Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗಣರಾಜ್ಯೋತ್ಸವ ಸಂಭ್ರಮಕ್ಕೆ ಭರದ ಸಿದ್ಧತೆ- ರಸ್ತೆ ಮಾರ್ಗ ಬದಲು, ಪೊಲೀಸ್ ಸರ್ಪಗಾವಲು

Public TV
Last updated: January 24, 2020 12:33 pm
Public TV
Share
3 Min Read
REPUBLIC DAY
SHARE

ಬೆಂಗಳೂರು: 71 ನೇ ಗಣರಾಜ್ಯೋತ್ಸವದ ಆಚರಣೆಗೆ ಮಾಣಿಕ್ ಷಾ ಪರೇಡ್ ಮೈದಾನ ಸಿದ್ಧವಾಗಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಸಿದ್ಧತೆಗಳು ಪೂರ್ಣವಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ವಿ.ಆರ್ ವಾಲಾ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಭಾರತೀಯ ವಾಯುಪಡೆಯಿಂದ ರಾಷ್ಟ್ರಧ್ವಜಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಬಳಿಕ ತೆರೆದ ವಾಹನದಲ್ಲಿ ರಾಜ್ಯಪಾಲರು ಪರೇಡ್ ವೀಕ್ಷಿಸಿ ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ.

BNG 10

ಈ ವರ್ಷದ ಗಣರಾಜ್ಯೋತ್ಸವದಲ್ಲಿ 44 ತುಕಡಿಗಳ 1750 ವಿದ್ಯಾರ್ಥಿಗಳಿಂದ ಕವಾಯತು ಮತ್ತು ಪಥ ಸಂಚಲನ ನಡೆಸಲಿದ್ದಾರೆ. ಮೊದಲ ಬಾರಿಗೆ ಬಿಬಿಎಂಪಿ ಪೌರ ಕಾರ್ಮಿಕರಿಂದ ಸ್ವಚ್ಛ ಭಾರತ್ ಅಭಿಯಾನದ ಜಾಗೃತಿ ಕುರಿತು ಪಥ ಸಂಚಲನ ನಡೆಸಲಿದ್ದಾರೆ. ಸುಮಾರು 2 ಸಾವಿರ ಮಕ್ಕಳಿಂದ 3 ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದಲ್ಲದೆ ಆಕರ್ಷಕ ಮೋಟಾರ್ ಸೈಕಲ್ ಪ್ರದರ್ಶನ, ರಾಜ್ಯ ಪೊಲೀಸ್ ಗರುಡ ಪಡೆಯಿಂದ ಅಣಕು ಪ್ರದರ್ಶನ ನಡೆಯಲಿದೆ. ಇದಾದ ಬಳಿಕ ರಾಜ್ಯಪಾಲರಿಂದ ಸರ್ವೋತ್ತಮ ಪ್ರಶಸ್ತಿ ಪ್ರದಾನವಾಗಲಿದೆ. ಕಾರ್ಯಕ್ರಮ ವೀಕ್ಷಣೆಗೆ 10 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಮೈದಾನದ ಸುತ್ತ 70 ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

BNG 1 2

ಕಾರ್ಯಕ್ರಮ ನಡೆಯೋ ಮಾಣಿಕ್ ಷಾ ಮೈದಾನದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲಾಗಿದೆ. ಭದ್ರತೆಗಾಗಿ 10 ಕೆಎಸ್‍ಆರ್ ಪಿ ತುಕಡಿ, 2 ಡಿಸ್ವ್ಯಾಟ್ ತಂಡ, 1 ಕ್ಷಿಪ್ರ ಕಾರ್ಯಾಚರಣೆ ತಂಡ, ಗರುಡ ಪಡೆ, ಕಮಾಂಡ್ ಕಂಟ್ರೋಲ್ ವಾಹನ ನಿಯೋಜನೆ ಮಾಡಲಾಗಿದೆ. ಮೈದಾನದ ಸಂಪೂರ್ಣ ತಪಾಸಣೆಗೆ 7 AS ಚೆಕ್ ತಂಡ ನಿಯೋಜನೆ ಮಾಡಲಾಗಿದೆ. 9 ಡಿಸಿಪಿ ನೇತೃತ್ವದಲ್ಲಿ ಬಂದೋಬಸ್ತ್ ಕಾರ್ಯ ನಡೆಯಲಿದೆ 150 ಅಧಿಕಾರಿಗಳು, 943 ಸಿಬ್ಬಂದಿ ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ಬೆಂಗಳೂರಲ್ಲಿ ಅನುಮಾನವಾಗಿ ವಾಸ್ತವ್ಯ ಹೂಡುವವರ ಮೇಲೆ ನಿಗಾವಹಿಸಲಾಗಿದೆ. ಹೊಟೇಲ್, ಲಾಡ್ಜ್ ಗಳು, ತಂಗುದಾಣಗಳಲ್ಲಿ ನಿಗಾ ಇಡಲಾಗಿದೆ ಅಂತ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಅಲ್ಲದೆ ಮೈದಾನ ಸುತ್ತ 85 ಸಿಸಿ ಕ್ಯಾಮರಾ ಅಳವಡಿಕೆ ಮಾಡಿ ಹದ್ದಿನ ಕಣ್ಗಾವಲು ಇಡಲಾಗಿದೆ.

