Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು?

Public TV
Last updated: June 27, 2022 11:24 am
Public TV
Share
2 Min Read
JayalalithaaApp
SHARE

ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ಅಕ್ರಮ ಆಸ್ತಿ ಜಪ್ತಿ ಮಾಡಿ 26 ವರ್ಷ ಆಗುತ್ತಿದೆ. ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಈಗ ಜಯಲಲಿತಾ ಅವರ ಸೀರೆ, ಚಪ್ಪಲಿ, ಶಾಲು ಹರಾಜಿಗೆ ಇಡಬೇಕು ಅಂತಾ ಕರ್ನಾಟಕದ ವಕೀಲರೊಬ್ಬರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ದಿವಂಗತ ಜಯಲಲಿತಾ ಅವರ ಸೀರೆ, ಚಪ್ಪಲಿ ಎಷ್ಟು ಇತ್ತು? ಹರಾಜಿಗೆ ಇಟ್ಟರೆ ಏನು ಅನುಕೂಲ ಆಗುತ್ತದೆ ಈ ಎಲ್ಲದರ ಮಾಹಿತಿ ಈ ಕೆಳಗಿನಂತಿದೆ.

karnataka highcourt

ತಮಿಳುನಾಡಿನ ಮಾಜಿ ಸಿಎಂ ದಿವಂಗತೆ ಜಯಲಲಿತಾ ಮೃತರಾಗಿ ಇಂದಿಗೆ ಆರು ವರ್ಷ. ಮೃತರಾದ ಆರು ವರ್ಷದ ಬಳಿಕ ಅಕ್ರಮ ಆಸ್ತಿ ಗಳಿಕೆಯಲ್ಲಿ ಅವರಿಂದ ವಶಪಡಿಸಿಕೊಂಡಿದ್ದ ವಸ್ತುಗಳು ಈಗ ಚರ್ಚೆಗೆ ಬಂದಿವೆ. ಜಯಲಲಿತಾ ಅವರು 1991-96ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಅಂತ ಆರೋಪಿಸಿ ವಕೀಲ ಸುಬ್ರಮಣಿಯಮ್ ಸ್ವಾಮಿ ದೂರು ನೀಡಿದ್ದರು. ಸಿಬಿಐ 1997ರಲ್ಲಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಆಕ್ರಮ ಆಸ್ತಿಯನ್ನು ಜಪ್ತಿ ಮಾಡಲಾಯಿತು. ರಾಷ್ಟ್ರೀಯ ಸಂಪತ್ತು ಅಂತಾ ಘೋಷಣೆ ಮಾಡಿ ಕರ್ನಾಟಕದ ಖಜಾನೆಯಲ್ಲಿ ಇಡಲಾಯಿತು. 26 ವರ್ಷಗಳಿಂದ ಅವರ ಅವರ ವಸ್ತುಗಳು ಖಜಾನೆಯಲ್ಲಿ ಕೊಳೆಯುತ್ತಾ ಇದ್ದು ನಿಷ್ಪ್ರಯೋಜಕ ಆಗುವುದು ಬೇಡ ಹರಾಜಿಗೆ ಇಟ್ಟರೆ ಅಭಿಮಾನಿಗಳು ತೆಗೆದುಕೊಳ್ಳುತ್ತಾರೆ. ಹರಾಜಿಗೆ ಇಡಲು ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವಕೀಲ ನರಸಿಂಹ ಮೂರ್ತಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪ್ರೇಯಸಿ ದೂರಾಗಿದ್ದಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದು ಪ್ರಾಣ ಬಿಟ್ಟ!

jayalalitha

ವಿಧಾನಸೌಧದ ಖಜಾನೆಯಲ್ಲಿ ಜಯಲಲಿತಾರ 11,344 ಸೀರೆ, 750 ಜೊತೆ ಚಪ್ಪಲಿ ಮತ್ತು ೨೫೦ ಶಾಲುಗಳು 26 ವರ್ಷಗಳಿಂದ ಕೊಳೆಯುತ್ತಿವೆ. ಇದನ್ನು ಹಾಗೇ ಬಿಟ್ಟರೆ ನ್ಯಾಷನಲ್ ವ್ಯರ್ಥ ಆಗುತ್ತದೆ. ಇದನ್ನು ಹರಾಜಿಗೆ ಇಟ್ಟರೆ ಅವರ ಅಭಿಮಾನಿಗಳು ಒಂದು ಸಾವಿರ ಅಥವಾ ಹತ್ತು ಸಾವಿರ ಕೊಟ್ಟು ಕೊಂಡುಕೊಳ್ಳುತ್ತಾರೆ. ಇದರಿಂದ ಸರ್ಕಾರಕ್ಕೆ ಆದಾಯ ಬರುತ್ತದೆ. ಏಕೆಂದರೆ ಜಯಲಲಿತಾ ಅವರು ಬದುಕಿಲ್ಲ. ಕೇಸ್ ಇದ್ದರೂ ಕೂಡ ಅವರಿಲ್ಲದ ಕಾರಣ ಏನು ಆಗುವುದಿಲ್ಲ. ಅವರ ಸೀರೆ, ಚಪ್ಪಲಿ, ಶಾಲು ಹರಾಜಿಗೆ ಇಟ್ಟರೆ ಪ್ರಯೋಜನಕ್ಕೆ ಬರುತ್ತದೆ. ಹಾಗಾಗಿ ನಿರ್ದೇಶನಕ್ಕೆ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದೇನೆ. ಆದೇಶ ನೀಡಿದರೆ ಅನುಕೂಲ ಆಗುತ್ತದೆ ಎಂದು ವಕೀಲ ನರಸಿಂಹಮೂರ್ತಿ ಹೇಳಿದ್ದಾರೆ.

