ಬೆಂಗಳೂರು: ಪೊಲೀಸ್ ಸ್ಟೇಷನ್ ಮೇಲೆ ರೌಡಿಗಳ ಅಟ್ಯಾಕ್ ಮಾಡಿದ್ದು, ಪೊಲೀಸ್ ಠಾಣೆಗೆ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗಿದೆ.
ಬೆಂಗಳೂರಿನ ಮಾರ್ಕೆಟ್ ನಲ್ಲಿರುವ ಪೊಲೀಸ್ ಠಾಣೆಗೆ ಏಕಾಏಕಿ ನುಗ್ಗಿರುವ ಸುಮಾರು 100 ರಿಂದ 200 ಮಂದಿ ಕಲ್ಲು ತೂರಾಟ ಮಾಡಿದ್ದಾರೆ. ಇದರ ಜೊತೆಗೆ ಪೊಲೀಸರು ಅರೆಸ್ಟ್ ಮಾಡಿ ಇಟ್ಟುಕೊಂಡಿದ್ದ ಮೂವರನ್ನು ಠಾಣೆಯಿಂದ ಕರೆದುಕೊಂಡು ಹೋಗಿದ್ದಾರೆ.
ಮಾರ್ಕೆಟ್ ಪೊಲೀಸರು ಮಾರುಕಟ್ಟೆಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದು ಓಡಾಡುತ್ತಿದ್ದ ಮೂವರನ್ನು ಬಂಧಿಸಿ ಠಾಣೆಗೆ ಕರೆತಂದಿದ್ದರು. ಇದಕ್ಕೆ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಠಾಣೆಗೆ ನುಗ್ಗಿ ಪೊಲೀಸರನ್ನು ಬೆದರಿಸಿ ಬಂಧಿಸಿದ್ದ ಮೂವರನ್ನು ಕರೆದುಕೊಂಡು ಹೋಗಿದ್ದಾರೆ. ಇದರ ಜೊತೆಗೆ ಠಾಣೆಯ ಮುಂದೆ ನಿಲ್ಲಿಸಿದ್ದ ಪೊಲೀಸರ ಬೈಕುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಈ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರೇ ಪ್ರಯತ್ನ ಪಟ್ಟಿದ್ದರು ಎನ್ನಲಾಗಿದೆ.