ಬೆಂಗಳೂರು ವಿಶ್ವ ದರ್ಜೆಯ ಶೈಕ್ಷಣಿಕ, ಸಂಶೋಧನಾ ಸಂಸ್ಥೆಗಳ ಕೇಂದ್ರ: ಗೆಹ್ಲೋಟ್‌

Public TV
3 Min Read
karnataka governor thawar chand gehlot ST Joseph Boys High School Bengaluru 2

ಬೆಂಗಳೂರು: ಗುಣಮಟ್ಟದ ಶಿಕ್ಷಣ ನೀಡಲು ವಿದ್ಯಾಸಂಸ್ಥೆಗಳು ಮತ್ತು ತಾಂತ್ರಿಕ ಕಾಲೇಜುಗಳು ಇತ್ತೀಚಿನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಇದರೊಂದಿಗೆ ಅವರು ವಿಶ್ವದ ಅತ್ಯುತ್ತಮ ಸಂಸ್ಥೆಗಳೊಂದಿಗೆ ಗುರುತಿಸಕೊಳ್ಳಬಹುದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಹೇಳಿದರು.

ಸೇಂಟ್ ಜೋಸೆಫ್ ಬಾಲಕರ ಪ್ರೌಢಶಾಲೆಯಲ್ಲಿ(ST Joseph Boys High School) “ಲೋಯೋಲಾ ಟೆಕ್ನಾಲಜಿ ಸೆಂಟರ್” ಉದ್ಘಾಟಿಸಿ ಅವರು ಮಾತನಾಡಿದರು.

karnataka governor thawar chand gehlot ST Joseph Boys High School Bengaluru 5

ಕರ್ನಾಟಕ ರಾಜ್ಯದಲ್ಲಿರುವ ಬೆಂಗಳೂರು(Bengaluru) ನಗರವು ದೇಶದ ಅನೇಕ ವಿಶ್ವ ದರ್ಜೆಯ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳ ಕೇಂದ್ರವಾಗಿದೆ. ದೇಶ ಮತ್ತು ಪ್ರಪಂಚದಲ್ಲಿ ಶಿಕ್ಷಣ, ನಾವೀನ್ಯತೆ ಮತ್ತು ಐಟಿ ಕೇಂದ್ರವಾಗಿ ಗುರುತಿಸಲ್ಪಟ್ಟಿದೆ. ಇಂದಿನ ಕಾಲದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನವು ಬಹಳ ಮುಖ್ಯವಾಗಿದೆ. ತರಗತಿಗಳಲ್ಲಿ ಡಿಜಿಟಲ್ ಕಲಿಕಾ ಸಾಧನಗಳ ಪರಿಣಾಮಕಾರಿ ಬಳಕೆಯು ವಿದ್ಯಾರ್ಥಿಗಳ ದಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ಕೇಂದ್ರವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು ಪಡೆಯಲು ಸಹಾಯ ಮಾಡುತ್ತದೆ. ಈ ಕೇಂದ್ರವು ಒಂದು ನಾವೀನ್ಯತೆ ಕೇಂದ್ರವಾಗಿದೆ, ಇದು ವಿದ್ಯಾರ್ಥಿಗಳಲ್ಲಿ ನವೀನ ಚಿಂತನೆ ಮತ್ತು ಮನೋಭಾವವನ್ನು ಬೆಳೆಸುತ್ತದೆ, ವಿಜ್ಞಾನದಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಕುತೂಹಲಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

karnataka governor thawar chand gehlot ST Joseph Boys High School Bengaluru 4

 

ಕರ್ನಾಟಕ ಜೆಸ್ಯೂಟ್ಸ್ ಸಂಸ್ಥೆಯು ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ವೈವಿಧ್ಯಮಯ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸಿದೆ. ಬೆಂಗಳೂರನ್ನು ಶಿಕ್ಷಣ ಕೇಂದ್ರವನ್ನಾಗಿ ಮಾಡುವಲ್ಲಿ ಜೆಸ್ಯೂಟ್‌ಗಳು ಗಣನೀಯ ಕೊಡುಗೆ ನೀಡಿದ್ದಾರೆ.

165 ವರ್ಷಗಳ ಹಿಂದೆ ಸ್ಥಾಪಿತವಾದ ಸೇಂಟ್ ಜೋಸೆಫ್ ಬಾಲಕರ ಪ್ರೌಢಶಾಲೆ ಬೆಂಗಳೂರಿನ ಅತ್ಯಂತ ಹಳೆಯ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಶಾಲೆಯು ವಿಶ್ವ ವೇದಿಕೆಯಲ್ಲಿ ಯಶಸ್ಸಿನ ಅನೇಕ ದಾಖಲೆಗಳನ್ನು ಸ್ಥಾಪಿಸಿದೆ. ಅತ್ಯುತ್ತಮ ಪರೀಕ್ಷಾ ಫಲಿತಾಂಶಗಳು, ಅತ್ಯುತ್ತಮ ಚಟುವಟಿಕೆಗಳಿಂದಾಗಿ, ಈ ಶಾಲೆಯು ಅತ್ಯುತ್ತಮ ಶಾಲೆಗಳಲ್ಲಿ ಒಂದಾಗಿದೆ. ಈ ಸಂಸ್ಥೆ ದೇಶಕ್ಕೆ ಅನೇಕ ಮಹಾನ್ ವ್ಯಕ್ತಿಗಳನ್ನು ನೀಡಿದೆ ಎಂದು ಹೇಳಿದರು.

