– 15ನೇ ಬಾರಿಗೆ ಕರಗ ಹೊರಲಿರುವ ಎ.ಜ್ಞಾನೇಂದ್ರ
ಬೆಂಗಳೂರು: ಏ.4ರಿಂದ ಏ.14ರವರೆಗೆ ಬೆಂಗಳೂರಿನ ಐತಿಹಾಸಿಕ ಕರಗ (Bengaluru Karaga) ಮಹೋತ್ಸವ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ (A Jnanendra) ಕರಗ ಹೊರಲಿದ್ದಾರೆ.
Advertisement
ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ಸಲ 15ನೇ ಬಾರಿಗೆ ಕರಗ ಹೊರಲಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದ್ದು, ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಇದನ್ನೂ ಓದಿ: Champions Trophy 2025: ಮತ್ತೆರಡು ದಾಖಲೆಗಳ ಹೊಸ್ತಿಲಲ್ಲಿ ಚೇಸಿಂಗ್ ಮಾಸ್ಟರ್ ಕೊಹ್ಲಿ
Advertisement
Advertisement
ಏ.9ರಂದು ಆರತಿ ದೀಪಗಳು, ಏ.10ರ ಗುರುವಾರ ಹಸೀ ಕರಗ, ಏ.11ರಂದು ಹೊಂಗಲು ಸೇವೆ, ಏ.12ರ ಶನಿವಾರದಂದು ಕರಗ ಶಕ್ತ್ಯೋತ್ಸವ ಹಾಗೂ ಧರ್ಮರಾಯಸ್ವಾಮಿ ರಥೋತ್ಸವ, ಏ.13ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ ಮತ್ತು ಏ.14ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ನೆರವೇರಲಿದೆ. ಇದನ್ನೂ ಓದಿ: ಮಾ.11ರಿಂದ ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ
Advertisement