BNG 5 1

ಗಣರಾಜ್ಯೋತ್ಸವ ದಿನ ಮಾಣಿಕ್ ಷಾ ಮೈದಾನಕ್ಕೆ ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು, ಹರಿತವಾದ ವಸ್ತು, ಚಾಕು ಚೂರಿಗಳು, ಕಪ್ಪು ಕರವಸ್ತ್ರ, ಬಣ್ಣದ ದ್ರಾವಣ, ವಿಡಿಯೋ, ಸ್ಟಿಲ್ ಕ್ಯಾಮರಾ, ನೀರಿನ ಬಾಟಲ್, ಕ್ಯಾನ್, ಶಸ್ತ್ರಾಸ್ತ್ರಗಳು, ಮದ್ಯದ ಬಾಟಲ್, ತಿಂಡಿ-ತಿನಿಸು, ಬಾವುಟಗಳು, ಪಟಾಕಿ, ಸ್ಫೋಟಕ ವಸ್ತುಗಳು ಮೈದಾನದ ಒಳಗೆ ನಿಷೇಧ ಮಾಡಲಾಗಿದೆ.

ಗಣರಾಜ್ಯೋತ್ಸವ ದಿನದಂದು ವಾಹನ ಸಂಚಾರಕ್ಕೆ ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಮಿಸೋ ಗಣ್ಯರು, ಸಾರ್ವಜನಿಕರಿಗೆ 4 ಬಗೆಯ ಪಾಸ್ ನೀಡಲಾಗಿದೆ. ಅಲ್ಲದೆ ಎಲ್ಲರಿಗೂ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ನೀಡಲಾಗಿದೆ. ಭಾನುವಾರ ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಲೆ ಸರ್ಕಲ್ ನಿಂದ ಶಿವಾಜಿ ನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಓ ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ, ಎಂಜಿ ರೋಡ್, ಅನಿಲ್ ಕುಂಬ್ಳೆ ರಸ್ತೆಯಿಂದ ಕ್ವೀನ್ಸ್ ವೃತ್ತಿದ ವರೆಗೆ ವಾಹನ ನಿಲುಗಡೆ ನಿಷೇಧ ಹೇರಲಾಗಿದೆ.

BNG 8 1

ಭಾನುವಾರ ಬದಲಿ ರಸ್ತೆ ಮಾರ್ಗಗಳು:
* ಕಬ್ಬನ್ ಪಾರ್ಕ್, ಬಿವಿಆರ್ ಜಂಕ್ಷನ್ ಕಡೆಯಿಂದ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ಇನ್‍ಫೆಂಟ್ರಿ ರಸ್ತೆಗೆ ಬಂದು ಸಫೀನಾ ಪ್ಲಾಜಾದ ಬಳಿ ಎಡ ತಿರುವು ಪಡೆದು ಮೈನ್‍ಗಾರ್ಡ್ ರಸ್ತೆ ? ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡೆಕನ್‍ಸನ್ ರಸ್ತೆ ಜಂಕ್ಷನ್‍ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ ಜಂಕ್ಷನ ಬಳಿ ಎಡಕ್ಕೆ ತಿರುವು ಪಡೆದು ಮನಿಪಾಲ್ ಸೆಂಟರ್ ಗೆ ಹೋಗಬಹುದು.

* ಮಣಿಪಾಲ್ ಸೆಂಟರ್ ಕಡೆಯಿಂದ ಬಿಆರ್ ವಿ ಜಂಕ್ಷನ್ ಕಡೆ ಹೋಗುವ ವಾಹನಗಳು ಎಂ.ಜಿ.ರಸ್ತೆಗೆ ತೆರಳಿ ಅನಿಲ್‍ಕುಂಬ್ಳೆ ವೃತ್ತದಲ್ಲಿ ಎಡಕ್ಕೆ ತಿರುವು ಪಡೆಯುವ ಮೂಲಕ ಸಾಗಬಹುದು.

* ಭದ್ರತಾ ದೃಷ್ಟಿ ಹಿನ್ನೆಲೆ ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಮಾಣಿಕ್ ಷಾ ಮೈದಾನ ಸುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ.

bng 9 1

TAGGED:bengaluruManik Shah Parade GrounpolicePublic TVrepublic dayಗಣರಾಜ್ಯೋತ್ಸವಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಮಾಣಿಕ್ ಷಾ ಮೈದಾನ
Share This Article
Facebook Whatsapp Whatsapp Telegram

You Might Also Like

sonu nigam
Bengaluru City

ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್

Public TV
By Public TV
7 minutes ago
kamal haasan supreme court
Cinema

ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

Public TV
By Public TV
1 hour ago
IPS Shrinath Joshi
Bengaluru City

EXCLUSIVE | ಲೋಕಾಯುಕ್ತ ಲಂಚ ಪ್ರಕರಣಕ್ಕೆ ಡೈರಿ ಮಿಸ್ಟರಿ – ನಿಂಗಪ್ಪ ಮನೆಯಲ್ಲಿದ್ದ 2 ಡೈರಿ ರಿಕವರಿ

Public TV
By Public TV
42 minutes ago
D K Shivakumar 1
Bengaluru City

ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ: ಡಿಕೆಶಿ

Public TV
By Public TV
1 hour ago
Haryana model Crime
Crime

ಮಾಡೆಲ್ ಹತ್ಯೆ ಕೇಸ್ – ಗಂಡನ ಬಿಟ್ಟಿದ್ದ ರೂಪದರ್ಶಿಗೆ ನನ್ನ ಮದುವೆಯಾಗು ಅಂತ ಪೀಡಿಸ್ತಿದ್ದ 2 ಮಕ್ಕಳ ತಂದೆ

Public TV
By Public TV
1 hour ago
janardhan reddy anjanadri hill
Koppal

ಜೈಲು ಶಿಕ್ಷೆಗೆ ತಡೆಯಾಜ್ಞೆ ಸಿಗುತ್ತಿದ್ದಂತೆ ಅಂಜನಾದ್ರಿ ಬೆಟ್ಟದಲ್ಲಿ ಆಂಜಯೇಯ ದರ್ಶನ ಪಡೆದ ರೆಡ್ಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?