ಬೆಂಗಳೂರು: ಕ್ಯಾಸಿನೋಗಾಗಿ ಕಳ್ಳತನ ಎಸಗುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಮಾಗಡಿ ರಸ್ತೆ ಠಾಣೆಯ ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರಿಂದ 5.45 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಆಸೀಫ್ ಹಾಗೂ ಆತನ ಇಬ್ಬರೂ ಸಹಚರರನ್ನು ಬಂಧಿಸಲಾಗಿದೆ. ಆರೋಪಿಗಳು ಹಣಕ್ಕಾಗಿ ಮಾಗಡಿರಸ್ತೆಯ ಕಾರ್ಖಾನೆಯೊಂದರ ಕಚೇರಿಗೆ ನುಗ್ಗಿ ದೋಚಿದ್ದರು. ಕಳ್ಳತನ ಮಾಡಿದ್ದ ಆರೋಪಿಗಳನ್ನು ಸಿಸಿಟಿವಿ ದೃಶ್ಯ ಆಧರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಪೋಲಿ ಹುಡುಗರ ಹಾವಳಿ- ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿ ಅಶ್ಲೀಲ ಬರಹ
2017ರಲ್ಲಿ ಕಳ್ಳತನ ಪ್ರಕರಣವೊಂದರಲ್ಲಿ ವಿದ್ಯಾರಣ್ಯಪುರ ಪೊಲೀಸರಿಂದ ಅರೆಸ್ಟ್ ಆಗಿದ್ದ ಆಸೀಫ್ ಬಿಡುಗಡೆ ಬಳಿಕ ಊರು ಬಿಟ್ಟು ಹುಬ್ಬಳ್ಳಿ – ಧಾರವಾಡ ಸೇರಿದ್ದ. ಧಾರವಾಡದಲ್ಲಿ (Dharwad) ಕೆಲಸ ಮಾಡಿಕೊಂಡಿದ್ದ ಆರೋಪಿಗಳು ಕ್ಯಾಸಿನೋ ಬಲೆಗೆ ಬಿದ್ದು ಹಣಕ್ಕಾಗಿ ಕಳ್ಳತನ ಎಸಗುತ್ತಿದ್ದರು. ಬಳಿಕ ಹುಬ್ಬಳ್ಳಿ ಪೊಲೀಸರಿಗೆ ಸಿಕ್ಕಿ ಜೈಲು ಸೇರಿದ್ದ ಆಸೀಫ್ ಆರು ವರ್ಷದ ನಂತರ ಬೆಂಗಳೂರಿಗೆ ಮರಳಿ ಬಂದಿದ್ದ.
ತನ್ನ ಜೊತೆಗಾರರಾದ ಶಬೀರ್ ಹಾಗೂ ನೌಸದ್ ಜೊತೆಗೂಡಿ ಕಳ್ಳತನ ಎಸಗುತ್ತಿದ್ದ. ಈಗ ಮತ್ತೆ ಹಳೆಯ ಚಾಳಿ ಮುಂದುವರಿಸಿ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಒಗ್ಗಟ್ಟಿನ ರಣಕಹಳೆ- ಇಂದಿನಿಂದ 2 ದಿನ ವಿಪಕ್ಷಗಳ ಒಕ್ಕೂಟ ಸಭೆ
Web Stories