ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಪ್ರಕರಣ ಮಾಸುವ ಮುನ್ನವೇ ಇದೀಗ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ.
ಹೌದು. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಮಾದನಯಾಕನ ಹಳ್ಳಿ ಬಳಿಯ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ವಸಂತಾ(40), ಯಶವಂತ್ (15) ಹಾಗೂ ನಿಶ್ಚಿತಾ (6) ಎಂದು ಗುರುತಿಸಲಾಗಿದೆ.
ಒಂದು ರೂಮಿನಲ್ಲಿ ತಾಯಿ- ಮಗಳು ಹಾಗೂ ಇನ್ನೊಂದು ರೂಮಿನಲ್ಲಿ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಿಂದ ಯಾರೂ ಹೊರಬರುತ್ತಿಲ್ಲ ಎಂದು ಸಂಶಯಗೊಂಡು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಾನು, ಸೌಜನ್ಯ ಲಿವಿಂಗ್ ಟುಗೆದರ್ನಲ್ಲಿ ಇರಲಿಲ್ಲ: ವಿವೇಕ್
ವರ್ಷದ ಹಿಂದೆ ವಸಂತಾ ಅವರ ಪತಿ ಕೊರೊನಾದಿಂದ ಮೃತಪಟ್ಟಿದ್ದರು. ಆ ಬಳಿಕದಿಂದ ವಸಂತಾ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಹೇಳಲಾಗುತ್ತಿದೆ. ಇದೇ ಈ ಆತ್ಮಹತ್ಯೆಗೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ.
ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.