jayalalitha 1

ಅಕ್ರಮ ಆಸ್ತಿ ಕೇಸ್ ವಿಚಾರಣೆಯನ್ನು ಹೊರ ರಾಜ್ಯದಲ್ಲಿ ಮಾಡಿಸಬೇಕು ಅಂತಾ ದೂರುದಾರರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ಆಗಾಗಿ ಕರ್ನಾಟಕ ರಾಜ್ಯದ ಖಜಾನೆಯಲ್ಲಿ ವಸ್ತುಗಳನ್ನು ಇಟ್ಟು ವಿಚಾರಣೆ ಮಾಡುತ್ತಿದ್ದರು. ವಿಚಾರಣೆ ಹಂತದಲ್ಲಿ ಇರುವಾಗಲೇ ಮೃತರಾದ ಕಾರಣ ವಸ್ತುಗಳನ್ನ ತಮಿಳುನಾಡು ಅಥವಾ ಕರ್ನಾಟಕ ಯಾವ ರಾಜ್ಯದಲ್ಲಾದರೂ ಹರಾಜಿಗೆ ಇಡಲು ಅವಕಾಶ ಮಾಡಿಕೊಡಬೇಕು. ಇದರಿಂದ ಅನುಕೂಲ ಇದೆ ಅಂತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡೀಸೆಲ್ ಕೊರತೆ- ಇಂದು ಸಂಜೆಯೊಳಗೆ ಸಮಸ್ಯೆ ಬಗೆಹರಿಸುತ್ತೇವೆ: BMTC ಎಂಡಿ ಸ್ಪಷ್ಟನೆ

 ಒಟ್ಟಾರೆ ಜಯಲಲಿತಾ ಮೃತಪಟ್ಟಿದ್ದಾರೆ. 26 ವರ್ಷಗಳಿಂದ ಅವರ ವಸ್ತುಗಳು ಖಜಾನೆಯಲ್ಲಿ ಕೊಳೆಯುತ್ತಿವೆ. ನಿಷ್ಪ್ರಯೋಜಕ ಆಗದೇ ಪ್ರಯೋಜನ ಆಗಲಿ ಅಂತಾ ವಸ್ತುಗಳ ಹರಾಜಿಗೆ ವಕೀಲರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದಾರೆ. ಈ ವಕೀಲರ ಮನವಿಯನ್ನು ಪುರಸ್ಕರಿಸಿ ಹರಾಜಿಗೆ ನಿರ್ದೇಶನ ನೀಡುತ್ತಾರಾ ಅಥವಾ ತಟಸ್ಥ ಕಾಯ್ದುಕೊಳ್ಳುತ್ತಾರಾ, ಕಾದು ನೋಡಬೇಕಿದೆ.

Live Tv

TAGGED:jayalalithaasareesslippertamil naduಚಪ್ಪಲಿಜಯಲಲಿತಾತಮಿಳುನಾಡುಸೀರೆ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
18 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
21 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

Sunil Gavaskar Virat Kohli
Cricket

ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ ವಿರುದ್ಧ ಗವಾಸ್ಕರ್ ಗರಂ

Public TV
By Public TV
1 hour ago
CRIME
Bengaluru City

Bengaluru | ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ

Public TV
By Public TV
2 hours ago
special RCB victory parade in Bengaluru on Wednesday
Bengaluru City

ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

Public TV
By Public TV
2 hours ago
Josh Hazlewood
Cricket

IPL 2025 – ಫೈನಲ್ ಪಂದ್ಯದ ‘ಲಕ್ಕಿ ಕ್ರಿಕೆಟರ್’ ಹೇಜಲ್‌ವುಡ್

Public TV
By Public TV
2 hours ago
Krunal Pandya 1
Cricket

ಪಂದ್ಯಶ್ರೇಷ್ಠ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್‌!

Public TV
By Public TV
2 hours ago
Rajat Patidar
Cricket

UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?