karnataka governor thawar chand gehlot ST Joseph Boys High School Bengaluru 1

ಮುಂದಿನ 25 ವರ್ಷಗಳ ಪ್ರಯಾಣವು ನವ ಭಾರತ ನಿರ್ಮಾಣಕ್ಕೆ ಸುವರ್ಣಯುಗವಾಗಿದೆ. ಜಿ-20 ಅಧ್ಯಕ್ಷ ಸ್ಥಾನದ ಮೂಲಕ, ವಿಶ್ವದಾದ್ಯಂತದ ದೇಶಗಳ ಮುಂದೆ ಭಾರತದ ಪ್ರಬಲ ಸ್ಥಾನವನ್ನು ಪ್ರದರ್ಶಿಸಲು ಅವಕಾಶವಿದೆ. ಭಾರತ ದೇಶವು “ವಸುಧೈವ ಕುಟುಂಬಕಂ” ಮತ್ತು “ಸರ್ವೇ ಭವಂತು ಸುಖಿನಃ ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ವಿಶ್ವದಲ್ಲಿ ಏಕತೆಯ ಸಾರ್ವತ್ರಿಕ ಭಾವನೆಯನ್ನು ಉತ್ತೇಜಿಸಲು ಮತ್ತು ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಎಂಬ ಮಂತ್ರದೊಂದಿಗೆ ಕೆಲಸ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇವಲ 15 ರನ್‌ಗಳಿಗೆ ಆಲೌಟ್‌- ಟಿ20ಯಲ್ಲೇ ಕೆಟ್ಟ ದಾಖಲೆ ಬರೆದ ಸಿಡ್ನಿ ಥಂಡರ್‌

ಜಾಗತಿಕ ತಾಪಮಾನ, ಹವಾಮಾನ ಬದಲಾವಣೆ ಮತ್ತು ಗಾಳಿಯ ಗುಣಮಟ್ಟದ ಅಸಮಾನ ಅವನತಿಯಿಂದಾಗಿ ನಾವು ಪ್ರಸ್ತುತ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಭಾರತೀಯ ಸಂಸ್ಕೃತಿಯಲ್ಲಿ ಪರಿಸರಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕೃತಿಯು ಪರಿಸರವನ್ನು ಸಂರಕ್ಷಿಸಲು ನಮ್ಮನ್ನು ಪ್ರೇರೇಪಿಸುತ್ತಿದೆ.ನಮ್ಮ ಸಂಸ್ಕೃತಿಯಲ್ಲಿ ಪ್ರಕೃತಿ ಆರಾಧನೆಯು ಒಂದಲ್ಲ ಒಂದು ರೀತಿಯಲ್ಲಿ ಪರಿಸರ ಸಂರಕ್ಷಣೆಗೆ ಸಂಬಂಧಿಸಿದೆ. ಸನಾತನ ಸಂಪ್ರದಾಯದಲ್ಲಿ, ಮಾನವರು ಮರ-ಗಿಡಗಳು, ನದಿಗಳು-ಪರ್ವತಗಳು, ಬೆಂಕಿ-ಗಾಳಿ ಸೇರಿದಂತೆ ಪ್ರಕೃತಿಯ ವಿವಿಧ ರೂಪಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ ಎಂದು ಹೇಳಿದರು.

karnataka governor thawar chand gehlot ST Joseph Boys High School Bengaluru 3

ಉತ್ತಮ ಪರಿಸರ, ಸಮಾಜ ಮತ್ತು ದೇಶ ನಮಗೆ ಬಹಳಷ್ಟು ನೀಡಿದೆ, ನಾವೂ ಸಹ ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು, ದೇಶ ಸೇವೆಯನ್ನು ಪ್ರಮುಖವೆಂದು ಪರಿಗಣಿಸಬೇಕು. ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರವನ್ನು ವಹಿಸುವ ಮೂಲಕ, ಯುವಕರು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸ್ಥಾಪಕ ಥಾಮಸ್ ತೆಕ್ಕೆತಲ, ಪ್ರಾಂಶುಪಾಲರಾದ ಸುನಿಲ್ ಫೆರ್ನಾಂಡಿಸ್, ಆಡಳಿತಾಧಿಕಾರಿ ವಿಶಾಲ್ ಡಿಸೋಜಾ, ವೈಸ್ ಪ್ರಿನ್ಸಿಪಾಲ್ ಬ್ರೈನ್ ಆಂಟೋನಿ, ಪ್ರವೀಣ್ ರೋಡ್ರಿಗಸ್, ನಿರ್ದೇಶಕಿ ಆಶಾ ಸುಂದರರಾಜನ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *