ಬೆಂಗಳೂರು: ಪಾರ್ಕ್ನಲ್ಲಿ ಮಲಗಿದ್ದ ವೇಳೆ ಬೃಹತ್ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ರಾಜಾಜಿನಗರದ (Rajajinagar) ನವರಂಗ್ (Navarang) ಬಳಿ ಇರುವ ಪಾಲಿಕೆ ಪಾರ್ಕ್ನಲ್ಲಿ ನಡೆದಿದೆ.
ಲಕ್ಷ್ಮಣ್ (31) ಮೃತ ದುರ್ದೈವಿ. ಲಕ್ಷ್ಮಣ್ ಪಾಲಿಕೆಯ ಕಸದ ಗಾಡಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಭಾನುವಾರ ಸಂಜೆ ಕೆಎಎಲ್ಇ ಮೈದಾನದ ಬಳಿ ಇರುವ ಬಿಬಿಎಂಪಿ ಪಾರ್ಕ್ನಲ್ಲಿ (BBMP Park) ಮಲಗಿದ್ದ ವೇಳೆ ಬೃಹತ್ ಮರ ಬಿದ್ದಿದೆ. ಇದನ್ನೂ ಓದಿ: ನಿಖಿಲ್ ಗೆಲ್ಲಿಸಲು ಆಗದಿದ್ದ ಮೇಲೆ ಯಾಕೆ ಕಣಕ್ಕೆ ಇಳಿಸಿದ್ರು: ಹೆಚ್ಡಿಕೆ ವಿರುದ್ಧ ದೇವೇಗೌಡ ಗರಂ
ಮರ ಬಿದ್ದ ಪರಿಣಾಮ ಲಕ್ಷ್ಮಣ್ ಎದೆ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಘಟನೆ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ಚಾಲಕ ಸ್ಥಳದಲ್ಲೇ ಸಾವು