂದ ಓಡಿಹೋಗಿದ್ದನು. ಸೋಮವಾರ ನಾನೇ ಅಪಘಾತ ಮಾಡಿದ್ದು ಎಂದು ಓರ್ವ ಬಂದು ಶರಣಾಗಿದ್ದನು. ಆದರೆ ನಮ್ಮ ವಿಚಾರಣೆಯಲ್ಲಿ ಈತ ವಾಹನ ಚಾಲನೆ ಮಾಡಿರಲಿಲ್ಲ ಎಂಬುದು ಗೊತ್ತಾಗಿದೆ ಎಂದು ತಿಳಿಸಿದ್ದರು.

ನಮಗೆ ಖಚಿತ ಸಾಕ್ಷ್ಯಾಧಾರಗಳ ಮೇಲೆ ನಲಪಾಡ್‍ಯೇ ಕಾರ್ ಓಡಿಸುತ್ತಿದ್ದನು ಎಂದು ತಿಳಿದುಬಂದಿದೆ. ನ್ಯಾಯಾಲಯಕ್ಕೆ ನಾವು ದೋಷಾರೋಪಣ ಪಟ್ಟಿಯನ್ನು ಸಲ್ಲಿಸುತ್ತೇವೆ. ನ್ಯಾಯಾಲಯವು ಶಿಕ್ಷೆಯನ್ನು ತೀರ್ಮಾನ ಮಾಡುತ್ತದೆ ಎಂದು ಡಿಸಿಪಿ ವಿವರಿಸಿದ್ದರು.

nalpad tedx 3

ಏನಿದು ಪ್ರಕರಣ?
ಕಳೆದ ಭಾನುವಾರ ಮಧ್ಯಾಹ್ನ ಬಳ್ಳಾರಿ ರಸ್ತೆಯಲ್ಲಿ ಹೆಬ್ಬಾಳದ ಕಡೆಯಿಂದ ಮೇಖ್ರಿ ಸರ್ಕಲ್ ಅಂಡರ್ ಪಾಸ್ ಮೂಲಕ ಹೋಗುತ್ತಿದ್ದ ಬೆಂಟ್ಲಿ ಕಾರ್ ಬೈಕ್ ಮತ್ತು ಆಟೋಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಆಟೋ ಚಾಲಕ ಸುಹೇಲ್ ಮತ್ತು ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಸಬೀಹಾ ಮತ್ತು ಅವರ ಆರು ವರ್ಷದ ಬಾಲಕನಿಗೆ ಗಾಯಗಳಾಗಿದ್ದವು. ಅಪಘಾತದ ಬಳಿಕ ಐಷಾರಾಮಿ ಕಾರಿನ ಚಾಲಕ ಸ್ಥಳದಲ್ಲೇ ಕಾರನ್ನು ಬಿಟ್ಟು ಓಡಿ ಹೋಗಿದ್ದನು. ಈ ಕುರಿತು ಎಫ್‍ಐಆರ್ ದಾಖಲಾಗಿತ್ತು.

ಅಪಘಾತವಾದಾಗ ನಲಪಾಡ್ ಯಾರ ಕಣ್ಣಿಗೂ ಕಾಣಿಸಲಿಲ್ಲ. ಆದರೆ ನಲಪಾಡ್ ಸಂಬಂಧಿ ನಫಿ ಮೊಹಮದ್ ನಸೀರ್ ಮತ್ತು ಬಾಡಿಗಾರ್ಡ್ ಬಾಲಕೃಷ್ಣ ಕಾಣಿಸಿಕೊಂಡಿದ್ದರು. ಸಂಚಾರ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಕಾರನ್ನು ಚಲಾಯಿಸುತ್ತಿದ್ದವನು ನಲಪಾಡ್ ಎನ್ನುವ ಸುಳಿವು ಸಿಕ್ಕಿತ್ತು. ಅಲ್ಲದೇ ಭಾನುವಾರ ಒಂದೇ ದಿನ ನಗರದ ಎರಡು ಕಡೆ ಎರಡು ಕಾರುಗಳು ಅಪಘಾತ ಮಾಡಿದ್ದವು.

