ನವದೆಹಲಿ: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್ಪ್ರೆಸ್ವೇ (Bengaluru -Mangaluru Expressway) ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಮುಂದಾಗಿದೆ.
ಹಾಸನದ ಮೂಲಕ ಈ ಎಕ್ಸ್ಪ್ರೆಸ್ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್ಪ್ರೆಸ್ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ.
Advertisement
ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ ನಡೆದರೆ 2028 ರಿಂದ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಇದನ್ನೂ ಓದಿ: ಶಿರಾಡಿಯಲ್ಲಿ ಸುರಂಗ ಮಾರ್ಗ – ಡಿಪಿಆರ್ ತಯಾರಿಸಲು ಕೇಂದ್ರ ಒಪ್ಪಿಗೆ
Advertisement
Advertisement
ರಾಜಧಾನಿ ಬೆಂಗಳೂರಿನಿಂದ ಮಂಗಳೂರು ಸಂಪರ್ಕಕ್ಕೆ ಮೂರು ಪ್ರಮುಖ ಮಾರ್ಗಗಳಿವೆ. ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟಿ ಮೂಲಕ ಇಳಿಯಬೇಕಾಗುತ್ತದೆ. ಈ ಪೈಕಿ ಹಾಸನ ಶಿರಾಡಿ ಘಾಟಿ ಬಹಳ ಹತ್ತಿರದ ಮಾರ್ಗವಾಗಿದೆ. ಆದರೆ ಮಳೆಗಾಲದಲ್ಲಿ ಅಲ್ಲಲ್ಲಿ ಭೂಕುಸಿತ ಸಂಭವಿಸಿದರೆ ರಸ್ತೆ ಸಂಚಾರ ದುಸ್ತರವಾಗುತ್ತದೆ. ಈ ಕಾರಣಕ್ಕೆ ಎಕ್ಸ್ಪ್ರೆಸ್ವೇ ನಿರ್ಮಾಣ ಮಾಡಲು ಸರ್ಕಾರಗಳು ಮುಂದಾಗಿವೆ.
Advertisement
ಸಮಗ್ರ ಯೋಜನಾ ವರದಿಗಾಗಿ ಸರ್ಕಾರ ಜುಲೈನಲ್ಲಿ ಟೆಂಡರ್ ಆಹ್ವಾನಿಸಿತ್ತು. ನವೆಂಬರ್ ವೇಳೆಗೆ ಒಟ್ಟು 9 ಕಂಪನಿಗಳು ಬಿಡ್ ಸಲ್ಲಿಸಿದ್ದು ಈ ಪೈಕಿ ಒಂದು ಕಂಪನಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕಂಪನಿಗೆ ಡಿಪಿಆರ್ ಪೂರ್ಣಗೊಳಿಸಲು 540 ದಿನಗಳ ಸಮಯವನ್ನು ನೀಡಲಾಗುತ್ತದೆ. ಡಿಪಿಆರ್ ಪೂರ್ಣಗೊಂಡ ಬಳಿಕ ಎಕ್ಸ್ಪ್ರೆಸ್ವೇ ನಿರ್ಮಾಣದ ಕೆಲಸ ಆರಂಭವಾಗಲಿದೆ.