ಬೆಂಗಳೂರು: ಬೆಂಗಳೂರಿನಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಭಾನುವಾರ ರಾತ್ರಿ ಹೈಡ್ರಾಲಿಕ್ ವೈಫಲ್ಯದಿಂದಾಗಿ ಮಧ್ಯದಲ್ಲೇ ಹಿಂತಿರುಗಬೇಕಾಯಿತು ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಬೆಂಗಳೂರು-ಕೋಲ್ಕತ್ತಾ ಮಾರ್ಗದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ (ವಿಮಾನ IX 2718)ದಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಈ ಬಗ್ಗೆ ವರದಿ ಮಾಡಿ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ.
ಕೆಐಎಯಿಂದ ಸಂಜೆ 7:05 ಕ್ಕೆ ಹೊರಡಬೇಕಿದ್ದ ವಿಮಾನವು ಸಂಜೆ 7:16 ಕ್ಕೆ ಹೊರಟು 9:19 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.