nalpad 6

ಈ ಬಗ್ಗೆ ಮಾಧ್ಯಮವೊಂದು ನಲಪಾಡ್‍ನನ್ನು ಪ್ರಶ್ನೆ ಮಾಡಿದಾಗ, ಮೊದಲಿಗೆ ನನಗೂ ಅಪಘಾತಕ್ಕೂ ಯಾವುದೇ ಸಂಬಂಧವಿಲ್ಲ. ಹೀಗಾಗಿ ಅಪಘಾತಕ್ಕೂ ನನಗೂ ಸಂಬಂಧ ಕಲ್ಪಿಸಬೇಡಿ. ನನಗೆ ಯಾವ ಬಾಡಿಗಾರ್ಡ್ ಕೂಡ ಇಲ್ಲ ಎಂದು ಹೇಳಿದ್ದನು. ನಂತರ ಶಾಸಕರ ಮಗ ಆಗಿದ್ದೇನೆ ಎಂಬ ಮಾತ್ರಕ್ಕೆ ಅಪಘಾತ ಆಗಬಾರದಾ? ಬೇರೆಯವರು ಅಪಘಾತ ಮಾಡುವುದನ್ನು ಸುದ್ದಿ ಮಾಡುವುದಿಲ್ಲ. ಆದರೆ ಶಾಸಕರ ಮಗ ಅಪಘಾತ ಮಾಡಿದರೆ ಮಾತ್ರ ಏಕೆ ಸುದ್ದಿ ಆಗಬೇಕು ಎಂದು

ಈ ಹಿಂದೆ ಮೊಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಬಾರಿನಲ್ಲಿ ಹಲ್ಲೆ ನಡೆಸಿ 116 ದಿನ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

TAGGED:bengalurucarHit and run casenalapadvehiclesನಲಪಾಡ್ಬೆಂಗಳೂರುಬೆಂಗಳೂರು ಪೊಲೀಸ್ಸರಣಿ ಅಪಘಾತ
Share This Article
Facebook Whatsapp Whatsapp Telegram

You Might Also Like

ಸಾಂದರ್ಭಿಕ ಚಿತ್ರ
Districts

ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ – ಜೂ.17ರಂದು ಶಾಲೆ, ಕಾಲೇಜುಗಳಿಗೆ ರಜೆ

Public TV
By Public TV
2 hours ago
Iran
Latest

ಭಾರತದ ಮನವಿಗೆ ಸ್ಪಂದಿಸಿ ಭೂ ಗಡಿ ತೆರೆದ ಇರಾನ್‌

Public TV
By Public TV
2 hours ago
Mantralayam Prahlad Joshi
Districts

ಮಂತ್ರಾಲಯ | ಗುರುರಾಯರ ದರ್ಶನ ಪಡೆದ ಪ್ರಹ್ಲಾದ್ ಜೋಶಿ

Public TV
By Public TV
2 hours ago
Crocodile found in a pothole on the side of the road People are worried Hunagunda Bagalkote
Bagalkot

ಬಾಗಲಕೋಟೆ| ರಸ್ತೆಯ ಪಕ್ಕದ ಗುಂಡಿಯಲ್ಲಿ ಮೊಸಳೆ ಪತ್ತೆ – ಜನರಲ್ಲಿ ಆತಂಕ

Public TV
By Public TV
3 hours ago
Davangere Farmers Complaint
Crime

ರೈತರಿಗೆ ಸಿಎಂ ಭದ್ರತಾ ಸಿಬ್ಬಂದಿ ಒದ್ದ ಆರೋಪ – ದೂರು ದಾಖಲು

Public TV
By Public TV
3 hours ago
Laxman Savadi
Bengaluru City

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಲಕ್ಷ್ಮಣ್ ಸವದಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?